ದುಬೈ (ಅ. 11): ಐಪಿಎಲ್ನ 26ನೇ ಪಂದ್ಯ ಇಲ್ಲಿನ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್ರೈರ್ಸ್ ಹೈದರಾಬಾದ್ ತಂಡ ಉತ್ತಮ ಮೊತ್ತದತ್ತ ದಾಪುಗಾಲಿಡುತ್ತಿದೆ.
ಟಾಸ್ ಗೆದ್ದು ಬ್ಯಾಟಿಂಗ್ಗೆ ಇಳಿದಿರುವ ಹೈದರಾಬಾದ್ ತಂಡ ಮೊದಲ 4 ಓವರ್ನಲ್ಲಿ ಕೇವಲ 13 ರನ್ ಗಳಿಸಿತಷ್ಟೆ. 5ನೇ ಓವರ್ನ ಕಾರ್ತಿಕ್ ತ್ಯಾಗಿ ಬೌಲಿಂಗ್ನಲ್ಲಿ ಜಾನಿ ಬೈರ್ಸ್ಟೋ(16) ಸಿಕ್ಸ್ ಸಿಡಿಸಲೋಗಿ ಔಟ್ ಆದರು.
ಬಳಿಕ ಜೊತೆಯಾದ ನಾಯಕ ಡೇವಿಡ್ ವಾರ್ನರ್ ಹಾಗೂ ಮನೀಶ್ ಪಾಂಡೆ ಎಚ್ಚರಿಕೆಯಿಂದ ಬ್ಯಾಟ್ ಬೀಸಿದರು. ತಂಡದ ರನ್ ಗತಿಯನ್ನು ಏರಿಸಿಲು ಸಾಹಸ ಪಟ್ಟ ಈ ಜೋಡಿ 73 ರನ್ಗಳ ಅಮೋಘ ಜೊತೆಯಾಟ ಆಡಿತು. ಆದರೆ, 38 ಎಸೆತಗಳಲ್ಲಿ 48 ರನ್ ಗಳಿಸಿ ಅರ್ಧಶತಕದ ಅಂಚಿನಲ್ಲಿದ್ದ ವಾರ್ನರ್ ಅವರು ಆರ್ಚರ್ ಬೌಲಿಂಗ್ನಲ್ಲಿ ಬೌಲ್ಡ್ ಆದರು.
ಸದ್ಯ ಸೆಟ್ ಬ್ಯಾಟ್ಸ್ಮನ್ ಮನೀಶ್ ಪಾಂಡೆ ಹಾಗೂ ಕೇನ್ ವಿಲಿಯಮ್ಸನ್ ಕ್ರೀಸ್ನಲ್ಲಿದ್ದಾರೆ.
ಇಂದಿನ ಪಂದ್ಯಕ್ಕೆ ಎಸ್ಆರ್ಎಚ್ ತಂಡ ಒಂದು ಬದಲಾವಣೆ ಮಾಡಲಾಗಿದ್ದು ಸಮದ್ ಬದಲು ವಿಜಯ್ ಶಂಕರ್ ಕಣಕ್ಕಿಳಿಯುತ್ತಿದ್ದಾರೆ.
ಸನ್ರೈಸರ್ಸ್ ಹೈದರಾಬಾದ್: ಡೇವಿಡ್ ವಾರ್ನರ್ (ನಾಯಕ), ಜಾನಿ ಬೇರ್ಸ್ಟೋ (ವಿಕೆಟ್ ಕೀಪರ್), ಮನೀಷ್ ಪಾಂಡೆ, ಕೇನ್ ವಿಲಿಯಮ್ಸನ್, ವಿಜಯ್ ಶಂಕರ್, ಅಭಿಷೇಕ್ ಶರ್ಮ, ಪ್ರಿಯಂ ಗಾರ್ಗ್, ರಶೀದ್ ಖಾನ್, ಸಂದೀಪ್ ಶರ್ಮಾ, ಟಿ. ನಟರಾಜನ್, ಖಲೀಲ್ ಅಹ್ಮದ್.
ಇತ್ತ ಆರ್ಆರ್ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ, ಬೆನ್ ಸ್ಟೋಕ್ಸ್, ರಿಯಾನ್ ಪರಾಗ್ ಹಾಗೂ ರಾಬಿನ್ ಉತ್ತಪ್ಪ ತಂಡಕ್ಕೆ ಕಮ್ಬ್ಯಾಕ್ ಮಾಡಿದ್ದು ಆನೆಬಲ ಬಂದಂತಾಗಿದೆ.
ರಾಜಸ್ಥಾನ್ ರಾಯಲ್ಸ್: ಜಾಸ್ ಬಟ್ಲರ್, ರಾಬಿನ್ ಉತ್ತಪ್ಪ, ಸ್ಟೀವ್ ಸ್ಮಿತ್ (ನಾಯಕ), ಸಂಜು ಸ್ಯಾಮ್ಸನ್, ಬೆನ್ ಸ್ಟೋಕ್ಸ್, ರಿಯಾನ್ ಪರಾಗ್, ರಾಹುಲ್ ತೇವಾಟಿಯಾ, ಶ್ರೇಯಸ್ ಗೋಪಾಲ್, ಜೋಫ್ರಾ ಆರ್ಚರ್, ಕಾರ್ತಿಕ್ ತ್ಯಾಗಿ, ವರುಣ್ ಆರುಣ್.
Virat Kohli: ಚೆನ್ನೈ ವಿರುದ್ಧದ ಪಂದ್ಯದಲ್ಲಿ ಎಬಿಡಿಯಾಗಿ ಬದಲಾದ ಕೊಹ್ಲಿ; ಇಲ್ಲಿದೆ ರೋಚಕ ವಿಡಿಯೋ
ಸತತ ನಾಲ್ಕು ಪಂದ್ಯಗಳನ್ನು ಸೋತು ನಿರಾಸೆ ಅನುಭವಿಸಿರುವ ಸ್ಮಿತ್ ಪಡೆ ಆಡಿರುವ 6 ಪಂದ್ಯಗಳಲ್ಲಿ 2 ರಲ್ಲಿ ಮಾತ್ರ ಜಯ ಸಾಧಿಸಿದೆ. ಸ್ಫೋಟಕ ಆಟಗಾರಿರುವ ರಾಜಸ್ಥಾನ ತಂಡಕ್ಕೆ ನಾಯಕ ಸ್ಮಿತ್ ಸೇರಿದಂತೆ ಎಲ್ಲಾ ಬ್ಯಾಟ್ಸ್ಮನ್ಗಳು ವೈಫಲ್ಯ ಅನುಭವಿಸುತ್ತಿರುವುದು ಹಿನ್ನಡೆಗೆ ಕಾರಣವಾಗಿದೆ. ಆರಂಭದ ಪಂದ್ಯಗಳಲ್ಲಿ ಅಬ್ಬರಿಸಿದ್ದ ಸಂಜು ಸಾಮ್ಸನ್ ಕೂಡ ಸದ್ದು ಮಾಡುತ್ತಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲೇ ಅಬ್ಬರಿಸಬೇಕಾಗಿದೆ.
ಇತ್ತ ಹೈದರಾಬಾದ್ ತಂಡ 6 ಪಂದ್ಯಗಳ ಪೈಕಿ 3 ರಲ್ಲಿ ಜಯ ಸಾಧಿಸಿ, 3 ಪಂದ್ಯಗಳಲ್ಲಿ ಸೋಲುಕಂಡಿದೆ. ಜಾನಿ ಬೈರ್ಸ್ಟೋ ಮತ್ತು ನಾಯಕ ವಾರ್ನರ್ ಲಯಕ್ಕೆ ಮರಳಿರುವುದು ತಂಡದ ಶಕ್ತಿ ಹೆಚ್ಚಿಸಿದೆ. ಆದರೆ ಕೇನ್ ವಿಲಿಯಮ್ಸನ್ ಹೊರತುಪಡಿಸಿ ಮಧ್ಯಮ ಕ್ರಮಾಕದ ಆಟಗಾರರು ಕಳೆದ 2 ಪಂದ್ಯಗಳಿಂದ ತಂಡಕ್ಕೆ ಆಸರೆಯಾಗದಿರುವುದು ಕೊಂಚ ಹಿನ್ನಡೆಯಾಗಿದೆ.
Virat Kohli: ಉಲ್ಟಾ ಬ್ಯಾಟ್ನಲ್ಲಿ ಸಿಕ್ಸ್ ಹೊಡೆದ ವಿರಾಟ್ ಕೊಹ್ಲಿ; ವಿಚಿತ್ರ ಶಾಟ್ ನೋಡಿ ಸಿಎಸ್ಕೆ ಬೌಲರ್ ದಂಗು
ಭುವಿ ಅನುಪಸ್ಥಿತಿಯಲ್ಲೂ ಟಿ.ನಟರಾಜನ್, ರಶೀದ್ ಖಾನ್, ಖಲೀಲ್ ಅಹಮದ್ ಒಳಗೊಂಡ ಬೌಲಿಂಗ್ ಪಡೆ ತಂಡಕ್ಕೆ ಆಸರೆಯಾಗಿದ್ದಾರೆ.
ಉಭಯ ತಂಡಗಳು ಇಲ್ಲಿಯವರೆಗೆ 11 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, 6 ಪಂದ್ಯಗಳಲ್ಲಿ ಹೈದರಾಬಾದ್ ತಂಡ ಗೆಲುವು ಕಂಡಿರೆ, 5 ಪಂದ್ಯಗಳಲ್ಲಿ ರಾಜಸ್ಥಾನ ತಂಡ ಜಯ ಸಾಧಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ