• ಹೋಂ
  • »
  • ನ್ಯೂಸ್
  • »
  • ಮನರಂಜನೆ
  • »
  • ವಿಷ್ಣುವರ್ಧನ್​ ಪುತ್ಥಳಿ ಧ್ವಂಸ ಮಾಡಿದವರಿಗೆ ಶಿಕ್ಷೆಯಾಗಲೇಬೇಕು ಎಂದ ದರ್ಶನ್​ ತೂಗುದೀಪ್​

ವಿಷ್ಣುವರ್ಧನ್​ ಪುತ್ಥಳಿ ಧ್ವಂಸ ಮಾಡಿದವರಿಗೆ ಶಿಕ್ಷೆಯಾಗಲೇಬೇಕು ಎಂದ ದರ್ಶನ್​ ತೂಗುದೀಪ್​

ದರ್ಶನ್

ದರ್ಶನ್

Darshan Thoogudeepa: ಕಿಡಿಗೇಡಿ ಕೆಲಸ ಮಾಡಿದ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ಅಷ್ಟೇ ಅಲ್ಲದೇ ಇಂತಹ ಹೀನ ಕೃತ್ಯಕ್ಕೆ ಕೈ ಜೋಡಿಸುವ ವ್ಯಕ್ತಿಗಳಿಗೆ ಅಭಿಮಾನಿಗಳೇ ತಕ್ಕ ಶಾಸ್ತಿ ಮಾಡುತ್ತಾರೆ

  • Share this:

    ಕೆಲ ಕಿಡಿಗೇಡಿಗಳು ಇಂದು ಮಾಗಡಿ ರಸ್ತೆಯ ಬಳಿ ಇರುವ ಬಾಲಗಂಗಾಧರನಾಥ ಸ್ವಾಮಿ ವೃತ್ತದಲ್ಲಿ ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಮಾಡಿ ವಿಕೃತಿ ಮೆರೆದಿದ್ದಾರೆ. ಈ ದುಷ್ಕೃತ್ಯಕ್ಕೆ ನಟ ದರ್ಶನ್​ ತೂಗುದೀಪ್​ ಕೂಡ ಆಕ್ರೋಶ ಹೊರ ಹಾಕಿದ್ದಾರೆ. ಕರ್ನಾಟಕದಲ್ಲಿ ಅತಿಯಾಗಿ ಪ್ರೀತಿಸುವ ನೆಚ್ಚಿನ ಆರಾಧ್ಯ ದೈವಗಳಲ್ಲಿ ಮೊದಲಿಗರಾಗಿರುವ ನಟ ವಿಷ್ಣುವರ್ಧನ್​ ಪುತ್ಥಳಿ ಧ್ವಂಸ ಮಾಡಿರುವ ಕಿಡಿಗೇಡಿಗಳ ಕೃತ್ಯ ನಾಚಿಕೆಯಾಗುವ ಸಂಗತಿ ಎಂದು ಕೃತ್ಯ ಎಸಗಿದವರ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೇ ಈ ಕಿಡಿಗೇಡಿ ಕೆಲಸ ಮಾಡಿದ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ಅಷ್ಟೇ ಅಲ್ಲದೇ ಇಂತಹ ಹೀನ ಕೃತ್ಯಕ್ಕೆ ಕೈ ಜೋಡಿಸುವ ವ್ಯಕ್ತಿಗಳಿಗೆ ಅಭಿಮಾನಿಗಳೇ ತಕ್ಕ ಶಾಸ್ತಿ ಮಾಡುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.



    ಮಾಗಡಿ ರಸ್ತೆಯ ಬಳಿ ಇರುವ ಬಾಲಗಂಗಾಧರನಾಥ ಸ್ವಾಮಿ ವೃತ್ತದಲ್ಲಿ ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ಕಳೆದ ಒಂದೂವರೆ ವರ್ಷದ ಹಿಂದೆ ಸ್ಥಾಪಿಸಲಾಗಿದ್ದ ವಿಷ್ಣು ಪ್ರತಿಮೆಯನ್ನು ಬೇರೆಡೆಗೆ ಸ್ಥಳಾಂತರ ಮಾಡುವ ಮಾತುಕತೆಯಾಗಿತ್ತು ಎಂದು ಹೇಳಲಾಗುತ್ತಿದೆ.


    ಇತ್ತೀಚೆಗೆ ತೆಲುಗು ನಟ ವಿಜಯ್ ರಂಗರಾಜು ವಿರುದ್ಧ ಇಡೀ ಸ್ಯಾಂಡಲ್​ವುಡ್ ತಿರುಗಿಬಿದ್ದಿತ್ತು. ಕನ್ನಡದ ಕಿರಿಯ ಸ್ಟಾರ್ ನಟರಿಂದ ಹಿಡಿದು ಹಿರಿಯರವರೆಗೆ ವಿಜಯ್ ರಂಗರಾಜು ನೀಡಿದ್ದ ಹೇಳಿಕೆಯನ್ನು ಹಿಂಪಡೆಯುವಂತೆ ಆಗ್ರಹಿಸಿದ್ದರು. ಕನ್ನಡ ಚಿತ್ರರಂಗದಲ್ಲಿ ತಮ್ಮ  ನಟನೆಯ ಮೂಲಕ ಛಾಪು ಮೂಡಿಸಿದ್ದ ನಟ ಡಾ. ವಿಷ್ಣುವರ್ಧನ್​ ಇಂದಿಗೂ ಅಭಿಮಾನಿಗಳ ಮನಸ್ಸಲ್ಲಿ ಚಿರವಾಗಿದ್ದಾರೆ. ಇಂತಹ ನಟನನ್ನು ತೆಲುಗು ಪೋಷಕ ನಟ ವಿಜಯ್ ರಂಗರಾಜು ನಿಂದಿಸಿ ಅಪಮಾನ ಮಾಡಿದ್ದು ಕನ್ನಡಿಗರನ್ನು ಕೆರಳಿಸಿತ್ತು. ಇನ್ನೂ ಈ ಘಟನೆ ಮನಸ್ಸಿನಿಂದ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ವಿಷ್ಣು ಅಭಿಮಾನಿಗಳಿಗೆ ನೋವು ಉಂಟುಮಾಡುವ ಘಟನೆಯೊಂದು ನಡೆದಿದೆ.

    Published by:Seema R
    First published: