ಇನ್ನು ಮುಂದೆ ಅರ್ಕಾರಿ ಶಾಲೆಯಲ್ಲಿ ಅಭ್ಯಾಸ ಮಾಡುವ 1 ರಿಂದ 8ನೇ ತರಗತಿ ಮಕ್ಕಳಿಗೆ ಅದರಲ್ಲೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ವರ್ಗಗಳ ವಿದ್ಯಾರ್ಥಿಗಳ (Students) ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ನಿಲ್ಲಿಸಲಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಶಿಕ್ಷಣ ಮಂಡಳಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ವರ್ಗಗಳ 9 ಮತ್ತು 10ನೇ ತರಗತಿ (Class) ವಿದ್ಯಾರ್ಥಿಗಳಿಗೆ ಮಾತ್ರ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ ಹೊರತಾಗಿ ಬೇರೆ ವಿದ್ಯಾರ್ಥಿಗಳಿ ವಿದ್ಯಾರ್ಥಿ ವೇತನ (Scholarship) ನೀಡಲಾಗುವುದಿಲ್ಲ ಎಂದು ಹೇಳಿದೆ.
1 ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವಿಲ್ಲ
ಶಿಕ್ಷಣ ಹಕ್ಕು ಕಾಯ್ದೆಯಡಿ 8 ನೇ ತರಗತಿಯವರೆಗೆ ಮಾತ್ರವೇ ಎಲ್ಲ ಮಕ್ಕಳಿಗೆ ಕಡ್ಡಾಯ ಶಿಕ್ಷಣ ದೊರೆಯಲಿದೆ ಎಂದು ತಿಳಿಸಿದೆ. ಇದಕ್ಕೂ ಮೊದಲು ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನದ ಸೌಲಭ್ಯ ಅಲ್ಪಸಂಖ್ಯಾತ ಸಮುದಾಯದ 1 ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೂ ಸಹ ದೊರೆಯುತ್ತಿತ್ತು. ಆದರೆ ಇನ್ನು ಮುಂದೆ ಹಾಗಿರುವುದಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಮಾತ್ರವೇ ಪೂರ್ಣ ಪ್ರಮಾಣದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ ವ್ಯಾಪ್ತಿಗೆ ಒಳಪಡುತ್ತಾರೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ: ಮಹಿಳಾ ಶಿಕ್ಷಣ ಕ್ಷೇತ್ರಕ್ಕೆ ಮಹಾತ್ಮ ಜ್ಯೋತಿಬಾ ಫುಲೆ ಕೊಡುಗೆ, ಸುಧಾರಣೆಗಳೇನು?
ಇದರ ಬಗ್ಗೆ ಹೇಳಿಕೆ ನೀಡಿರುವ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. ಶಿಕ್ಷಣ ಹಕ್ಕು ಕಾಯ್ದೆ 2009ರ ಅನ್ವಯ ಪ್ರತಿ ಮಗುವಿಗೂ 1 ರಿಂದ 8ನೇ ತರಗತಿವರೆಗೂ ಮಾತ್ರ ಉಚಿತ ಶಿಕ್ಷಣ ಮತ್ತು ಕಡ್ಡಾಯ ಪ್ರಾಥಮಿಕ ಶಿಕ್ಷಣ ನೀಡಬೇಕಾಗಿದೆ ಎಂದಿದೆ. ಅದರಂತೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯ ಸೌಲಭ್ಯ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರವೇ ದೊರೆಯಲಿದೆ ಎಂದು ಸ್ಪಷ್ಟವಾಗಿ ತಿಳಿಸಿದೆ.
9 ಮತ್ತು 10ನೇ ತರಗತಿ ವಿದ್ಯಾರ್ಥಿಗಳ ಅರ್ಜಿ ಸ್ವೀಕಾರ
ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಕೇವಲ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳ ಅರ್ಜಿಗಳನ್ನು ಮಾತ್ರ ಸ್ವೀಕರಿಸಬೇಕು ಮತ್ತು ಪರಿಶೀಲಿಸಬೇಕು ಎಂದು ರಾಜ್ಯ, ಜಿಲ್ಲಾ ನೋಡಲ್ ಅಧಿಕಾರಿಗಳಿಗೂ ಇಲಾಖೆ ಸೂಚನೆ ನೀಡಿದೆ. ಈ ತೀರ್ಮಾನಕ್ಕೆ ಹಲವೆಡೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
ಸರ್ಕಾರ ತೆಗೆದುಕೊಂಡ ತಪ್ಪು ನಿರ್ಧಾರ
ಈ ರೀತಿ ಮಾಡುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಕಲಿಕೆಗೆ ದೊರೆಯುತ್ತಿದ್ದ ಸಹಾಯವೂ ಸಿಗದಂತಾಗುತ್ತದೆ. ಅಷ್ಟೇ ಅಲ್ಲ ಶಿಕ್ಷಣ ಮಂಡಳಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ವರ್ಗಗಳಳ ಮೇಲೆ ಹೇರಿಕೆಯಾದಂತಾಗುತ್ತದೆ. ಈ ರೀತಿ ಮಾಡುತ್ತಿರುವುದು ತಪ್ಪು ಎಂಬ ಮಾತು ಕೇಳಿ ಬರುತ್ತಿದೆ.
ಸರ್ಕಾರದ ವಿರುದ್ಧ ಈ ಮಾತು ಕೇಳಿ ಬರುತ್ತಿದೆ
ಹೌದು ಎರಡು ವರ್ಷಗಳಿಂದ ವಿದ್ಯಾರ್ಥಿವೇತನ ನೀಡದೆ ಸತಾಯಿಸುತ್ತಿದ್ದ ಸರ್ಕಾರ ಈಗ ರದ್ದು ಮಾಡಿದೆ. ರಾಜ್ಯದಲ್ಲಿ 15 ಜಿಲ್ಲೆಗಳ ಮಕ್ಕಳಿಗೆ ಸಮವಸ್ತ್ರ ಕೊಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಕಳಪೆ ಶೂ ಸಾಕ್ಸ್ ವಿತರಿಸಿದೆ. ಪ್ರೌಢ ಶಾಲಾ ಮಕ್ಕಳಿಗೆ ಸೈಕಲ್ ಕೂಡಾ ಸರಿಯಾಗಿ ವತರಣೆಯಾಗುತ್ತಿಲ್ಲ ಎಂಬ ಮಾತೂ ಸಹ ಕೇಳಿಬರುತ್ತಿದೆ. ಒಟ್ಟಿನಲ್ಲಿ ಈ ನಿರ್ಧಾರಕ್ಕೆ ನಿಗದಿತ ಕಾರಣ ಏನು ಎಂಬುದೇ ತಿಳಿದುಬರುತ್ತಿಲ್ಲ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ