ನಟ ಹಾಗೂ ನಿರ್ದೇಶಕನಾಗಿ ಸ್ಯಾಂಡಲ್ವುಡ್ನಲ್ಲಿ (Sandalwood) ಖ್ಯಾತಿ ಗಳಿಸಿರುವ ರಿಷಭ್ ಶೆಟ್ಟಿ (Rishab Shetty) ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಲಾಕ್ಡೌನ್ನಲ್ಲೇ (Lockdown) ಒಂದು ಸಿನಿಮಾವನ್ನು (Film) ಮಾಡಿ ಪೂರ್ಣಗೊಳಿಸಿರುವ ಪ್ರತಿಭಾವಂತ ಕಲಾವಿದ. ಇತ್ತೀಚೆಗಷ್ಟೆ ಗರುಡ ಗಮನ ವೃಷಭ ವಾಹನ ಸಿನಿಮಾ ಮೂಲಕ ತೆರೆಯ ಮೇಲೆ ಮೋಡಿ ಮಾಡಿದ್ದಾರೆ. ಒಂದರ ಹಿಂದೆ ಒಂದರಂತೆ ತಮ್ಮ ಪ್ರಾಜೆಕ್ಟ್ಗಳನ್ನು ಪೂರ್ಣಗೊಳಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಹೊಂಬಾಳೆ ಫಿಲ್ಮ್ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಂತಾರ (Kantara) ಚಿತ್ರದ ಶೂಟಿಂಗ್ ನಲ್ಲಿ ಬ್ಯೂಸಿ ಆಗಿದ್ದಾರೆ. ಆದರೆ ಇದೀಗ ರಿಷಭ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಇದ್ದು, ಬಹು ನಿರೀಕ್ಷಿತ ಚಿತ್ರ ಹರಿ ಕತೆಯಲ್ಲ ಗಿರಿ ಕತೆ ಸಿನಿಮಾದ ಟ್ರೆಲರ್ ಇಂದು ಬಿಡುಗಡೆಯಾಗಲಿದೆ.
ಸಂಜೆ 4 ಗಂಟೆಗೆ ಟ್ರೈಲರ್ ರಿಲೀಸ್
ಹೌದು, ರಿಷಭ್ ಶೆಟ್ಟಿ ಅಭಿನಯದ ಈ ಸಿನಿಮಾದ ಟ್ರೇಲರ್ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ಸಂಜೆ 4 ಗಂಟೆಗೆ ಬಿಡುಗಡೆಯಾಗಲಿದ್ದು, ಈ ಬಗ್ಗೆ ಆನಂದ್ ಆಡಿಯೋ ಕಂಪನಿ ಸ್ವತಃ ಟ್ವಿಟ್ಟರ್ನಲ್ಲಿ ಮಾಹಿತಿ ನೀಡಿದೆ. ಈಗಾಗಲೇ ಈ ಸಿನಿಮಾದ ಹಾಡೊಂದು ಬಿಡುಗಡೆಯಾಗಿ ಸದ್ದು ಮಾಡಿದ್ದು, ಜನರಿಗೆ ಬಹಳ ಇಷ್ಟವಾಗಿದೆ. ಇದು ಹರಿಕಥೆ ಅಲ್ಲ ಗಿರಿಕಥೆ ಚಿತ್ರದ ಮೊದಲ ವಿಡಿಯೋ ಸಾಂಗ್ ಆಗಿದ್ದು, ಜೂ. ಮೊನಾಲಿಸಾ ಎಂಬ ವಿಡಿಯೋ ಸಾಂಗ್ ಅದ್ಭುತವಾಗಿದೆ ಎಂಬ ಪ್ರತಿಕ್ರಿಯೆ ಬಂದಿತ್ತು.
ಈ ಹಾಡಿನಲ್ಲಿ, ರಿಷಭ್ ಶೆಟ್ಟಿ ನಾಯಕಿಗಾಗಿ ವಿಭಿನ್ನವಾಗಿ ಪ್ರೀತಿಯ ನಿವೇದನೆ ಮಾಡಿಕೊಳ್ಳುವ ರೀತಿಯಲ್ಲಿ ಚಿತ್ರಿಸಲಾಗಿದೆ. ಇದೊಂದು ಪಕ್ಕಾ ಕಾಮಿಡಿ ಓರಿಯೆಂಟೆಡ್ ಸಿನಿಮಾವಾಗಿದ್ದು, ವಿಡಿಯೋ ಸಾಂಗ್ ಸಹ ಅದೇ ರೀತಿಯಲ್ಲಿ ಮಜವಾಗಿ ಮೂಡಿಬಂದಿದೆ. ಹರಿಕಥೆ ಅಲ್ಲ ಗಿರಿಕಥೆ ಚಿತ್ರಕ್ಕೆ ಅಜನಿಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಆದರೆ ಜೂ. ಮೊನಾಲಿಸಾ ಹಾಡಿಗೆ ವಾಸುಕಿ ಸಂಗೀತ ನೀಡಿದ್ದು, ಕಂಠದಾನವನ್ನೂ ಮಾಡಿದ್ದಾರೆ.
ಇದನ್ನೂ ಓದಿ: Kantara Film: ಬಿಡುಗಡೆಗೆ ಸಿದ್ದವಾಯ್ತು ಕಾಂತಾರ, ಕಂಬಳದ ಕಿಚ್ಚು ಹತ್ತಿಸಲು ರೆಡಿಯಾದ ರಿಷಭ್
ಈಗಾಗಲೇ ಲಿರಿಕಲ್ ಹಾಡು ಮೋಡಿ ಮಾಡುತ್ತಿದೆ
ತ್ರಿಲೋಕ್ ತ್ರಿವಿಕ್ರಮ್ ಈ ಹಾಡಿಗೆ ಸಾಹಿತ್ಯ ಬರೆದಿದ್ದು, ಪ್ರತಿಯೊಂದು ಸಾಲುಗಳು ಸಖತ್ ಕ್ಯಾಚಿಯಾಗಿದ್ದು, ಸೂಪರ್ ಟೂನಿಂಗ್ ಸಹ ಕೇಳುಗರಿಗೆ ಮುದ ನೀಡುತ್ತದೆ. ಸಿನಿಮಾದ ನಾಯಕಿಯಾಗಿ ಹೊಸ ಪ್ರತಿಭೆ ತಪಸ್ವಿನಿ ಪೂಣಚ್ಚ ಅವರನ್ನು ಆಯ್ಕೆ ಮಾಡಲಾಗಿದೆ. ತಪಸ್ವಿನಿ ಪೂಣಚ್ಚ ಈ ಸಿನಿಮಾದಲ್ಲಿ ರಿಷಭ್ ಶೆಟ್ಟಿ ಅವರಿಗೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಈ ಸಿನಿಮಾದಲ್ಲಿ ಮತ್ತೋರ್ವ ನಾಯಕಿಯೂ ಇದ್ದಾರೆ. ಅವರೇ ಲವ್ ಮಾಕ್ಟೇಲ್ ಸಿನಿಮಾದಲ್ಲಿ ಆದಿತಿ ಪಾತ್ರದಲ್ಲಿ ನಟಿಸಿರುವ ರಚನಾ ಇಂದರ್.
ಒಟ್ಟಿನಲ್ಲಿ ರಿಷಭ್ ಈ ಚಿತ್ರದಲ್ಲಿ ಇಬ್ಬರು ನಾಯಕಿಯರೊಂದಿಗೆ ಕಾಣಿಸಿಕೊಳ್ಳಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ರಿಷಭ್ ಶೆಟ್ಟಿ ಅಭಿನಯದ ಹರಿಕಥೆ ಅಲ್ಲ ಗಿರಿಕಥೆ ಚಿತ್ರಕ್ಕೆ ಕರಣ್ ಅನಂತ್ ಮತ್ತು ಅನಿರುದ್ಧ ಇಬ್ಬರು ನಿರ್ದೇಶನ ಮಾಡಿದ್ದಾರೆ. ಇನ್ನು, ರಿಷಭ್ ಗೆ ಜೋಡಿಯಾಗಿ ತಪಸ್ವಿನಿ ಪೂಣಚ್ಚ ಮತ್ತು ರಚನಾ ಇಂದರ್ ಕಾಣಿಸಿಕೊಳ್ಳಲಿದ್ದಾರೆ. ಇವರಲ್ಲದೇ ಪ್ರಮೋದ್ ಶೆಟ್ಟಿ ಅಭಿನಯಿಸಿದ್ದು, ಸಂದೇಶ್ ನಾಗರಾಜ್ ಬಂಡವಾಳ ಹೂಡಿದ್ದಾರೆ.
ಇದನ್ನೂ ಓದಿ: Harikathe Alla Girikathe: ಜೂನಿಯರ್ ಮೊನಾಲಿಸಾ ಹಿಂದೆ ಬಿದ್ದ ಶೆಟ್ರು, ಹರಿಕಥೆ ಅಲ್ಲ ಗಿರಿಕಥೆ ಚಿತ್ರದ ಮೊದಲ ವಿಡಿಯೋ ಸಾಂಗ್ ರಿಲೀಸ್
ಕಾಂತಾರ ಚಿತ್ರದ ಟೀಸರ್ ಈಗಾಗಲೇ ಬಿಡುಗಡೆಯಾಗಿದ್ದು, ಎಲ್ಲಡೆ ಮೆಚ್ಚುಗೆ ವ್ಯಕ್ತವಾಗಿದೆ. ರಿಷಬ್ ಶೆಟ್ಟಿ ಕರಾವಳಿ ಭಾಗದ ಗ್ರಾಮೀಣ ಯುವಕನಾಗಿ ಕಾಣಿಸಿಕೊಂಡಿದ್ದಾರೆ. ಕರಾವಳಿಯ ಧಾರ್ಮಿಕ ಆಚಾರ ವಿಚಾರ, ಸಂಪ್ರದಾಯ, ಆಚರಣೆಗಳನ್ನು ನಂಬಿಕೊಂಡು ಬರುತ್ತಿರುವ ಸಮುದಾಯಕ್ಕೆ ಪೊಲೀಸ್ ಆಫೀಸರ್ ಆಗಿರುವ ಕಿಶೋರ್ ಸೆಡ್ಡು ಹೊಡೆಯುತ್ತಾರೆ. ಪೊಲೀಸ್ ಅಧಿಕಾರಿ ಮತ್ತು ಕರಾವಳಿ ಯುವಕನ ನಡುವಿನ ತಿಕ್ಕಾಟಗಳು ಚಿತ್ರವನ್ನು ತುದಿಗಾಲಲ್ಲಿ ಕುಳಿತು ನೋಡುವಂತೆ ಮಾಡುತ್ತವೆ ಎಂದು ಟೀಸರ್ ನೋಡಿ ಅನಿಸುತ್ತದೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ