ಬಾಲಿವುಡ್ನ ಖ್ಯಾತ ನಿರ್ದೇಶಕ ಓಂ ರಾವತ್ ಹಾಗೂ ಬಾಹುಬಲಿ ಪ್ರಭಾಸ್ ಅವರ ಕಾಂಬಿನೇಷನ್ನಲ್ಲಿ ಬರುತ್ತಿರುವ ಬಹುನಿರೀಕ್ಷಿತ ಸಿನಿಮಾ ಆದಿಪುರುಷ್. ಈ ಚಿತ್ರದಲ್ಲಿ ಪ್ರಭಾಸ್ ಶ್ರೀರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಕುರಿತಾಗಿ ನಿರ್ದೇಶಕ ಓಂ ರಾವತ್ ಹೇಳಿಕೆ ನೀಡಿದ್ದಾರೆ.
ಇತ್ತೀಚೆಗಷ್ಟೆ ಆದಿಪುರುಷ್ ಚಿತ್ರದ ಟೈಟಲ್ ಪೋಸ್ಟರ್ ಹಾಗೂ ಮೋಷನ್ ಪೋಸ್ಟರ್ ರಿಲೀಸ್ ಮಾಡಿದ್ದು, ಪ್ರಭಾಸ್ ಅಭಿಮಾನಿಗಳು ಅದನ್ನು ಟ್ವಿಟರ್ನಲ್ಲಿ ಟ್ರೆಂಡ್ ಮಾಡಿದ್ದರು. ಇನ್ನು ಸಿನಿಮಾದಲ್ಲಿ ಪ್ರಭಾಸ್ಗೆ ನಾಯಕಿ ಯಾರು ಅನ್ನೋ ಮಾತು ಈಗ ಚರ್ಚೆಯಲ್ಲಿದೆ. ಈ ಹಿಂದೆ ಪ್ರಭಾಸ್ ಜೊತೆ ಕೀರ್ತಿ ಸುರೇಶ್ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಈಗ ಬೇರೆ ನಟಿಯ ಹೆಸರು ಕೇಳಿ ಬರುತ್ತಿದೆ.
ಬಾಲಿವುಡ್ನಲ್ಲಿ ಈಗಾಗಲೇ ಸ್ಟಾರ್ ನಟರೊಂದಿಗೆ ತೆರೆ ಹಂಚಿಕೊಂಡಿರುವ ನಟಿ ಕಿಯಾರಾ ಈ ಸಲ ಪ್ರಭಾಸ್ಗೆ ಜೋಡಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಟಾಲಿವುಡ್ನಲ್ಲೂ ಕಿಯಾರಾ ಅವರ ಪರಿಚಯವಿದೆ. ಈಕಾರಣದಿಂದಲೇ ಕಿಯಾರಾ ಈ ಬಹುಭಾಷಾ ಸಿನಿಮಾಗೆ ಕಿಯಾರಾ ಉತ್ತಮ ಆಯ್ಕೆ ಎಂದು ಚಿತ್ರತಂಡ ನಿರ್ಧರಿಸಿದೆಯಂತೆ.
ಇನ್ನು, ರಾಮನ ಪಾತ್ರಕ್ಕಾಗಿ ಪ್ರಭಾಸ್ ಸಾಕಷ್ಟು ವರ್ಕೌಟ್ ಮಾಡುತ್ತಿದ್ದು, ತಮ್ಮ ದೇಹದ ಆಕಾರದ ಮೇಲೆ ತುಂಬಾ ಕೆಲಸ ಮಾಡುತ್ತಿದ್ದಾರಂತೆ. ಜೊತೆಗೆ ಬಿಲ್ಲುವಿದ್ಯೆ ಸಹ ಕಲಿಯಲಿದ್ದಾರೆ ಎಂದು ನಿರ್ದೇಶಕ ಓಂ ರಾವತ್ ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.
ಹಿಂದಿ, ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಸೇರಿದಂತೆ ಇತರೆ ಅಂತರರಾಷ್ಟ್ರೀಯ ಭಾಷೆಗಳಲ್ಲಿ ಈ ಸಿನಿಮಾ ತೆರೆಕಾಣಲಿದ್ದು, 3ಡಿಯಲ್ಲಿ ರಿಲೀಸ್ ಮಾಡುವ ಆಲೋಚನೆಯಲ್ಲಿದೆ ಚಿತ್ರತಂಡ. ಪ್ರಭಾಸ್ ಅಭಿನಯದ ಆದಿಪುರುಷ್ ಮುಂದಿನ ವರ್ಷ ಜನವರಿಯಿಂದ ಸೆಟ್ಟೇರಲಿದೆ.
ರಾಧಾಕೃಷ್ಣ ನಿರ್ದೇಶನದ ರಾಧೆ ಶ್ಯಾಮ್ ಸಿನಿಮಾದಲ್ಲಿ ಪ್ರಭಾಸ್ ಜೊತೆ ಪೂಜೆ ಹೆಗ್ಡೆ ನಟಿಸಿದ್ದು, ಇದು ಕೊರೋನಾ ಕಾರಣದಿಂದಾಗಿ ಚಿತ್ರೀಕರಣ ನಿಂತಿದೆ. ಸೆಪ್ಟೆಂಬರ್ನಲ್ಲಿ ಮತ್ತೆ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ರಾಧೆ ಶ್ಯಾಮ್ ನಂತರ ಪ್ರಭಾಸ್ ಹಾಗೂ ದೀಪಿಕಾ ಪಡುಕೋಣೆ ಅಭಿನಯಿಸಲಿರುವ ತ್ರಿಭಾಷೀಯ ಚಿತ್ರ ಸೆಟ್ಟೇರಲಿದ್ದು, ಇದನ್ನು ನಾಗ್ ಅಶ್ವಿನ್ ನಿರ್ದೇಶನ ಮಾಡಲಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ