ಶ್ರೀನಗರ(ನವೆಂಬರ್. 26): ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಹೊರವಲಯದಲ್ಲಿರುವ ಎಚ್ಎಂಟಿ ಪ್ರದೇಶದ ಬಳಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ. ಗಸ್ತಿನಲ್ಲಿ ಸೈನಿಕರು ತಿರುತ್ತಿದ್ದರು ಈ ಸಮಯದಲ್ಲಿ ಭಯೋತ್ಪಾದಕರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಗ್ರೋಟಾ ಬಳಿಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭದ್ರತಾ ಪಡೆಗಳ ಮುಖಾಮುಖಿಯಲ್ಲಿ ಟ್ರಕ್ನಲ್ಲಿ ಅಡಗಿದ್ದ ನಾಲ್ವರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಸಾವನ್ನಪ್ಪಿದ ಕೆಲ ದಿನಗಳ ನಂತರ ಈ ದಾಳಿ ಸಂಭವಿಸಿದೆ.
ನಾಗ್ರೋಟಾ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದರು. ಭಯೋತ್ಪಾದಕರು ದೊಡ್ಡ ದಾಳಿಯನ್ನು ನಡೆಸಲು ಯೋಜಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ