news18-kannada Updated:November 26, 2020, 5:56 PM IST
ಸಾಂದರ್ಭಿಕ ಚಿತ್ರ
ಶ್ರೀನಗರ(ನವೆಂಬರ್. 26): ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಹೊರವಲಯದಲ್ಲಿರುವ ಎಚ್ಎಂಟಿ ಪ್ರದೇಶದ ಬಳಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ. ಗಸ್ತಿನಲ್ಲಿ ಸೈನಿಕರು ತಿರುತ್ತಿದ್ದರು ಈ ಸಮಯದಲ್ಲಿ ಭಯೋತ್ಪಾದಕರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಗ್ರೋಟಾ ಬಳಿಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭದ್ರತಾ ಪಡೆಗಳ ಮುಖಾಮುಖಿಯಲ್ಲಿ ಟ್ರಕ್ನಲ್ಲಿ ಅಡಗಿದ್ದ ನಾಲ್ವರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಸಾವನ್ನಪ್ಪಿದ ಕೆಲ ದಿನಗಳ ನಂತರ ಈ ದಾಳಿ ಸಂಭವಿಸಿದೆ.
ನಾಗ್ರೋಟಾ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದರು. ಭಯೋತ್ಪಾದಕರು ದೊಡ್ಡ ದಾಳಿಯನ್ನು ನಡೆಸಲು ಯೋಜಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜನೆಯಾದ ನಂತರ ಜಮ್ಮು ಮತ್ತು ಕಾಶ್ಮೀರವು ನವೆಂಬರ್ 28 ಮತ್ತು ಡಿಸೆಂಬರ್ 19 ರ ನಡುವೆ ಎಂಟು ಹಂತಗಳಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಯನ್ನು ನಡೆಸಲಿದೆ. ಮತ್ತು ಡಿಸೆಂಬರ್ 22 ರಂದು ಮತ ಎಣಿಕೆ ನಡೆಯಲಿದೆ. ಈ ದಾಳಿಯಿಂದ ಭಯೋತ್ಪಾದಕರು ಚುನಾವಣೆಯನ್ನು ಅಡ್ಡಿಪಡಿಸಲು ಈ ರೀತಿಯ ದಾಳಿ ನಡೆಸುತ್ತಿದ್ದಾರೆ ಎಂದು ಸರ್ಕಾರ ಹೇಳಿದೆ.
Published by:
G Hareeshkumar
First published:
November 26, 2020, 5:30 PM IST