• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • ದೆಹಲಿ ಬೆಂಕಿ ದುರಂತಕ್ಕೆ 43 ಬಲಿ; ಶೋಕ ಸಾಗರದಲ್ಲಿ ಭಾರತ, ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಕೇಜ್ರಿವಾಲ್

ದೆಹಲಿ ಬೆಂಕಿ ದುರಂತಕ್ಕೆ 43 ಬಲಿ; ಶೋಕ ಸಾಗರದಲ್ಲಿ ಭಾರತ, ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಕೇಜ್ರಿವಾಲ್

ಪ್ರಧಾನಿ ನರೇಂದ್ರ ಮೋದಿ.

ಪ್ರಧಾನಿ ನರೇಂದ್ರ ಮೋದಿ.

ದೆಹಲಿಯ ಅಗ್ನಿ ದುರಂತ ತೀರಾ ಭೀಕರ ಘಟನೆ. ದುರಂತದಲ್ಲಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರು ಶೀಘ್ರದಲ್ಲಿ ಚೇತರಿಸಿಕೊಳ್ಳಲಿ. ಗಾಯಾಳುಗಳಿಗೆ ಸಂಬಂಧ ಪಟ್ಟ ಇಲಾಖೆ ಸೂಕ್ತ ಸಹಾಯ ಮಾಡಬೇಕು. ಅವರ ಅವಶ್ಯಕತೆಗಳನ್ನು ಪೂರೈಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ.

  • Share this:

ದೆಹಲಿ (ಡಿಸೆಂಬರ್​ 08): ರಾಷ್ಟ್ರ ರಾಜಧಾನಿ ದೆಹಲಿಯ ಝಾನ್ಸಿರಾಣಿ ರಸ್ತೆಯಲ್ಲಿರುವ ಕೃಷಿ ಮಾರುಕಟ್ಟೆ ಗೋದಾಮಿನ ಬಹುಮಹಡಿ ಕಟ್ಟಡದಲ್ಲಿ ಇಂದು ದಿಢೀರ್ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಗೆಗೆ 43 ಜನ ಸಾವನ್ನಪ್ಪಿದ್ದರೆ, 21 ಜನ ಗಂಭೀರ ಗಾಯಕ್ಕೆ ತುತ್ತಾಗಿದ್ದಾರೆ.

ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಗಾಯಾಳುಗಳ ಪೈಕಿ ಅನೇಕರು ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇಂದು ಮುಂಜಾನೆ ಕಟ್ಟಡಲ್ಲಿ ಕಾಣಿಸಿಕೊಂಡ ಬೆಂಕಿ ನೋಡನೋಡುತ್ತಿದ್ದಂತೆ ಇಡೀ ಕಟ್ಟಡವನ್ನು ವ್ಯಾಪಿಸಿದ ಕಾರಣ ಜನ ನಿದ್ರೆಯಲ್ಲೇ ಬೆಂಕಿಗೆ ಆಹುತಿಯಾಗಿದ್ದಾರೆ. ಸುಮಾರು 30ಕ್ಕೂ ಹೆಚ್ಚು ಆಗ್ನಿ ಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಕೊನೆಗೂ ಬೆಂಕಿಯನ್ನು ನಂದಿಸಲಾಗಿದೆ. ಅಲ್ಲದೆ, ಸುಮಾರು 50ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ.

ಕಟ್ಟಡದಲ್ಲಿ ಇನ್ನೂ ಅನೇಕರು ಸಿಲುಕಿರುವ ಸಾಧ್ಯತೆ ಇದ್ದು, ಎಲ್ಲರನ್ನೂ ರಕ್ಷಿಸಲಾಗುವುದು ಎಂದು ಅಗ್ನಿಶಾಮಕ ದಳದ ಸಿಬ್ಬಂಧಿ ತಿಳಿಸಿದ್ದಾರೆ. ಆದರೆ, ಈ ಅಗ್ನಿ ಅವಘಡಕ್ಕೆ ಕಾರಣ ನಿಖರ ಕಾರಣ ಏನು ಎಂಬುದು ಮಾತ್ರ ಈ ವರೆಗೆ ಸ್ಪಷ್ಟವಾಗಿಲ್ಲ.

ಈ ನಡುವೆ ಘಟನೆಯ ಕುರಿತು ರಾಷ್ಟ್ರ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ದೆಹಲಿ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಕುರಿತು ಟ್ವೀಟ್​ ಮೂಲಕ ಸಂತಾಪ ಸೂಚಿಸಿರುವ ಮಾಜಿ ಸಿಎಂ ಸಿದ್ದರಾಮುಯ್ಯ "40ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿರುವ ಅಗ್ನಿ ದುರಂತ ನನ್ನನ್ನು ತೀವ್ರ ಶೋಕಕ್ಕೆ ದೂಡಿದೆ ಮೃತರ ಆತ್ಮಕ್ಕೆ ಶಾಂತಿ ದೊರಕಲಿ. ಮೃತರ ಅಗಲಿಕೆಯನ್ನು ಬರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ನೀಡಲಿ" ಎಂದಿದ್ದಾರೆ.



ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, "ದೆಹಲಿಯ ಅಗ್ನಿ ದುರಂತ ತೀರಾ ಭೀಕರ ಘಟನೆ. ದುರಂತದಲ್ಲಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರು ಶೀಘ್ರದಲ್ಲಿ ಚೇತರಿಸಿಕೊಳ್ಳಲಿ. ಗಾಯಾಳುಗಳಿಗೆ ಸಂಬಂಧ ಪಟ್ಟ ಇಲಾಖೆ ಸೂಕ್ತ ಸಹಾಯ ಮಾಡಬೇಕು. ಅವರ ಅವಶ್ಯಕತೆಗಳನ್ನು ಪೂರೈಸಬೇಕು" ಎಂದು ಸೂಚಿಸಿದ್ದಾರೆ


ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಟ್ವೀಟ್ ಮಾಡಿದ್ದು, "ಇದು ದೆಹಲಿಯಲ್ಲಿ ನಡೆದಿರುವ ಎರಡನೇ ಅತಿದೊಡ್ಡ ಬೆಂಕಿ ಅನಾಹುತ. ಈ ಸುದ್ದಿ ಎಲ್ಲರನ್ನೂ ಆಘಾತಕ್ಕೆ ದೂಡಿದ್ದು, ತುಂಬಾ ನೋವಾಗಿದೆ. ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದು, ಅಗ್ನಿಶಾಮಕದ ದಳ ಶಕ್ತಿ ಮೀರಿ ದುಡಿಯುತ್ತಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ" ಎಂದಿದ್ದಾರೆ.

ಅಲ್ಲದೆ, ಮೃತಪಟ್ಟವರಿಗೆ 10 ಲಕ್ಷ ಪರಿಹಾರ ಘೋಷಿಸಿದ್ದು, ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ" ಎಂದು ಆಶ್ವಾಸನೆ ನೀಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿರುವ ಅರಿವಿಂದ ಕೇಜ್ರಿವಾಲ್, "ಬೆಂಕಿ ಅನಾಹುತಕ್ಕೆ ಕಾರಣ ಏನು? ಎಂಬ ಕುರಿತು ತನಿಖೆ ನಡೆಸಿ ಒಂದು ವಾರದಲ್ಲಿ ವರದಿ ನೀಡುವಂತೆಯೂ" ತಾಕೀತು ಮಾಡಿದ್ದಾರೆ.

ಇದನ್ನೂ ಓದಿ : BIG BREAKING: ದೆಹಲಿಯ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ; 43 ಜನ ಸಜೀವ ದಹನ

First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು