ಯುಪಿಎಸ್ಸಿ, ಕೆಎಸ್, ಆರ್ಆರ್ಬಿ ಸೇರಿದಂತೆ ಅನೇಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉದ್ಯೋಗ ಪಡೆಯಲು ಅನೇಕ ವಿದ್ಯಾರ್ಥಿಗಳು ಸಾಕಷ್ಟು ಶ್ರಮವಹಿಸಿ ಅಧ್ಯಯನ ನಡೆಸುತ್ತಾರೆ. ಈ ವೇಳೆ ಅವರಿಗೆ ಸರಿಯಾದ ಮಾರ್ಗದರ್ಶನ ಕೂಡ ಅವಶ್ಯಕವಾಗಿದೆ. ಇದೇ ಹಿನ್ನಲೆ ಈ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ಭಾವಿಯಾಗಿ ಉಚಿತವಾಗಿ ಉತ್ತಮ ತರಬೇತಿ ನೀಡಲು ಸರ್ಕಾರ ಮುಂದಾಗಿದೆ. ಈ ತರಬೇತಿ ಪರಿಶಿಷ್ಟ ಜಾತಿ ಮತ್ತು ಪಂಗಡ ಅಭ್ಯರ್ಥಿಗಳಿಗೆ ಮಾತ್ರ ಆಗಿದೆ. ಪ್ರಸಕ್ತ ಸಾಲಿನ ತರಬೇತಿಗೆ ಸದ್ಯ ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆ. 30 ಆಗಿದೆ. ಈ ತರಬೇತಿ ವೇಳೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಪ್ರತಿ ತಿಂಗಳು ಶಿಷ್ಯ ವೇತನ ಮತ್ತು ತರಬೇತಿ ವೆಚ್ಚವನ್ನು ಕೂಡ ಸರ್ಕಾರವೇ ಪಾವತಿ ಮಾಡಲಿದೆ.
ತರಬೇತಿ ಪಡೆಯುವುದು ಹೇಗೆ?
ಸರ್ಕಾರದಿಂದ ನೀಡುವ ಈ ತರಬೇತಿಗೆ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು. ಇದಕ್ಕಾಗಿ ರ್ನಾಟಕ ಪರೀಕ್ಷಾ ಪ್ರಾಧಿಕಾರ ಆಸಕ್ತ ಅಭ್ಯರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಿದೆ. ಇದರಲ್ಲಿ ಪಾಸ್ ಆದ ಅಭ್ಯರ್ಥಿಗಳಿಗೆ ತರಬೇತಿ ಸಿಗಲಿದೆ. ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಯಾವ ಯಾವ ಕೋರ್ಸ್ಗಳಿಗೆ ತರಬೇತಿ
ಅಭ್ಯರ್ಥಿಗಳಿಗೆ ಯುಪಿಎಸ್ಸಿ, ಕೆಎಎಸ್, ಬ್ಯಾಂಕಿಂಗ್, ಗ್ರೂಪ್ ಸಿ, ಎಸ್ಎಸ್ಸಿ ಮತ್ತು ಆರ್ಆರ್ಬಿ ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿ ನೀಡಲಾಗುವುದು
ತರಬೇತಿ ಅವಧಿ
ಯುಪಿಎಸ್ಸಿಗೆ 9 ತಿಂಗಳ ತರಬೇತಿ ನೀಡಲಾಗುವುದು
ಕೆಎಎಸ್ಗೆ 7 ತಿಂಗಳ ತರಬೇತಿ ನೀಡಲಾಗುವುದು
ಗ್ರೂಪ್ ಸಿಗೆ 3 ತಿಂಗಳ ತರಬೇತಿ ನೀಡಲಾಗುವುದು.
ಬ್ಯಾಂಕಿಂಗ್, ಎಸ್ಎಸ್ಸಿ , ಮತ್ತು ಆರ್ಆರ್ಬಿಗೂ ಕೂಡ ತಲಾ ಮೂರು ತಿಂಗಳ ತರಬೇತಿ ನೀಡಲಾಗುವುದು
ಇದನ್ನು ಓದಿ: ಸೇನೆ ಸೇರಬೇಕು ಎಂಬ ಮಹಿಳೆಯರಿಗೆ Good News: ಮೇನಲ್ಲಿ ನಡೆಯಲಿದೆ NDA Exam
ವಯಸ್ಸು
ಈ ತರಬೇತಿಗೆ ಅರ್ಜಿ ಸಲ್ಲಿಸುವ ಅಸಕ್ತ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಆಗಿದ್ದು ಗರಿಷ್ಠ 40 ವರ್ಷ ವಯೋಮಿತಿ ಹೊಂದಿರಬೇಕು
ವಿದ್ಯಾರ್ಹತೆ
ಯುಪಿಎಸ್ಸಿಗೆ ಅಭ್ಯರ್ಥಿಗಳು ಪದವಿಯಲ್ಲಿ ಉತ್ತೀರ್ಣರಾಗಿದ್ದು, ಶೇ 55ಕ್ಕಿಂತ ಹೆಚ್ಚು ಅಂಕ ಪಡೆದಿರಬೇಕು. ಕೆಎಎಸ್, ಗ್ರೂಪ್ ಸಿ, ಬ್ಯಾಂಕಿಂಗ್, ಆರ್ಆರ್ಬಿ ಮತ್ತು ಎಸ್ಎಸ್ಸಿಗೆ ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಪದವಿಯಲ್ಲಿ ಶೇ 50 ಅಂಕ ಗಳಿಸಿರಬೇಕು
ಇದನ್ನು ಓದಿ: ನ್ಯಾಯಾಲಯದಲ್ಲಿ ಸ್ಟೇನೋಗ್ರಾಫರ್, ಟೈಪಿಸ್ಟ್ ಹುದ್ದೆ ಖಾಲಿ; SSLC ಪಾಸ್ ಆಗಿದ್ರೆ ಸಾಕು
ವಿಶೇಷ ಸೂಚನೆ
ಈ ತರಬೇತಿಗೆ ಅರ್ಜಿ ಸಲ್ಲಿಸುವವರು ಕರ್ನಾಟಕ ನಿವಾಸಿಯಾಗಿದ್ದು, ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿರಬೇಕು. ಅಭ್ಯರ್ಥಿಗಳ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ 5 ಲಕ್ಷ ಮೀರಿರಬಾರದು.
ಶಿಷ್ಯ ವೇತನ
ಯುಪಿಎಸ್ಸಿ ತರಬೇತಿ ದೆಹಲಿಯಲ್ಲಿ ಪಡೆದರೆ ತಿಂಗಳಿಗೆ 10 ಸಾವಿರ, ಹೈದರಾಬಾದ್ನಲ್ಲಿ ಪಡೆದರೆ 8 ಸಾವಿರ, ಬೆಂಗಳೂರಿನಲ್ಲಿ ಪಡೆದ 6 ಸಾವಿರ ಮತ್ತು ಇತರೆ ಸ್ಥಳಗಳಲ್ಲಿ ಪಡೆದರೆ 5 ಸಾವಿರ ಶಿಷ್ಯ ವೇತನ ನೀಡಲಾಗುವುದು.
ಇನ್ನು ಕೆಎಎಸ್, ಬ್ಯಾಂಕಿಂಗ್, ಗ್ರೂಪ್ ಸಿ ಇತರೆ ಹುದ್ದೆಗೆ ಬೆಂಗಳೂರು, ಧಾರವಾಡ, ಬೆಳಗಾಂ, ದಾವಣಗರೆ ಇತರೆ ಸ್ಥಳಗಳಲ್ಲಿ ಸ್ಥಳೀಯ ಅಭ್ಯರ್ಥಿಗೆ 4ಸಾವಿರ ಮತ್ತು ಹೊರ ಜಿಲ್ಲೆ ಅಭ್ಯರ್ಥಿಗಳಿಗೆ 5 ಸಾವಿರ ಶಿಷ್ಯ ವೇತನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು https://sw.kar.nic.in/ ಈ ಜಾಲತಾಣಕ್ಕೆ ಭೇಟಿ ನೀಡಬೇಕು. ಇಲ್ಲಿ ಅರ್ಜಿಯನ್ನು ಸಂಪೂರ್ಣವಾಗಿ ಓದಿ ನಂತರ ಭರ್ತಿ ಮಾಡಬೇಕು. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆ. 30 ಆಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ