ರಾಜಮೌಳಿ ನಿರ್ದೇಶನದಲ್ಲಿ ಜೂನಿಯರ್ ಎನ್ಟಿಆರ್ ಹಾಗೂ ರಾಮ್ ಚರಣ್ ತೇಜ ತೆರೆ ಹಂಚಿಕೊಳ್ಳುತ್ತಿರುವ ಸಿನಿಮಾ ಆರ್ಆರ್ಆರ್. ಬಾಹುಬಲಿ ನಂತರ ರಾಜಮೌಳಿ ಅವರು ನಿರ್ದೇಶನ ಮಾಡುತ್ತಿರುವ ಚಿತ್ರ ಇದಾಗಿದ್ದು, ಇದರ ಬಗ್ಗೆ ಸಿನಿಪ್ರಿಯರಲ್ಲಿ ಸಾಕಷ್ಟು ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಚಿತ್ರದ ಬಗ್ಗೆ ರಾಜಮೌಳಿ ಅವರ ನಿರ್ದೇಶನದಿಂದಾಗಿ ಟಾಲಿವುಡ್ ಮಾತ್ರವಲ್ಲದೆ ಬೇರೆ ಭಾಷೆಗಳ ಚಿತ್ರರಂಗವರಿಗೂ ತುಂಬಾ ಕುತೂಹಲವಿದೆ. ಬಾಹುಬಲಿ ಸಿನಿಮಾದಿಂದಾಗಿ ರಾಜಮೌಳಿ ಅವರ ನಿರ್ದೇಶನದ ಸಿನಿಮಾಗಳ ಮೇಲೆ ಎಲ್ಲರ ಗಮನ ನೆಟ್ಟಿದೆ. ಎಲ್ಲ ಸರಿಯಾಗಿದಿದ್ದರೆ, ಈಗಾಗಲೇ ಆರ್ಆರ್ಆರ್ ರಿಲೀಸ್ ಆಗಿರುತ್ತಿತ್ತು. ಆದರೆ ಕೊರೋನಾ ಕಾರಣದಿಂದಾಗಿ ಸಿನಿಮಾ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿತ್ತು. ಲಾಕ್ಡೌನ್ ಸಡಿಲಗೊಂಡ ಕೂಡಲೇ ರಾಜಮೌಳಿ ಹಾಗೂ ಅವರ ತಂಡ ಶೂಟಿಂಗ್ ಆರಂಭಿಸಿತು. ಸಿನಿಮಾದ ನಿರ್ಮಾಪಕ ದಾನಯ್ಯ, ನಿರ್ದೇಶಕ ರಾಜಮೌಳಿ ಹಾಗೂ ರಾಮ್ ಚರಣ್ಗೆ ಕೋವಿಡ್ ಸೋಂಕಾಗಿದ್ದ ಕಾರಣ ಶೂಟಿಂಗ್ ಮತ್ತಷ್ಟು ತಡವಾಯಿತು. ಈಗ ಚಿತ್ರತಂಡ ಕಡೆಗೂ ಹೊಸ ರಿಲೀಸ್ ದಿನಾಂಕ ಪ್ರಕಟಿಸಿದೆ.
ಇದ್ದ ಎಲ್ಲ ಅಡೆತಡೆಗಳು ನಿವಾರಣೆಯಾಗಿದ್ದು, ಇತ್ತೀಚೆಗಷ್ಟೆ ರಾಜಮೌಳಿ ಅವರು ಆರ್ಆರ್ಆರ್ ಸಿನಿಮಾದ ಕ್ಲೈಮ್ಯಾಕ್ಸ್ ಚಿತ್ರೀಕರಣದ ಅಪ್ಡೇಟ್ ಕೊಟ್ಟಿದ್ದರು. ಈಗ ಇದೇ ಚಿತ್ರಂಡ ಸಿನಿಮಾದ ರಿಲೀಸ್ ದಿನಾಂಕ ಪ್ರಕಟಿಸಿದೆ.
View this post on Instagram
View this post on Instagram
View this post on Instagram
View this post on Instagram
ಇದನ್ನೂ ಓದಿ: Jayashree Ramaiah: ಬಿಗ್ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ
ಅಂದಾಜು 400 ಕೋಟಿ ಬಜೆಟ್ನಲ್ಲಿ ಆರ್ಆರ್ಆರ್ ಸಿನಿಮಾ ರಿಲೀಸ್ ಆಗಲಿದೆ. ಇದರಲ್ಲಿ ಹಾಲಿವುಡ್ ಹಾಗೂ ಬಾಲಿವುಡ್ ಸ್ಟಾರ್ಗಳೂ ನಟಿಸುತ್ತಿದ್ದಾರೆ. ಬಾಲಿವುಡ್ನ ಆಲಿಯಾ ಭಟ್ ಹಾಗೂ ಅಜಯ್ ದೇವಗನ್ ಸಹ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಒಲಿವಿಯಾ ಮೊರಿಸ್ ಸಹ ತಾರಾಗಣದಲ್ಲಿದ್ದಾರೆ. ಈ ಸಿನಿಮಾ ಕ್ಲೈಮ್ಯಾಕ್ಸ್ ಚಿತ್ರೀಕರಿಸುವ ಹಂತ ತಲುಪಿದ್ದಕ್ಕೆ ಅಭಿಮಾನಿಗಳು ಖುಷಿಯಲ್ಲಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ