• ಹೋಂ
  • »
  • ನ್ಯೂಸ್
  • »
  • Jobs
  • »
  • RDPR Karnataka: ಓಂಬುಡ್ಸ್​ಪರ್ಸನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಗ್ರಾಮೀಣಾಭಿವೃದ್ಧಿ & ಪಂಚಾಯತ್​ ರಾಜ್​ ಇಲಾಖೆ

RDPR Karnataka: ಓಂಬುಡ್ಸ್​ಪರ್ಸನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಗ್ರಾಮೀಣಾಭಿವೃದ್ಧಿ & ಪಂಚಾಯತ್​ ರಾಜ್​ ಇಲಾಖೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಗದಗ, ತುಮಕೂರು ಮತ್ತು ವಿಜಯಪುರದಲ್ಲಿ ಓಂಬುಡ್ಸ್​ಪರ್ಸನ್ ಹುದ್ದೆಗಳು ಖಾಲಿ ಇವೆ. ಈ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ.

  • News18 Kannada
  • 4-MIN READ
  • Last Updated :
  • Karnataka, India
  • Share this:

RDPR Karnataka Recruitment 2023: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆ ಕರ್ನಾಟಕ (Rural Development and Panchayat Raj Department Karnataka ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಓಂಬುಡ್ಸ್​ಪರ್ಸನ್ (Ombudsperson)​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 13, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್​ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.


ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದುಕೊರತೆಗಳ ನಿವಾರಣೆಗಾಗಿ ಓಂಬುಡ್ಸ್​ಪರ್ಸನ್​ ಹುದ್ದೆಗಳನ್ನು ರಚಿಸಲಾಗಿದೆ. ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಗದಗ, ತುಮಕೂರು ಮತ್ತು ವಿಜಯಪುರದಲ್ಲಿ ಓಂಬುಡ್ಸ್​ಪರ್ಸನ್ ಹುದ್ದೆಗಳು ಖಾಲಿ ಇವೆ. ಈ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆ ಕರ್ನಾಟಕ
ಹುದ್ದೆಓಂಬುಡ್ಸ್​ಪರ್ಸನ್
ಒಟ್ಟು ಹುದ್ದೆ6
ವಿದ್ಯಾರ್ಹತೆಅಧಿಸೂಚನೆ ಪರಿಶೀಲಿಸಿ
ವೇತನನಿಗದಿಪಡಿಸಿಲ್ಲ
ಉದ್ಯೋಗದ ಸ್ಥಳಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನಏಪ್ರಿಲ್ 13, 2023

ಹುದ್ದೆಯ ಮಾಹಿತಿ:
ಚಾಮರಾಜನಗರ- 1
ಚಿಕ್ಕಮಗಳೂರು- 1
ಗದಗ- 1
ಮಂಡ್ಯ-1
ತುಮಕೂರು-1
ವಿಜಯಪುರ-1


ಇದನ್ನೂ ಓದಿ: Post Office Jobs: ಪೋಸ್ಟ್ ಆಫೀಸ್ ಹುದ್ದೆ ಖಾಲಿ ಇದೆ- 10th ಪಾಸಾಗಿದ್ರೆ 63 ಸಾವಿರ ಸಂಬಳ


ವಿದ್ಯಾರ್ಹತೆ & ವಯೋಮಿತಿ:
ಅಭ್ಯರ್ಥಿಗಳು ಅಧಿಸೂಚನೆಯನ್ನು ಪರಿಶೀಲಿಸಿ




ಅನುಭವ:
ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ವೇತನ:
ನಿಗದಿಪಡಿಸಿಲ್ಲ.


ಇದನ್ನೂ ಓದಿ: KPSC Recruitment 2023: ಕಾಮರ್ಸ್ ಪದವೀಧರರಿಗೆ ಉದ್ಯೋಗಾವಕಾಶ- ತಿಂಗಳಿಗೆ 52 ಸಾವಿರ ಸಂಬಳ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಶೈಕ್ಷಣಿಕ ದಾಖಲೆಗಳು, ಅನುಭವ ಪತ್ರ ಮತ್ತು ರೆಸ್ಯೂಮ್​​ ಜೊತೆಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಅರ್ಜಿಯನ್ನು ಪಡೆದುಕೊಳ್ಳಲು ಅಧಿಕೃತ ವೆಬ್​ಸೈಟ್​ www.rdpr.karnataka.gov.in ಗೆ ಭೇಟಿ ನೀಡಿ.


ಆಯುಕ್ತರು
ಗ್ರಾಮೀಣಾಭಿವೃದ್ಧಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
5ನೇ ಮಹಡಿ
ಫ್ಲಾಟ್ ನಂ. 1243
ಕೆಎಸ್‌ಐಐಡಿಸಿ ಕಟ್ಟಡ
ಐಟಿ ಪಾರ್ಕ್
ಸೌತ್ ಬ್ಲಾಕ್
ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್
ಬೆಂಗಳೂರು-560044



ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 13, 2023


ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22342163 ಗೆ ಕರೆ ಮಾಡಿ.

Published by:Latha CG
First published: