• ಹೋಂ
  • »
  • ನ್ಯೂಸ್
  • »
  • Explained
  • »
  • 7th Pay Commission: ಏನಿದು ರಾಜ್ಯ 7ನೇ ವೇತನ ಆಯೋಗ? ಇದರಿಂದ ಸರ್ಕಾರಿ ನೌಕರರಿಗೆ ಆಗುವ ಅನುಕೂಲಗಳೇನು?

7th Pay Commission: ಏನಿದು ರಾಜ್ಯ 7ನೇ ವೇತನ ಆಯೋಗ? ಇದರಿಂದ ಸರ್ಕಾರಿ ನೌಕರರಿಗೆ ಆಗುವ ಅನುಕೂಲಗಳೇನು?

ಏನಿದು 7ನೇ ವೇತನ ಆಯೋಗ?

ಏನಿದು 7ನೇ ವೇತನ ಆಯೋಗ?

ರಾಜ್ಯದ ಸರ್ಕಾರಿ ನೌಕರರು ಇಂದು ತಮಗೆ ಬಂಪರ್ ನೀಡುವ ನಿರೀಕ್ಷೆಯಲ್ಲಿದ್ದರು. 7ನೇ ವೇತನ ಆಯೋಗದ ಬಗ್ಗೆ ಸಿಎಂ ಪ್ರಸ್ತಾಪಿಸುತ್ತಾರೆ ಅಂತ ಅಂದುಕೊಂಡಿದ್ದರು. ಆದರೆ ಸಿಎಂ ಬೊಮ್ಮಾಯಿ ಬಜೆಟ್ನಲ್ಲಿ ಈ ಬಗ್ಗೆ ಪ್ರಸ್ತಾಪವನ್ನೇ ಮಾಡಿಲ್ಲ. ಹಾಗಾದರೆ ಏನಿದು 7ನೇ ವೇತನ ಆಯೋಗ? ಇದನ್ನು ರಚಿಸುವವರು ಯಾರು? ಇದರಿಂದ ಸರ್ಕಾರಿ ನೌಕರರಿಗೆ ಆಗುವ ಪ್ರಯೋಜನಗಳೇನು? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ...

ಮುಂದೆ ಓದಿ ...
  • Share this:

ಇಂದು ರಾಜ್ಯದ 2023-24ನೇ ಸಾಲಿನ ಬಜೆಟ್ (Budget) ಮಂಡನೆಯಾಗಿದೆ. ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಇಂದು ಬಜೆಟ್ ಮಂಡಿಸಿದ್ದಾರೆ. ಚುನಾವಣಾ ವರ್ಷ (Election Year) ಆಗಿರುವುದರಿಂದ ಎಲ್ಲಾ ಜಿಲ್ಲೆಗಳು, ಎಲ್ಲಾ ಸಮುದಾಯಗಳಿಗೂ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ಅದರಂತೆ ರಾಜ್ಯದ ಸರ್ಕಾರಿ ನೌಕರರು (government employees) ಇಂದು ತಮಗೆ ಬಂಪರ್ ನೀಡುವ ನಿರೀಕ್ಷೆಯಲ್ಲಿದ್ದರು. 7ನೇ ವೇತನ ಆಯೋಗದ (7th Pay Commission) ಬಗ್ಗೆ ಸಿಎಂ ಪ್ರಸ್ತಾಪಿಸುತ್ತಾರೆ ಅಂತ ಅಂದುಕೊಂಡಿದ್ದರು. ಆದರೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಜೆಟ್‌ನಲ್ಲಿ ಈ ಬಗ್ಗೆ ಪ್ರಸ್ತಾಪವನ್ನೇ ಮಾಡಿಲ್ಲ. ಇದರಿಂದ ರಾಜ್ಯದ ಸರ್ಕಾರಿ ನೌಕರರು ಬೇಸರ ವ್ಯಕ್ತಪಡಿಸಿದ್ದಾರೆ. ಬಳಿಕ ಮಾತನಾಡಿದ ಸಿಎಂ ರಾಜ್ಯದ ಬಜೆಟ್‌ ಮಂಡನೆಯ ವೇಳೆ ಎಲ್ಲವನ್ನೂ ಕೂಲಂಕುಶವಾಗಿ ಹೇಳಲು ಆಗುವುದಿಲ್ಲ. ಹೀಗಾಗಿ, ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಬಗ್ಗೆ ಈ ಬಾರಿಯ ಬಜೆಟ್‌ನಲ್ಲಿ ಹೇಳಿಲ್ಲ. ಆದರೆ, ಈಗಾಗಲೇ 7ನೇ ವೇತನ ಆಯೋಗ ರಚನೆ ಮಾಡಲಾಗಿದ್ದು, ಇದೇ ವರ್ಷದಿಂದ ಅನುಷ್ಠಾನಕ್ಕೆ ಬರುತ್ತದೆ ಎಂದಿದ್ದಾರೆ. ಹಾಗಾದರೆ ಏನಿದು 7ನೇ ವೇತನ ಆಯೋಗ? ಇದನ್ನು ರಚಿಸುವವರು ಯಾರು? ಇದರಿಂದ ಸರ್ಕಾರಿ ನೌಕರರಿಗೆ ಆಗುವ ಪ್ರಯೋಜನಗಳೇನು? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.


2017ರಲ್ಲಿ ರಾಜ್ಯ 7ನೇ ವೇತನ ಆಯೋಗ ರಚನೆ


ಕರ್ನಾಟಕ ಸರ್ಕಾರ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ಸುಧಾಕರ್ ರಾವ್ ನೇತೃತ್ವದಲ್ಲಿ 7ನೇ ರಾಜ್ಯ ವೇತನ ಆಯೋಗವನ್ನು 2017ರಲ್ಲಿ ರಚನೆ ಮಾಡಿತ್ತು. ರಾಜ್ಯ ಸರಕಾರವು ನಿವೃತ್ತ ಐಎಎಸ್ ಅಧಿಕಾರಿ ಪಿ.ಬಿ.ರಾಮಮೂರ್ತಿ, ಲೆಕ್ಕ ಪರಿಶೋಧನೆ ಮತ್ತು ಖಾತೆಗಳ ಇಲಾಖೆಯ ನಿವೃತ್ತ ಪ್ರಧಾನ ನಿರ್ದೇಶಕ ಶ್ರೀಕಾಂತ್ ಬಿ.ವನವಳ್ಳಿ ಅವರನ್ನು ಸದಸ್ಯರನ್ನಾಗಿ ಮತ್ತು ಮೂಲಸೌಕರ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರನ್ನು ಸಮಿತಿಯ ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿತ್ತು. ಮುಖ್ಯಮಂತ್ರಿಗಳ ಕಚೇರಿಯ ಹೇಳಿಕೆಯು "2022 ರ ಮಾರ್ಗಸೂಚಿಗಳ ಪ್ರಕಾರ ಹಣಕಾಸಿನ ಜವಾಬ್ದಾರಿ ಮತ್ತು ಇತರ ಹಣಕಾಸಿನ ಜವಾಬ್ದಾರಿಗಳನ್ನು ಗಮನದಲ್ಲಿಟ್ಟುಕೊಂಡು ಶಿಫಾರಸು ಮಾಡುತ್ತದೆ" ಎಂದು ಹೇಳಿತ್ತು


ರಾಜ್ಯ ಸರ್ಕಾರಕ್ಕೆ ವರದಿ


ಆಯೋಗವು ಸರ್ಕಾರಿ ನೌಕರರ ವೇತನ ಶ್ರೇಣಿ, ಅನುದಾನಿತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯದ ಬೋಧಕೇತರ (ಯುಜಿಸಿ/ಎಐಸಿಟಿಇ/ಐಸಿಆರ್ ವೇತನ ಶ್ರೇಣಿ ಪಡೆಯುವವರನ್ನು ಹೊರತುಪಡಿಸಿ) ಉದ್ಯಾನವನಗಳು ಮತ್ತು ನಿವೃತ್ತಿ ಸೌಲಭ್ಯಗಳಂತಹ ಎಲ್ಲವನ್ನು ಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ವರದಿಯನ್ನು ಸಲ್ಲಿಸುತ್ತದೆ. .


ಇದನ್ನೂ ಓದಿ: Explainer: ರಾಹುಲ್ ಗಾಂಧಿ ಹೆಸರಿನಲ್ಲಿರುವ 'ಗಾಂಧಿ' ಸರ್​ನೇಮ್ ಯಾರದ್ದು? ನೆಹರೂ ಕುಟುಂಬದ ಬಗ್ಗೆ ತಿಳಿಯಬೇಕಾದ ಅಂಶಗಳಿವು!


ನೌಕರರ ಸಂಬಳದಲ್ಲಿ ಏರಿಕೆ


7ನೇ ವೇತನ ಆಯೋಗ ಜಾರಿಯಾಗಿ, ವರದಿ ಅನುಷ್ಠಾನಗೊಂಡರೆ ನೌಕರರ ವೇತನವು ಕೇಡರ್ ಅನ್ನು ಅವಲಂಬಿಸಿ 10,000 ರೂಪಾಯಿಯಿಂದ 50,000 ರೂಪಾಯಿವರೆಗೆ ಹೆಚ್ಚಾಗುತ್ತದೆ.


ಸರ್ಕಾರಿ ನೌಕರರಿಗೆ ಗರಿಷ್ಠ ವೇತನ ಶಿಫಾರಸು:


ಏಳನೇ ವೇತನ ಆಯೋಗವು ಸರ್ಕಾರಿ ನೌಕರರಿಗೆ ಗರಿಷ್ಠ ವೇತನವನ್ನು ರೂ. ಅಪೆಕ್ಸ್ ಸ್ಕೇಲ್‌ಗೆ ತಿಂಗಳಿಗೆ 2.25 ಲಕ್ಷ ಮತ್ತು ರೂ. ಕ್ಯಾಬಿನೆಟ್ ಕಾರ್ಯದರ್ಶಿ ಮತ್ತು ಅದೇ ಮಟ್ಟದಲ್ಲಿ ಕೆಲಸ ಮಾಡುವ ಇತರರಿಗೆ ತಿಂಗಳಿಗೆ 2.5 ಲಕ್ಷ ರೂಪಾಯಿ ನೀಡುವಂತೆ ಶಿಫಾರಸು ಮಾಡಿದೆ.


ವೇತನ ಬಡ್ತಿಯಲ್ಲಿನ ವ್ಯತ್ಯಾಸ


ಕೇಂದ್ರ ಮತ್ತು ಇತರೆ ರಾಜ್ಯಗಳ ವಾರ್ಷಿಕ ವೇತನ ಬಡ್ತಿ ದರಗಳ ವ್ಯತ್ಯಾಸದ ವಿವರ ಹೀಗಿದೆ (ಕನಿಷ್ಠ ಮೂಲ ವೇತನ). ಕೇಂದ್ರ ಸರ್ಕಾರ ಶೇ 3, ಕೇರಳ ಸರ್ಕಾರ ಶೇ 3.04 ಮತ್ತು ಕರ್ನಾಟಕ ಸರ್ಕಾರ ಶೇ 2.35 ಆಗಿರುತ್ತದೆ. ಕೇಂದ್ರ ಸರ್ಕಾರವು 6ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿದ ಸಂದರ್ಭದಲ್ಲಿ ಪೇ ಬ್ಯಾಂಡ್ ವ್ಯವಸ್ಥೆ ಜೊತೆಗೆ ವಾರ್ಷಿಕ ವೇತನ ಬಡ್ತಿ ದರಗಳನ್ನು ನಿರ್ಧಿಷ್ಟ ಪ್ರಮಾಣಕ್ಕೆ ಬದಲಾಗಿ ಮೂಲ ವೇತನದ ಶೇ. 3 ರಷ್ಟು ವೇತನ ಬಡ್ತಿ ದರವನ್ನು ದಿನಾಂಕ 1/1/2006ರಿಂದ ಜಾರಿ ಮಾಡಿ ಇಂದಿನವರೆಗೂ ಮುಂದುವರಿಸಿರುತ್ತದೆ.


7ನೇ ವೇತನ ಆಯೋಗದ ಪ್ರಕಾರ ವೇತನ ಶ್ರೇಣಿ ಲೆಕ್ಕಾಚಾರ


7ನೇ CPC ಪರಿಷ್ಕೃತ ವೇತನ ಶ್ರೇಣಿಯನ್ನು ಲೆಕ್ಕಾಚಾರ ಮಾಡಲು, ದಯವಿಟ್ಟು 7ನೇ ವೇತನ ಆಯೋಗವು ಶಿಫಾರಸು ಮಾಡಿದಂತೆ ಕೆಳಗಿನ ಸೂಚನೆಗಳನ್ನು ಅನುಸರಿಸಿ. ಮೊದಲಿಗೆ, 31.12.2015 ರಂತೆ ನಿಮ್ಮ ಮೂಲ ವೇತನವನ್ನು (ಗ್ರೇಡ್ ಪೇ ಸೇರಿದಂತೆ) ನಿರ್ಧರಿಸಿ. ಅದರ ನಂತರ, ನಿಮ್ಮ ಮೂಲ ವೇತನವನ್ನು 2.57 ರ ಫಿಟ್‌ಮೆಂಟ್ ಅಂಶದಿಂದ ಗುಣಿಸಿ ಮತ್ತು ಅದನ್ನು ಹತ್ತಿರದ ರೂಪಾಯಿಗೆ ಪೂರ್ತಿಗೊಳಿಸಬೇಕು.


7ನೇ ವೇತನ ಆಯೋಗದ ಯಾವುದರ ಬಗ್ಗೆ ಶಿಫಾರಸು ಮಾಡುತ್ತದೆ?


7ನೇ ವೇತನ ಆಯೋಗವು ಸರ್ಕಾರಿ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿ ಅಂದರೆ ಯುಜಿಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಯ ವೇತನ ಪಡೆಯುತ್ತಿರುವವರನ್ನು ಹೊರತು ಪಡಿಸಿ ವೇತನ ಹಾಗೂ ವಿವಿಧ ಭತ್ಯೆಗಳು ಹಾಗೂ ನಿವೃತ್ತಿ ಸೌಲಭ್ಯಗಳನ್ನು ಪರಿಶೀಲಿಸಿ, ಕಾರ್ಯಸಾಧುವಾದ ನೂತನ ವೇತನ ಶ್ರೇಣಿಯನ್ನು ಶಿಫಾರಸು ಮಾಡುತ್ತದೆ. ಕೇಂದ್ರದ ವೇತನ ಶ್ರೇಣಿಯನ್ನು ರಾಜ್ಯದಲ್ಲಿ ಅಳವಡಿಸುವ ಕುರಿತು ಪರಿಶೀಲಿಸುವುದು, ರಾಜ್ಯ ಸರ್ಕಾರವು ತುಟ್ಟಿ ಭತ್ಯೆ ನೀಡಲು ಅನುಸರಿಸಬೇಕಾದ ಸೂತ್ರವನ್ನು ರೂಪಿಸುವುದು, ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆ, ಪ್ರವಾಸ ರಜೆ ಸೌಲಭ್ಯ, ವೈದ್ಯಕೀಯ ಸೌಲಭ್ಯಗಳನ್ನು ನಿಗದಿ ಪಡಿಸಲು ಹಾಗೂ ಸುಧಾರಣೆ ತರಲು ಸಲಹೆ ನೀಡುವುದು, ನಿವೃತ್ತಿ ವೇತನ ಮತ್ತು ಸಂಬಂಧಿತ ಸೌಲಭ್ಯಗಳ ಪರಿಷ್ಕರಣೆ ಮೊದಲಾದ ಅಂಶಗಳ ಕುರಿತು ವೇತನ ಆಯೋಗವು ಪರಿಶೀಲಿಸಿ ಶಿಫಾರಸು ನೀಡುತ್ತದೆ.




6 ಸಾವಿರ ಕೋಟಿ ಮೀಸಲು


ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಬಜೆಟ್ ನಲ್ಲಿ 6 ಸಾವಿರ ಕೋಟಿ ರೂ.ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈಗಾಗಲೇ ಹಿಂದಿನ ಮುಖ್ಯ ಕಾರ್ಯದರ್ಶಿ ಸುಧಾಕರ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಲಾಗಿದ್ದು, ಇದಕ್ಕಾಗಿಯೇ 6 ಸಾವಿರ ಕೋಟಿ ಮೀಸಲಿಡಲಾಗಿದೆ. ಹೆಚ್ಚುವರಿ ಹಣ ಅವಶ್ಯವಿದ್ದಲ್ಲಿ ಪೂರಕ ಬಜೆಟ್ ನಲ್ಲಿ ಒದಗಿಸಲಾಗುವುದು ಎಂದು ವರದಿ ಶೀಘ್ರ ಬರಲಿದ್ದು,ಅದರನುಸಾರ ಕ್ರಮವಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಆಯೋಗ ಮಧ್ಯಂತರ ವರದಿ ನೀಡುವುದೋ ಅಥವಾ ಪೂರ್ಣ ವರದಿ ಸಲ್ಲಿಸುವುದೋ ಅದರನುಸಾರ ಸರಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ.ಇದಕ್ಕಾಗಿ ಅನುದಾನ ಮೀಸಲಿಟ್ಟಿರುವುದರಿಂದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Published by:Annappa Achari
First published: