ಕೊರೋನಾ ಸೋಂಕಿನಿಂದಾಗಿ ಎಲ್ಲೆಡೆ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸೋಂಕು ಹರಡದಂತೆ ನೋಡಿಕೊಳ್ಳುವ ಜವಾಬ್ದಾರಿ ಜನರ ಮೇಲಿದೆ. ಇದೇ ಕಾರಣಕ್ಕೆ ದೇಶದಾದ್ಯಂತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಕೊರೋನಾ ಸೋಂಕು ಹರಡದಂತೆ ವಹಿಸಿರುವ ಮುನ್ನೆಚ್ಚರಿಕಾ ಕ್ರಮಗಳಲ್ಲಿ ಜನತಾ ಕರ್ಫ್ಯೂ ಸಹ ಒಂದು. ಕಳೆದ ಭಾನುವಾರ ಇಡೀ ದೇಶದಲ್ಲಿ ಜನತಾ ಕರ್ಫ್ಯೂಗೆ ಪ್ರಧಾನಿ ಮೋದಿ ಅವರು ಕರೆ ನೀಡಿದ್ದರು. ಅದು ಬಹುತೇಕ ಯಶಸ್ವಿಯಾಗಿತ್ತು.
ಕೊರೋನಾ ಹರಡದಂತೆ ಶ್ರಮವಹಿಸಿ ದುಡಿಯುತ್ತಿರುವ ಎಲ್ಲರಿಗೂ ಜನತಾ ಕರ್ಫ್ಯೂ ಮಾಡಿದ ದಿನದಂದು ಸಂಜೆ ಚಪ್ಪಾಳೆ ತಟ್ಟಿ ಶ್ಲಾಘಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದರು. ಇದಕ್ಕೆ ದೊಡ್ಡ ಮಟ್ಟದಲ್ಲೇ ಪ್ರತಿಕ್ರಿಯೆ ಸಿಕ್ಕಿತ್ತು. ಇದಕ್ಕೆ ಸಾಕಷ್ಟು ಮಂದಿ ಸೆಲೆಬ್ರಿಟಿಗಳೂ ಚಪ್ಪಾಳೆ ತಟ್ಟುವ ಮೂಲಕ ತಮ್ಮ ಬೆಂಬಲ ಸೂಚಿಸಿದ್ದರು.
ಇದನ್ನೂ ಓದಿ: Darshan: ಕೊರೋನಾ ವಿಷಯದಲ್ಲಿ ಜವಾಬ್ದಾರಿಯುತ ನಾಗರಿಕರಾಗಿ ವರ್ತಿಸಿ ಎಂದ ದರ್ಶನ್ ..!
ಭಾನುವಾರ ಬೆಂಗಳೂರಿನಲ್ಲಿ ರಾಕಿಂಗ್ ದಂಪತಿಯ ಮುದ್ದಿನ ಮಗಳು ಆಯ್ರಾ ತನ್ನ ಅಜ್ಜಿ ಜೊತೆ ಚಪ್ಪಾಳೆ ತಟ್ಟುವ ಮೂಲಕ ಕೊರೋನಾ ವಿಷಯವಾಗಿ ಶ್ರಮಿಸುತ್ತಿರುವವರಿಗೆ ಗೌರವ ಸೂಚಿಸಿದ್ದಾರೆ. ಈ ವಿಡಿಯೋ ರಾಧಿಕಾ ಪಂಡಿತ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಅದು ವೈರಲ್ ಆಗಿದೆ.
Kiara Advani: ಅರೆನಗ್ನರಾಗಿ ಫೋಟೋಶೂಟ್ಗೆ ಪೋಸ್ ಕೊಟ್ಟಿದ್ದ ಕಿಯಾರಾ ಈಗ ಅಂಗಿಯ ಬಟನ್ ತೆಗೆದು ಸುದ್ದಿಯಲ್ಲಿದ್ದಾರೆ..!
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ