• ಹೋಂ
  • »
  • ನ್ಯೂಸ್
  • »
  • IPL
  • »
  • RR vs SRH| ಪ್ಲೇ ಆಫ್ ಪ್ರವೇಶಿಸಲು ಗೆಲ್ಲಲೇಬೇಕಾದ ಒತ್ತಡದಲ್ಲಿ ರಾಜಸ್ತಾನ್; ಟೂರ್ನಿಯಿಂದ ಹೊರಬಿದ್ದ ಸನ್​ರೈಸರ್ಸ್

RR vs SRH| ಪ್ಲೇ ಆಫ್ ಪ್ರವೇಶಿಸಲು ಗೆಲ್ಲಲೇಬೇಕಾದ ಒತ್ತಡದಲ್ಲಿ ರಾಜಸ್ತಾನ್; ಟೂರ್ನಿಯಿಂದ ಹೊರಬಿದ್ದ ಸನ್​ರೈಸರ್ಸ್

ರಾಜಸ್ತಾನ ರಾಯಲ್ಸ್​ ತಂಡ.

ರಾಜಸ್ತಾನ ರಾಯಲ್ಸ್​ ತಂಡ.

ಪ್ಲೇ ಆಫ್​ ಕನಸನ್ನು ಜೀವಂತವಾಗಿಟ್ಟುಕೊಳ್ಳಲು ರಾಜಸ್ತಾನ ತಂಡ ಇಂದು ಗೆಲ್ಲಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಬ್ಯಾಟಿಂಗ್​ನಲ್ಲಿ ಸತತ ವೈಫಲ್ಯ ಅನುಭವಿಸುತ್ತಿದ್ದ ನಾಯಕ ಸಂಜು ಸ್ಯಾಮ್ಸನ್ ಕಳೆದ ಪಂದ್ಯದಲ್ಲಿ ಫಾರ್ಮ್​ಗೆ ಮರಳಿರುವುದು ತಂಡದ ಪಾಲಿಗೆ ಶುಭ ಸುದ್ದಿ.

  • Share this:

ದುಬೈ ಕ್ರೀಡಾಂಗಣದಲ್ಲಿ (Dubai Stadium) ಇಂದು ನಡೆಯಲಿರುವ ಮಹತ್ವದ ಐಪಿಎಲ್ 2021ರ 40ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ (Sanju Samson) ನಾಯಕತ್ವದ ರಾಜಸ್ತಾನ್ ರಾಯಲ್ಸ್ (Rajasthan Royals) ಮತ್ತು ಕೇನ್ ವಿಲಿಯಮ್ಸನ್ (Kane Williamson) ನೇತೃತ್ವದ ಸನ್​ರೈಸರ್ಸ್​ ಹೈದ್ರಾಬಾದ್ (Sunrisers Hyderabad) ಮುಖಾಮುಖಿಯಾಗುತ್ತಿದೆ. ಸತತ ಸೋಲುಗಳಿಂದ ಕಂಗೆಟ್ಟಿರುವ ಸನ್​ರೈಸರ್ಸ್​ ಹೈದ್ರಾಬಾದ್ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಸನ್​ರೈಸರ್ಸ್​ ತಂಡಕ್ಕೆ ಇಲ್ಲ. ಆದರೆ, ರಾಜಸ್ತಾನ ರಾಯಲ್ಸ್​ ಪಾಲಿಗೆ ಪ್ಲೇ ಆಫ್ (Play Off) ತಲುಪಲು ಇಂದಿನ ಪಂದ್ಯದಲ್ಲಿ ಶತಾಯಗತಾಯ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಸಂಜು ಸ್ಯಾಮ್ಸನ್ ಪಡೆ ಮತ್ತಷ್ಟು ನಿಗಾವಹಿಸಿ ಆಡಬೇಕಾದ ಒತ್ತಡದಲ್ಲಿದೆ. ಇದೇ ಕಾರಣಕ್ಕೆ ಇಂದಿನ ಪಂದ್ಯ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.


ರಾಜಸ್ತಾನ್​ಗೆ ಮಾಡು ಇಲ್ಲವೇ ಮಡಿ ಪಂದ್ಯ:


ರಾಜಸ್ತಾನ್ ರಾಯಲ್ಸ್​ ತಂಡಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 155 ರನ್​ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ್ದ ರಾಯಲ್ಸ್​ ಎಡವಿತ್ತು. ನಾಯಕ ಸಂಜು ಸ್ಯಾಮ್ಸನ್ ಹೊರತುಪಡಿಸಿ ಬೇರೆ ಯಾವ ಬ್ಯಾಟ್ಸ್​ಮನ್ ಸಹ ಉತ್ತಮ ಪ್ರದರ್ಶನ ನೀಡಿಲ್ಲ. ಎರಡಂಕಿಯೂ ಯಾರೂ ದಾಟಿಲ್ಲ. ಪರಿಣಾಮ ರಾಜಸ್ತಾನ ರಾಯಲ್ಸ್​ ಗೆಲ್ಲುವ ಪಂದ್ಯದಲ್ಲಿ ಸೋಲನುಭವಿಸಿತ್ತು.


ಆದರೆ, ಪ್ಲೇ ಆಫ್​ ಕನಸನ್ನು ಜೀವಂತವಾಗಿಟ್ಟುಕೊಳ್ಳಲು ರಾಜಸ್ತಾನ ತಂಡ ಇಂದು ಗೆಲ್ಲಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಬ್ಯಾಟಿಂಗ್​ನಲ್ಲಿ ಸತತ ವೈಫಲ್ಯ ಅನುಭವಿಸುತ್ತಿದ್ದ ನಾಯಕ ಸಂಜು ಸ್ಯಾಮ್ಸನ್ ಕಳೆದ ಪಂದ್ಯದಲ್ಲಿ ಫಾರ್ಮ್​ಗೆ ಮರಳಿದ್ದಾರೆ. ಆದರೆ, ಉಳಿದ ಬ್ಯಾಟ್ಸ್​ಮನ್​ಗಳು ನಾಯಕನಿಗೆ ಯಾವ ರೀತಿ ಸಾಥ್ ನೀಡಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.


ಇನ್ನೂ ಬೌಲಿಂಗ್ ವಿಭಾಗ ಉತ್ತಮವಾಗಿಯೇ ಪ್ರದರ್ಶನ ನೀಡುತ್ತಿದ್ದು, ಗಾಯಾಳುವಾಗಿರುವ ಇವಾನ್ ಊಯಿಸ್ ಮತ್ತು ಆಲ್​ರೌಂಡರ್​ ಕ್ರಿಸ್​ ಮೋರಿಸ್ ಈ ಪಂದ್ಯದಲ್ಲಿ ಕಣಕ್ಕಿಳಿದರೆ ರಾಜಸ್ತಾನ ತಂಡ ಮತ್ತಷ್ಟು ಬಲಿವಾಗಿರಲಿದೆ.


ಇದನ್ನೂ ಓದಿ: E Sala Cup Namde| ಮುಂಬೈಯನ್ನು ಬಗ್ಗುಬಡಿದ ಕೊಹ್ಲಿ ಪಡೆ; 'ಈ ಸಲ ಕಪ್ ನಮ್ದೆ' ಎಂದು ಬೀಗಿದ ಆರ್‌ಸಿಬಿ ಅಭಿಮಾನಿಗಳು!


ಸೋಲಿನ ಸುಳಿಯಲ್ಲಿ ಹೈದ್ರಾಬಾದ್;


ಸನ್​ರೈಸರ್ಸ್​ ಬಹುತೇಕ ಟೂರ್ನಿಯಿಂದ ಹೊರಬಿದ್ದಿದೆ. ಹೀಗಾಗಿ ಇಂದಿನ ಪಂದ್ಯ ಸನ್​ರೈಸರ್ಸ್​ ಗೆದ್ದರೂ ಸಹ ಅಂಕಪಟ್ಟಿಯಲ್ಲಿ ಯಾವ ಬದಲಾವಣೆಯೂ ಇರುವುದಿಲ್ಲ. ಹೀಗಾಗಿ ಬ್ಯಾಟಿಂಗ್ ಮತ್ತು ಬೌಲಿಂಗ್​ನಲ್ಲಿ ಸತತ ವೈಫಲ್ಯ ಅನುಭವಿಸುತ್ತಿರುವ ಸನ್​ರೈಸರ್ಸ್​ ಹೈದ್ರಾಬಾದ್ ಇಂದಿನ ಪಂದ್ಯದಲ್ಲಿ ಹೊಸ ಹೊಸ​ ಪ್ರಯೋಗಕ್ಕೆ ಮುಂದಾದರೂ ಅಚ್ಚರಿ ಇಲ್ಲ. ಹೀಗಾಗಿ ಈವರೆಗೆ ಅವಕಾಶ ಪಡೆದ ಆಟಗಾರರು ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

top videos
    First published: