ಸ್ಯಾಂಡಲ್ವುಡ್ನಲ್ಲಿ ಮಾದಕ ದ್ರವ್ಯ ಜಾಲದಲ್ಲಿ ನಟ-ನಟಿಯರು, ಸಂಗೀತ ನಿರ್ದೇಶಕರು ಭಾಗಿಯಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನವರಸ ನಾಯಕ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
ಟ್ವೀಟ್ನಲ್ಲಿ ಜಗ್ಗೇಶ್, ‘ಸರಿಯಾಗಿ ಬಾಳಿ ಬದುಕುವ ನಿರ್ಧಾರ ಮಾಡಿ ಶ್ರಮಿಸುವರು ಎಲ್ಲೆ ಇದ್ದರು ಶ್ರೇಷ್ಠವಾಗಿ ಉಳಿಯುತ್ತಾರೆ. ನಾನು ನನ್ನಿಷ್ಟ. ನನ್ನ ಬದುಕು ಎನ್ನುವರ ಮಠಕ್ಕೆ ಸೇರಿಸಿದರು ನಶೆ ಹಾದರದ ಬಿಸಿ ಹೆಂಚಿನಮೇಲೆ ಸ್ವಲ್ಪ ಕಾಲ ಬದುಕಿ ವಿಕೃತ ಆನಂದ ಅನುಭವಿಸಿ ಸೀದುಹೋಗುತ್ತಾರೆ. ಏಕ್ ಮಾರ್ ದೋ ತಕುಡ ತಪ್ಪುಮಾಡಿದವರ ಬೆತ್ತಲೆ ಮಾಡಿ. ಆಗಲಾದರು ಜನಕ್ಕೆ ಅರಿವಾಗಲಿ’ ಎಂದು ಬರೆದುಕೊಂಡಿದ್ದಾರೆ.
ಸರಿಯಾಗಿ ಬಾಳಿಬದುಕುವ ನಿರ್ದಾರ ಮಾಡಿ ಶ್ರಮಿಸುವರು ಎಲ್ಲೆ ಇದ್ದರು ಶ್ರೇಷ್ಠವಾಗಿ ಉಳಿಯುತ್ತಾರೆ!
ನಾನು ನನ್ನಿಷ್ಟ! ನನ್ನ ಬದುಕು ಎನ್ನುವರ ಮಠಕ್ಕೆ ಸೇರಿಸಿದರು
ನಶೆ ಹಾದರದ ಬಿಸಿ ಹೆಂಚಿನಮೇಲೆ ಸ್ವಲ್ಪ ಕಾಲಬದುಕಿ
ವಿಕೃತ ಆನಂದ ಅನುಭವಿಸಿ ಸೀದುಹೋಗುತ್ತಾರೆ!
ಏಕ್ ಮಾರ್ ದೋ ತಕಡ
ತಪ್ಪುಮಾಡಿದವರ ಬೆತ್ತಲೆ ಮಾಡಿ!ಆಗಲಾದರು ಜನಕ್ಕೆ ಅರಿವಾಗಲಿ!
— ನವರಸನಾಯಕ ಜಗ್ಗೇಶ್ (@Jaggesh2) August 29, 2020
ಬಲವಂತಕ್ಕೆ 2017 ಒಬ್ಬ ರಾಜಕಾರಣಿ #party ಗೆ ಹೋಗಿದ್ದೆ!ಅರ್ಧಘಂಟೆಗೆ ಆ ಜಾಗ ಅಲ್ಲಿದ್ದವರ ಆರ್ಭಟ!ಬಂದುಸೇರಿದ ಅರ್ಧಉಡುಗೆ ಸುಂದರಿಯರು!ಅದಕಂಡು ನಾನು ನನ್ನ ಆತ್ಮೀಯ ಯುವನಟ
ಗ....!ಹೇಳದೆಕೇಳದೆ ಲಿಫ್ಟು ಬಳಸದೆ 12ಮಹಡಿ ಇಳಿದು ಓಡಿದೆವು!ಅದೆಕಡೆ ಇಂದಿಗು ನನಗೆ ಯಾರು ಕರೆಮಾಡದಂತೆ ಮೊಬೈಲ್ ವರ್ಜಿಸಿದೆ!
ಅಲ್ಲಿದ್ದವರು ಸಮಾಜದ ಎಲ್ಲ ಮುಖಗಳು! pic.twitter.com/v8ePtIwXHX
— ನವರಸನಾಯಕ ಜಗ್ಗೇಶ್ (@Jaggesh2) August 29, 2020
‘
ಶ್ರೇಷ್ಠ ಮನುಜನ್ಮ!ಅದುನಶ್ವರ ಸತ್ಯ!ಆದರು ಆ ನಶ್ವರದೇಹ ನಶಿಸುವಮುನ್ನ ಸಾರ್ಥಕಪಡಿಸಿ ಬದುಕಬೇಕು!ನಶೆ ಹಾದರದ ಹಿಂದೆ ಬರಿ ಸಿನಿಮ ಅಲ್ಲಾ ಸಮಾಜವೆ ಆಕರ್ಷಶಿತ ಆಗುತ್ತಿದೆ! ಯಾರು ಶ್ರಮಪಟ್ಟು ಜೀವನ ಗೆದ್ದಿರುತ್ತಾರೆ ಅವರ ಹೆಜ್ಜೆ ತಪ್ಪುದಾರಿ ತುಳಿಯದು!ಯಾರು ವಾಮಮಾರ್ಗದಲ್ಲಿ ಗೆದ್ದಿರುತ್ತಾರೆ ಅವರೆ ನಶೆಹಾದರದ ದಾಸರು!ಉಪ್ಪುತಿಂದವ ನೀರುಕುಡಿಯುವ! pic.twitter.com/6M97EZ7UP0
— ನವರಸನಾಯಕ ಜಗ್ಗೇಶ್ (@Jaggesh2) August 29, 2020
ಮಾದಕ ದ್ರವ್ಯದ ತನಿಖೆಯ ಹೊಣೆಯನ್ನು ಎಸ್ಸಿಬಿ ಹೆಚ್ಚುವರಿ ಅಧಿಕಾರಿ ಮಲ್ಹೋತ್ರ ವಹಿಸಿಕೊಂಡಿದ್ದಾರೆ. ಯಾವ ನಟ-ನಟಿಯರು ಡ್ರಗ್ಸ್ ಅಡಿಕ್ಟ್ ಆಗಿದ್ದಾರೆ ಎಂಬ ಮಾಹಿತಿಯ ಮೇರೆಗೆ ತನಿಖೆ ನಡೆಸುತ್ತಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ