Bengaluru Urban Zilla Panchayat Recruitment 2023: ರಾಜ್ಯ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಗುಡ್ನ್ಯೂಸ್ ಇದೆ. ಬೆಂಗಳೂರು ನಗರ ಜಿಲ್ಲಾ ಪಂಚಾಯತ್(Bengaluru Urban Zilla Panchayat) ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 1 ಜಲ ಸಂಜೀವಿನಿ ಜಿಲ್ಲಾ ಸಂಯೋಜಕ ಹುದ್ದೆ ಖಾಲಿ ಇದೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಈ ಹುದ್ದೆಗೆ ಅಭ್ಯರ್ಥಿಯನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಫೆಬ್ರವರಿ 24, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್ಲೈನ್/ಪೋಸ್ಟ್ (Offline) ಮುಖಾಂತರ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಸರ್ಕಾರಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಬೆಂಗಳೂರು ನಗರ ಜಿಲ್ಲಾ ಪಂಚಾಯತ್ |
ಹುದ್ದೆ | ಜಲ ಸಂಜೀವಿನಿ ಜಿಲ್ಲಾ ಸಂಯೋಜಕ |
ಒಟ್ಟು ಹುದ್ದೆ | 1 |
ವಿದ್ಯಾರ್ಹತೆ | ಬಿ.ಎಸ್ಸಿ, ಬಿ.ಟೆಕ್ |
ವೇತನ | ಮಾಸಿಕ ₹ 50,000 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 24, 2023 |
ಇದನ್ನೂ ಓದಿ: JOBS: ಬೆಳಗಾವಿ ಸ್ಮಾರ್ಟ್ ಸಿಟಿಯಲ್ಲಿ ಕೆಲಸಕ್ಕೆ ಅರ್ಜಿ ಹಾಕಿ- ಫೆ.16 ಲಾಸ್ಟ್ ಡೇಟ್
ಜಲ ಸಂಜೀವಿನಿ ಜಿಲ್ಲಾ ಸಂಯೋಜಕ ಹುದ್ದೆಗೆ ಅಭ್ಯರ್ಥಿಯನ್ನು 1 ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಹೊರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಿಸಿಕೊಳ್ಳಲಾಗುತ್ತದೆ.
ಅರ್ಹತೆಗಳು:
ನಿವೃತ್ತಿ ಹೊಂದಿರುವ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಹಾಕಬೇಕು.
ಅಭ್ಯರ್ಥಿಗಳು ಕೃಷಿ/ಜಲಾನಯನ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಕನಿಷ್ಠ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ಕನಿಷ್ಠ ಸಹಾಯಕ ಕೃಷಿ ನಿರ್ದೇಶಕ ಹುದ್ದೆಯಲ್ಲಿ ನಿವೃತ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಹಾಕಬಹುದು.
ಜಿಲ್ಲಾ ಪಂಚಾಯತ್ & ಇತರೆ ಅನುಷ್ಠಾನ ಇಲಾಖೆಗಳೊಡನೆ ಸಮನ್ವಯ ಸಾಧಿಸುವ ಸಾಮರ್ಥ್ಯ ಹೊಂದಿರಬೇಕು.
ಸತತವಾಗಿ ಕ್ಷೇತ್ರ ಭೇಟಿ ಮಾಡುವ ಹಾಗೂ ಎಲ್ಲಾ ಅಧಿಕಾರಿ/ ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡುವ ಸಾಮರ್ಥ್ಯ ಹೊಂದಿರಬೇಕು.
ವಯೋಮಿತಿ:
ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು.
ಇದನ್ನೂ ಓದಿ: Bengaluru Jobs: ತಿಂಗಳಿಗೆ ₹ 35,000 ಸಂಬಳ- ಡಿಗ್ರಿ ಪಾಸಾದವರು ನಾಳೆಯೊಳಗೆ ಅರ್ಜಿ ಹಾಕಿ
ವೇತನ:
ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಜಲ ಸಂಜೀವಿನಿ ಜಿಲ್ಲಾ ಸಂಯೋಜಕ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ ₹ 50,000 ವೇತನ ಹಾಗೂ ಪ್ರಯಾಣ ಭತ್ಯೆ & ಇತರೆ ಭತ್ಯೆ 5,000 ರೂ, ಕೊಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಫೆ.24, 2023 ಸಂಜೆ 5.30ರೊಳಗೆ ಕಳುಹಿಸಬೇಕು.
ಬೆಂಗಳೂರು ನಗರ ಜಿಲ್ಲಾ ಪಂಚಾಯತ್
ಬನಶಂಕರಿ ದೇವಸ್ಥಾನದ ಹತ್ತಿರ
ಎಸ್.ಕರಿಯಪ್ಪ ರಸ್ತೆ
ಬನಶಂಕರಿ
ಬೆಂಗಳೂರು
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 24, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ