ದೇಶದಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇತ್ತ ರೋಗಿಗಳಿಗೆ ಚಿಕಿತ್ಸೆ ನೀಡಲು ಅಗತ್ಯ ವಸ್ತುಗಳ ಅಭಾವ ಕಾಡುತ್ತಿದೆ. ಅದರಲ್ಲೂ ಮುಖ್ಯವಾಗಿ ಹೆಚ್ಚಿನ ರೋಗಿಗಲು ಆಕ್ಸಿಜನ್ ಕೊರತೆಯಿಂದ ಅಸುನೀಗುತ್ತಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಕಳವಳ ವ್ಯಕ್ತಪಡಿಸಿದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಇದೀಗ ಒಂದು ಕೋಟಿ ರೂ. ದೇಣಿಗೆ ನೀಡಿದ್ದಾರೆ. ದೆಹಲಿ ಮೂಲದ ನಿಧಿ ಸಂಗ್ರಹ ಸಂಸ್ಥೆಯಾದ ಮಿಷನ್ ಆಕ್ಸಿಜನ್ಗೆ ಸಚಿನ್ ಈ ದೇಣಿಗೆ ನೀಡಿದ್ದು, ಈ ಮೂಲಕ ಆಕ್ಸಿಜನ್ ಪೂರೈಕೆಗೆ ನೆರವಾಗಿದ್ದಾರೆ.
ಮಿಷನ್ ಆಕ್ಸಿಜನ್ ಸಂಸ್ಥೆಯು ವಿದೇಶಗಳಿಂದ ಆಕ್ಸಿಜನ್ ಸಾಂದ್ರಕ ಯಂತ್ರಗಳನ್ನು ತರಿಸಿಕೊಳ್ಳುತ್ತಿದ್ದು, ಈ ಮೂಲಕ ದೇಶದಲ್ಲಿನ ಆಸ್ಪತ್ರೆಗಳಿಗೆ ಸರಬರಾಜು ಮಾಡುತ್ತಿದೆ. ಇದೀಗ ಮತ್ತಷ್ಟು ಆಕ್ಸಿಜನ್ ಪೂರೈಸುವಂತೆ ಕೋರಿ ಸಚಿನ್ ತೆಂಡೂಲ್ಕರ್ ಈ ಸಂಸ್ಥೆಗೆ ಸಚಿನ್ 1 ಕೋಟಿ ರೂ. ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ.
— Sachin Tendulkar (@sachin_rt) April 29, 2021
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ