ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: 11 ಮಂದಿ ಸಾವು; ಅನೇಕ ಮಂದಿಗೆ ಗಾಯ

ಘಟನಾ ಚಿತ್ರ

ಘಟನಾ ಚಿತ್ರ

ಘಟನೆಯಲ್ಲಿ ಸಾವನ್ನಪ್ಪಿದ ಸಂತ್ರಸ್ತ ಕುಟುಂಬಗಳಿಗೆ ಪಿಎಂಎನ್​ಆರ್​ಎಫ್​ ನಿಧಿಯಿಂದ ತಲಾ 2 ಲಕ್ಷ ಮತ್ತು ಗಂಭೀರ ಗಾಯಗೊಂಡವರಿಗೆ ತಲಾ 50 ಸಾವಿರ ಪರಿಹಾರ ನೀಡುವುದಾಗಿ ಪ್ರಧಾನಿ ಕಚೇರಿ ಟ್ವೀಟ್​ ಮೂಲಕ ತಿಳಿಸಿದೆ.

  • Share this:

    ಚೈನ್ನೈ (ಫೆ. 12): ತಮಿಳುನಾಡಿದನ ವಿರುಧನಗರದಲ್ಲಿನ ಪಟಾಕಿ ಫ್ಯಾಕ್ಟರಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಈ ಅವಘಡದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಇಲ್ಲಿನ ಸಾತೂರ್​ ಬಳಿಯ ಆಚಂಗುಲಂ ಪ್ರದೇಶದಲ್ಲಿ ಈ ಖಾಸಗಿ ಫ್ಯಾಕ್ಟರಿ ಇತ್ತು. ಈ ಭಾರೀ ಅನಾಹುತದಲ್ಲಿ 36ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ಸಮೀಪದ ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟಾಕಿ ತಯಾರಿಸುವ ವೇಳೆ ಕೆಲವು ರಾಸಾಯನಿಕ ಮಿಶ್ರಣ ಮಾಡುವಾಗ ಈ ಅನಾಹುತ ನಡೆದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ 10 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ಮುಂದಾಗಿದೆ.  


    ಇನ್ನು ಈ ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ವಿಷಾದ ವ್ಯಕ್ತಪಡಿಸಿ ಟ್ವೀಟ್​ ಮಾಡಿದ್ದಾರೆ.



    ಘಟನೆಯಲ್ಲಿ ಸಾವನ್ನಪ್ಪಿದ ಸಂತ್ರಸ್ತ ಕುಟುಂಬಗಳಿಗೆ ಪಿಎಂಎನ್​ಆರ್​ಎಫ್​ ನಿಧಿಯಿಂದ ತಲಾ 2 ಲಕ್ಷ ಮತ್ತು ಗಂಭೀರ ಗಾಯಗೊಂಡವರಿಗೆ ತಲಾ 50 ಸಾವಿರ ಪರಿಹಾರ ನೀಡುವುದಾಗಿ ಪ್ರಧಾನಿ ಕಚೇರಿ ಟ್ವೀಟ್​ ಮೂಲಕ ತಿಳಿಸಿದೆ.


    ಇದನ್ನು ಓದಿ: ಮೇ 24ರಿಂದ ದ್ವಿತೀಯ ಪಿಯು ಪರೀಕ್ಷೆ; ಅಧಿಕೃತ ವೇಳಾಪಟ್ಟಿ ಪ್ರಕಟ


    ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಸಾವನ್ನಪ್ಪಿದ ಕುಟುಂಬದವರಿಗೆ ತಲಾ 3 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ 1 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
    ಈ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಪಳನಿಸ್ವಾಮಿ, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಜಿಲ್ಲಾಧಿಕಾರಿ ಮತ್ತು ವೈದ್ಯಕೀಯ ತಜ್ಞರಿಗೆ ಸೂಚನೆ ನೀಡಲಾಗಿದೆ. ಜೊತೆಗೆ ಗಾಯಗೊಂಡ ಕುಟುಂಬದವರಿಗೆ ಈ ಸಂಬಂಧ ಅಗತ್ಯ ಮಾಹಿತಿ ನೀಡುವ ವ್ಯವಸ್ಥೆ ಮಾಡುವಂತೆ ತಿಳಿಸಲಾಗಿದೆ ಎಂದಿದ್ದಾರೆ.


    ಘಟನೆ ಕುರಿತು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಕೂಡ ವಿಷಾದ ವ್ಯಕ್ತಪಡಿಸಿದ್ದು, ಘಟನಾ ಸಂತ್ರಸ್ತರಿಗೆ ತಕ್ಷಣ ರಕ್ಷಣೆ , ಬೆಂಬಲ ಮತ್ತು ಪರಿಹಾರ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ


    (ವರದಿ: ಬಿ ಶಿವಕುಮಾರ್​)

    Published by:Seema R
    First published: