ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ (Home Minister Amit Shah) ರೋಡ್ ಅವರು ಮಂಗಳೂರಿನಲ್ಲಿ (Mangalore News) ನಡೆಸಬೇಕಿದ್ದ ಶೋ ರದ್ದುಗೊಂಡಿದೆ. ರೋಡ್ ಶೋ ಸಂಚರಿಸುವ ದಾರಿಯಲ್ಲಿ ಕೊರಗಜ್ಜ ದೈವದ (Koragajja Daiva Kola) ಕೋಲ ನಡೆಯಲಿರುವ ಹಿನ್ನೆಲೆಯಲ್ಲಿ ರೋಡ್ ಶೋವನ್ನು (Amit Shah Road Show) ರದ್ದುಗೊಳಿಸಲಾಗಿದೆ.
ಮಂಗಳೂರಿನ ಪದವಿನಂಗಡಿ ಬಳಿಯ ಕೊರಗಜ್ಜ ದೈವಸ್ಥಾನದಲ್ಲಿ ಶನಿವಾರ ಕೋಲ ನಿಗದಿಯಾಗಿತ್ತು. ಹೀಗಾಗಿ ಭದ್ರತೆ ದೃಷ್ಟಿಯಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ರದ್ದುಗೊಳಿಸಲಾಗಿದೆ.
ಮಂಗಳೂರು ಏರ್ ಪೋರ್ಟ್ ಬಳಿಯೇ ಸಭೆ ನಡೆಸಲು ನಿರ್ಧರಿಸಿದ ಬಿಜೆಪಿ
ಪದವಿನಂಗಡಿ ಬಳಿಯ ಖಾಸಗಿ ಸಭಾಂಗಣದಲ್ಲಿ ನಡೆಯಬೇಕಿದ್ದ ಬಿಜೆಪಿ ಪಕ್ಷದ ಸಭೆಯೂ ಸ್ಥಳಾಂತರಗೊಂಡಿದೆ. ಮಂಗಳೂರು ಏರ್ ಪೋರ್ಟ್ ಬಳಿಯೇ ಬಿಜೆಪಿ ಪಕ್ಷದ ಸಭೆ ನಡೆಸಲು ನಿರ್ಧಾರ ಮಾಡಲಾಗಿದೆ.
ಇದನ್ನೂ ಓದಿ: Bharat Mata Mandir Puttur: ಪುತ್ತೂರಿನಲ್ಲಿ ಭಾರತ ಮಾತೆಯ ಮಂದಿರ! ಹೆಚ್ಚಲಿದೆ ಇನ್ನಷ್ಟು ದೇಶಪ್ರೇಮ
ಇದನ್ನೂ ಓದಿ: Puttur: ಐಸ್ ಕ್ಯಾಂಡಿ ಮಾರಿ 15 ಲಕ್ಷ ಆದಾಯ! ಸೂಜಿಮೆಣಸಿಂದಲೂ ಐಸ್ಕ್ರೀಮ್ ತಯಾರಿ
ಕೊರಗಜ್ಜ ದೈವದ ಕೋಲಕ್ಕೆ ಸಮಸ್ಯೆಯಾಗಬಾರದೆಂದು ರೋಡ್ ಶೋ ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ