ಸ್ಯಾಂಡಲ್ವುಡ್(Sandalwood)ನ ಹಿರಿಯ ನಿರ್ದೇಶಕ(Senior Director) ಕೆ.ವಿ.ರಾಜು (KV Raju) ನಿಧನರಾಗಿದ್ದಾರೆ. ಕನ್ನಡ ಹಾಗೂ ಹಿಂದಿಯಲ್ಲಿ ತಮ್ಮದೇ ಚಾಪು ಮೂಡಿಸಿದ್ದ ಹಿರಿಯ ನಿರ್ದೇಶಕ ಕೆ.ವಿ.ರಾಜು ಇಹಲೋಕ ತ್ಯಜಿಸಿದ್ದಾರೆ. ಹುಲಿಯಾ, ಬೆಳ್ಳಿ ಮೋಡ, ಇಂದ್ರಜಿತ್, ಬೆಳ್ಳಿ ಕಾಲುಂಗುರ, ಯುದ್ಧಕಾಂಡ ಸೇರಿ ಹಲವು ಚಿತ್ರಗಳನ್ನು ಅವರು ನಿರ್ದೇಶಿಸಿದ್ದರು. ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ಚಿತ್ರಕ್ಕೂ ಅವರು ನಿರ್ದೇಶಿಸಿದ್ದರು. ಅನಾರೋಗ್ಯದ ಕಾರಣ ಕೆಲವು ದಿನಗಳಿಂದ ಮನೆಯಲ್ಲಿಯೇ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ರಾಜಾಜಿನಗ(Rajajinagar)ರದ ನಿವಾಸದಲ್ಲಿ ಬೆಳಗ್ಗೆ 8 ಗಂಟೆಗೆ ನಿಧನರಾಗಿದ್ದಾರೆ. ರಾಜಾಜಿನಗರದ ನಿವಾಸದಲ್ಲಿ ರಾಜು ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಇನ್ನೂ ಹಿರಿಯ ನಿದೇರ್ಶಕ ಸಾವಿಗೆ ಸ್ಯಾಂಡಲ್ವುಡ್ ಕಲಾವಿದರು ಕಂಬನಿ ಮಿಡಿಯುತ್ತಿದ್ದಾರೆ. ಈಗಾಗಲೇ ಸಾಲುಸಾಲು ಆಘಾತದಿಂದ ಕುಗ್ಗಿರುವ ಕನ್ನಡ ಚಿತ್ರರಂಗ, ಹಿರಿಯ ನಿರ್ದೇಶಕ, ಬರಹಗಾರ ರಾಜು ಅವರ ನಿಧನದಿಂದ ಮತ್ತಷ್ಟು ಬಡವಾಗಿದೆ. ಈಗಾಗಲೇ ಸಾಲುಸಾಲು ಆಘಾತದಿಂದ ಕುಗ್ಗಿರುವ ಕನ್ನಡ ಚಿತ್ರರಂಗ, ಹಿರಿಯ ನಿರ್ದೇಶಕ, ಬರಹಗಾರ ರಾಜು ಅವರ ನಿಧನದಿಂದ ಮತ್ತಷ್ಟು ಬಡವಾಗಿದೆ.
ಕೆ.ವಿ.ರಾಜು ನಡೆದು ಬಂದ ಹಾದಿ!
ಕೆ.ವಿ ರಾಜು ಅವರು ಚಿತ್ರರಂಗದಲ್ಲಿ ನಿರ್ದೇಶಕ, ಬರಹಗಾರ ಮತ್ತು ಚಿತ್ರಕಥೆಗಾರರಾಗಿ ಗುರುತಿಸಿಕೊಂಡಿದ್ದರು. ಖ್ಯಾತ ನಿರ್ದೇಶಕ ಕೆವಿ ಜಯರಾಮ್ ಅವರ ಸಹೋದರರಾಗಿದ್ದ ಕೆವಿ ರಾಜು, 1982 ರಲ್ಲಿ ‘ಬಾಡದ ಹೂ’ ಚಿತ್ರದಲ್ಲಿ ತಮ್ಮ ಸಹೋದರನಿಗೆ ಸಹಾಯಕ ನಿರ್ದೇಶಕರಾಗುವ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದರು. 1984 ರ ‘ಒಲವೇ ಬದುಕು’ ಮೂಲಕ ಅವರು ಬರಹಗಾರ ಹಾಗೂ ನಿರ್ದೇಶಕನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು. ಕೆಲವೇ ವರ್ಷಗಳಲ್ಲಿ ಚಿತ್ರರಂಗದ ಹಿಟ್ ನಿರ್ದೇಶಕರಾಗಿ ಅವರು ಜನಮೆಚ್ಚುಗೆ ಪಡೆದರು. ಸಂಗ್ರಾಮ (1987), ಬಂಧ ಮುಕ್ತ (1987), ಯುದ್ಧಕಾಂಡ (1989), ಬೆಳ್ಳಿ ಮೋಡಗಳು, ಬೆಳ್ಳಿ ಕಾಲುಂಗುರ, ಮುಂತಾದ ಚಿತ್ರಗಳ ಮೂಲಕ ಅವರು ಬ್ಲಾಕ್ ಬಸ್ಟರ್ ನಿರ್ದೇಶಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಇದನ್ನು ಓದಿ : ಬಾಲಯ್ಯನ ಎದುರು ತೊಡೆ ತಟ್ಟಲಿರುವ ಸ್ಯಾಂಡಲ್ವುಡ್ `ಸಲಗ’: ವಿಲನ್ ಲುಕ್ ರಿವೀಲ್!
ಅಮಿತಾಭ್ ಬಚ್ಚನ್ಗೆ ಆ್ಯಕ್ಷನ್ ಕಟ್ ಹೇಳಿದ್ದ ಕೆ.ವಿ.ರಾಜು
1991ರಲ್ಲಿ ‘ಇಂದ್ರಜಿತ್’ ಚಿತ್ರದ ಮೂಲಕ ಬಾಲಿವುಡ್ಗೂ ಕೆವಿ ರಾಜು ಪ್ರವೇಶಿಸಿದ್ದರು. ಅಮಿತಾಭ್ ಬಚ್ಚನ್ ಹಾಗೂ ಜಯಪ್ರದಾ ಆ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಇದಲ್ಲದೇ ಮತ್ತೆರಡು ಹಿಂದಿ ಚಿತ್ರಗಳಿಗೂ ಅವರು ಆಕ್ಷನ್ ಕಟ್ ಹೇಳಿದ್ದರು. ಕಾಲಾನಂತರದಲ್ಲಿ ರಾಜು ಅವರು ಸಂಭಾಷಣೆ ಹಾಗೂ ಬರಹಗಾರರಾಗಿ ಗುರುತಿಸಿಕೊಂಡರು. 2017ರಲ್ಲಿ ತೆರೆಗೆ ಬಂದ ಕನ್ನಡದ ‘ಟೈಗರ್ ಗಲ್ಲಿ’ ಚಿತ್ರಕ್ಕೆ ಅವರು ಚಿತ್ರಕತೆ ಹಾಗೂ ಸಂಭಾಷಣೆ ರಚಿಸಿದ್ದರು.
ಇದನ್ನು ಓದಿ : ಈ ವರ್ಷ ಚಿತ್ರರಂಗದಲ್ಲಿ ಹೊಸ ಕ್ರಾಂತಿ ಸೃಷ್ಟಿಸಿದ ಸಿನಿಮಾಗಳು ಇವೆ..
ಬ್ಲಾಕ್ಬ್ಲಸ್ಟರ್ ನಿರ್ದೇಶಕ ಎನಿಸಿಕೊಂಡಿದ್ದ ಕೆ.ವಿ.ರಾಜು
1990ರಿಂದ 2006 ರವರೆಗೂ ಕೆ.ವಿ ರಾಜು ನಿರ್ದೇಶನ ಮಾಡಿದ್ದಾರೆ. ನವಭಾರತ ಸಿನಿಮಾ ನಿರ್ದೇಶನ ಮಾಡುವ ಮೂಲಕ ಕೆ.ವಿ.ರಾಜು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ನಂತರ ಇವರು ಮಾಡಿದ ಸಿನಿಮಾಗಳೆಲ್ಲ ಬ್ಲಾಕ್ಬಸ್ಟರ್ ಎನಿಸಿಕೊಂಡಿದ್ದವು. 2006ರಲ್ಲಿ ಅಂಬರೀಶ್ ಅವರ ಜೊತೆ ಪಾಂಡವರು ಎಂಬ ಸಿನಿಮಾ ಮಾಡಿದ್ದರು. 2021ರಲ್ಲೂ ರಿಲೀಸ್ ಆಗಿದ್ದ ಸತ್ಯ ಎಂಬ ತೆಲುಗು ಚಿತ್ರಕ್ಕೆ ಕೆ.ವಿ.ರಾಜು ಡೈಲಾಗ್ಸ್ ಬರೆದಿದ್ದರು. ಚಂದನವನದ ಮತ್ತೊಂದು ಕೊಂಡಿ ಕಳಚಿಕೊಂಡಿದೆ. ಚಿತ್ರರಂಗದ ಅನೇಕ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ