ಪಂಜಾಬ್ (ಆಗಸ್ಟ್ 08); ಅಮೇರಿಕ ತನ್ನ ಸೈನಿಕರನ್ನು ಹಿಂಪಡೆದುಕೊಂಡ ಬೆನ್ನಿಗೆ ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ಕೈಮೀರಿದೆ. ತಾಲಿಬಾನ್ ಬಂಡುಕೋರರು ಭಾನುವಾರ ಕಾಬೂಲ್ ಪ್ರವೇಶಿಸಿ ಇಡೀ ದೇಶವನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಅಘ್ಘಾನ್ ಅಧ್ಯಕ್ಷ ಅಶ್ರಫ್ ಘಾನಿ ಕೂಡ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ತಜಕಿಸ್ಥಾನಕ್ಕೆ ಪಲಾಯನ ಮಾಡಿದ್ದಾರೆ. ಅಘ್ಘಾನ್ನಲ್ಲಿ ಎದ್ದಿರುವ ಆಂತರಿಕ ಗಲಭೆಯಿಂದಾಗಿ ಅಲ್ಲಿ ನೆಲೆಸಿರುವ ಭಾರತೀಯ ರಾಯಭಾರ ಸಿಬ್ಬಂದಿಯನ್ನು ಮತ್ತು ನಾಗರಿಕರನ್ನು ಭಾರತಕ್ಕೆ ವಾಪಸ್ ಕರೆತರುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಆರಂಭಿಸಿದೆ. ಮುಂದಿನ 48 ಗಂಟೆಗಳಲ್ಲಿ ಎಲ್ಲರನ್ನು ಭಾರತಕ್ಕೆ ವಾಪಸ್ ಕರೆತರುವ ಕೆಲಸ ಪೂರ್ಣಗೊಳ್ಳಲಿದೆ ಎಂದು ವಿದೇಶಾಂಗ ಸಚಿವಾಲಯ ಭರವಸೆ ನೀಡಿದೆ.
ಇದರ ಬೆನ್ನಿಗೆ ಇಂದು ಕೇಂದ್ರ ಸರ್ಕಾರದ ಎದುರು ಮನವಿ ಸಲ್ಲಿಸಿರುವ ಪಂಜಾಬ್ ರಾಜ್ಯದ ಸಿಎಂ ಅಮರೀಂದರ್ ಸಿಂಗ್, "ಅಫ್ಘಾನಿಸ್ತಾನದ ಗುರುದ್ವಾರದಲ್ಲಿ ಸಿಲುಕಿರುವ 200 ಸಿಖ್ಖರನ್ನು ಒಳಗೊಂಡಂತೆ ಎಲ್ಲಾ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸಬೇಕು" ವಿನಂತಿಸಿಕೊಂಡಿದ್ದಾರೆ
ಈ ಬಗ್ಗೆ ಮಾತನಾಡಿರುವ ಕ್ಯಾಪ್ಟನ್ ಅಮರೀಂದರ್ ಸಿಂಗ್, "ಅಘ್ಘಾನಿಸ್ತಾನದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಇಡೀ ಆಘ್ಘನ್ ದೇಶವನ್ನು ತಾಲಿಬಾನಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಹೀಗಾಗಿ ಅಲ್ಲಿ ಸಿಲುಕಿರುವ ಭಾರತೀಯರನ್ನು ರಕ್ಷಿಸಬೇಕಾದದ್ದು ನಮ್ಮ ಕರ್ತವ್ಯ. ಈ ಸ್ಥಳಾಂತರ ಕಾರ್ಯದಲ್ಲಿ ಅಗತ್ಯವಿರುವ ಯಾವುದೇ ಸಹಾಯವನ್ನು ನೀಡಲು ನಮ್ಮ ಸರ್ಕಾರ ಸಿದ್ಧವಿದೆ" ಎಂದು ಪಂಜಾಬ್ ಮುಖ್ಯಮಂತ್ರಿ ತಿಳಿಸಿದ್ದಾರೆ.
ರಾಜಧಾನಿ ಕಾಬೂಲ್ ತಾಲಿಬಾನ್ ಕೈಗೆ ಸಿಲುಕುವ ಮುನ್ನ ಅಧ್ಯಕ್ಷ ಅಶ್ರಫ್ ಘನಿ ದೇಶವನ್ನು ತೊರೆದಿದ್ದರಿಂದ ಅಫ್ಘಾನಿಸ್ತಾನವು ಅನಿಶ್ಚಿತತೆಯಲ್ಲಿ ಸಿಲುಕಿದೆ.
Urge @DrSJaishankar, MEA, GoI, to arrange for immediate evacuation of all Indians, including around 200 Sikhs, stuck in a Gurudwara in Afghanistan after the #Taliban takeover. My govt is willing to extend any help needed to ensure their safe evacuation. @MEAIndia
— Capt.Amarinder Singh (@capt_amarinder) August 16, 2021
Afghanistan’s fall to #Taliban doesn’t augur well for our country. It’ll strengthen the Sino-Pak nexus against India (China has already sought militia’s help on Uyghur). The signs are not at all good, we need to be extra vigilant now at all our borders.
— Capt.Amarinder Singh (@capt_amarinder) August 15, 2021
ಶನಿವಾರ, ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿಯು, "ಅಫ್ಘಾನಿಸ್ತಾನದಲ್ಲಿ ವಾಸಿಸುವ ಸಿಖ್ಖರ ಸುರಕ್ಷತೆಯನ್ನು ಒಕ್ಕೂಟ ಸರ್ಕಾರ ಖಾತರಿಪಡಿಸಬೇಕು. ಭಾರತಕ್ಕೆ ಬರಲು ಬಯಸುವ ಸಿಖ್ಖರನ್ನು ಕರೆತರಲು ಬೇಷರತ್ತಾದ ವ್ಯವಸ್ಥೆ ಮಾಡಬೇಕು" ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಒತ್ತಾಯಿಸಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ