ಕರ್ನಾಟಕ ಲೋಕ ಸೇವಾ ಆಯೋಗದಿಂದ (Karnataka Public Service Commission) ರೇಷ್ಮೆ ಕೃಷಿ ವಿಸ್ತರಣಾ ಅಧಿಕಾರಿಗಳ (Sericulture Extension Officer) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 72 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಗ್ರೂಪ್ 'ಬಿ'ಯ ಉಳಿಕೆ ವೃಂದದ ಈ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 8 ಆಗಿದೆ. ಈ ಹುದ್ದೆ ನೇಮಕಾತಿ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಸೇರಿದಂತೆ ಇತರೆ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆ ಮಾಹಿತಿ |
ಹುದ್ದೆ ವಿವರ |
ಸಂಸ್ಥೆ |
ಕರ್ನಾಟಕ ಲೋಕಸೇವಾ ಆಯೋಗ (KPSC) |
ಹುದ್ದೆ |
ರೇಷ್ಮೆ ಕೃಷಿ ವಿಸ್ತರಣಾ ಅಧಿಕಾರಿ |
ಹುದ್ದೆಗಳ ಸಂಖ್ಯೆ |
72 |
ಉದ್ಯೋಗ ಸ್ಥಳ |
ಕರ್ನಾಟಕದಾದ್ಯಂತ |
ವೇತನ |
40900-78200 ರೂ. ಪ್ರತಿ ತಿಂಗಳು |
ಶೈಕ್ಷಣಿಕ ಅರ್ಹತೆ: ಜ್ಞ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ರೇಷ್ಮೆ ಕೃಷಿ, ಕೃಷಿ ಅಥವಾ ತೋಟಗಾರಿಕೆಯಲ್ಲಿ ಪದವಿ, ರೇಷ್ಮೆ ಕೃಷಿಯಲ್ಲಿ ಸ್ನಾತಕೋತ್ತರ ಪದವಿ, ವಿಜ್ಞಾನದಲ್ಲಿ ಪದವಿ, ರೇಷ್ಮೆಯಲ್ಲಿ ಸ್ನಾತಕೋತ್ತರ ಡಿಪ್ಲೊಮಾವನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.
ವಯೋಮಿತಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಪ.ಜಾ, ಪ.ಪಂ ಪ್ರವರ್ಗ 1 ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 03 ವರ್ಷಗಳು
ವಿಕಲಚೇತನ/ವಿಧವೆ ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ:
ಪ.ಜಾ, ಪ.ಪಂ ಪ್ರವರ್ಗ 1 ಮತ್ತು ವಿಕಲಚೇತನ ಅಭ್ಯರ್ಥಿಗಳು: 35 ರೂ.
ಮಾಜಿ ಸೈನಿಕ ಅಭ್ಯರ್ಥಿಗಳು: 85 ರೂ.
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 335 ರೂ.
ಸಾಮಾನ್ಯ ಅಭ್ಯರ್ಥಿಗಳು: 635 ರೂ.
ಇದನ್ನು ಓದಿ: ಚಳ್ಳಕೆರೆಯ ಐಐಎಸ್ಸಿಯಲ್ಲಿ ಪ್ರಾಜೆಕ್ಟ್ ಅಸಿಸ್ಟಂಟ್ ಹುದ್ದೆಗೆ ಅರ್ಜಿ ಆಹ್ವಾನ
ಪಾವತಿ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10 ಆಗಸ್ಟ್ 2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08 ಸೆಪ್ಟೆಂಬರ್ 2022
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 09 ಸೆಪ್ಟೆಂಬರ್ 2022
ಅಧಿಸೂಚನೆ ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್:
ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್:
kpsc.kar.nic.in
ಇದನ್ನು ಓದಿ: ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ 34 ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ
ಅರ್ಜಿ ಸಲ್ಲಿಕೆ ಪ್ರಕ್ರಿಯೆ:
ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.
- ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
-ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
-ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್ ಕ್ಲಿಕ್ ಮಾಡಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ