• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • ಜೈಲಿಂದಲೇ 10ನೇ ತರಗತಿ ಪರೀಕ್ಷೆಗೆ ತಯಾರಾಗುತ್ತಿರುವ ಹರಿಯಾಣದ ಮಾಜಿ ಸಿಎಂ 86 ವರ್ಷದ ಚೌಟಾಲಾ!

ಜೈಲಿಂದಲೇ 10ನೇ ತರಗತಿ ಪರೀಕ್ಷೆಗೆ ತಯಾರಾಗುತ್ತಿರುವ ಹರಿಯಾಣದ ಮಾಜಿ ಸಿಎಂ 86 ವರ್ಷದ ಚೌಟಾಲಾ!

ಓಂ ಪ್ರಕಾಶ್ ಚೌಟಾಲಾ.

ಓಂ ಪ್ರಕಾಶ್ ಚೌಟಾಲಾ.

ಓಂ ಪ್ರಕಾಶ್ ಚೌಟಾಲಾ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾಗಲೇ ಪರೀಕ್ಷೆಗಾಗಿ ಅಧ್ಯಯನ ಮಾಡಿದ್ದರು. ಆದರೆ, ಇದೀಗ ಪರೋಲ್​ನಲ್ಲಿ ಹೊರಗಿರುವ ಅವರು ಪರೀಕ್ಷೆಯನ್ನು ಎದುರಿಸಿದ್ದಾರೆ.

  • Share this:

    ಚಂಡೀಘಡ (ಆಗಸ್ಟ್​ 19); ಶಿಕ್ಷಕರ ನೇಮಕಾತಿ ಹಗರಣದಲ್ಲಿ ಜೈಲು ಪಾಲಾಗಿರುವ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಇಂದು 10ನೇ ತರಗತಿ ತರಗತಿಯ ಇಂಗ್ಲೀಷ್​ ಪರೀಕ್ಷೆಯನ್ನು ಬರೆದಿದ್ದಾರೆ ಎಂದು ತಿಳಿದುಬಂದಿದೆ. ಆದರೆ, 86 ವರ್ಷ ಚೌಟಾಲಾ ಪರೀಕ್ಷೆ ಆರಂಭಿಸಿ ಕೇವಲ 2 ಗಂಟೆಯಲ್ಲಿ ಪರೀಕ್ಷೆಯನ್ನು ಮುಗಿಸಿ ಹೊರಟಿದ್ದಾರೆ ಎಂದು ವರದಿಯಾಗಿದೆ. 2017 ರಲ್ಲಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲ್‌ನಿಂದ 10 ನೇ ತರಗತಿ ಪರೀಕ್ಷೆಯನ್ನು ಚೌಟಾಲಾ ಮೊದಲ ಬಾರಿಗೆ ಎದುರಿಸಿದ್ದರು. ಆದರೆ, ಶಿಕ್ಷಕರ ನೇಮಕಾರಿ ಹಗರಣದಲ್ಲಿ 2013ರಲ್ಲಿ ಸುಪ್ರೀಂ ಕೋರ್ಟ್​ ಅವರಿಗೆ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು.


    ಓಂ ಪ್ರಕಾಶ್ ಚೌಟಾಲಾ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾಗಲೇ ಪರೀಕ್ಷೆಗಾಗಿ ಅಧ್ಯಯನ ಮಾಡಿದ್ದರು. ಆದರೆ, ಇದೀಗ ಪರೋಲ್​ನಲ್ಲಿ ಹೊರಗಿರುವ ಅವರು ಪರೀಕ್ಷೆಯನ್ನು ಎದುರಿಸಿದ್ದಾರೆ. ಏತನ್ಮಧ್ಯೆ, ಚೌಟಾಲಾ ಕಳೆದ ತಿಂಗಳು ರಾಷ್ಟ್ರಮಟ್ಟದಲ್ಲಿ "ಥರ್ಡ್ ಫ್ರಂಟ್" ಅನ್ನು ರೂಪಿಸಲು ಶೀಘ್ರದಲ್ಲೇ ವಿರೋಧ ಪಕ್ಷದ ನಾಯಕರನ್ನು ಸಂಪರ್ಕಿಸುವುದಾಗಿಯೂ ತಿಳಿಸಿದ್ದರು.ಬಿಜೆಪಿ ಮಿತ್ರ ಮತ್ತು ಬಿಹಾರದ ಸಿಎಂ ನಿತೀಶ್ ಕುಮಾರ್ ಅವರೊಂದಿಗಿನ ಊಟದ ಸಭೆಯ ಯೋಜನೆಯನ್ನು ಬಹಿರಂಗಪಡಿಸಿದ್ದರು.


    ಕೇಂದ್ರದ "ಜನ ವಿರೋಧಿ, ರೈತ ವಿರೋಧಿ" ಸರ್ಕಾರವನ್ನು ತೊಡೆದುಹಾಕುವುದೇ ನಮ್ಮ ಮೊದಲ ಆದ್ಯ ಕರ್ತವ್ಯ ಎಂದು ಘೋಷಿಸಿದ್ದ ಚೌಟಾಲಾ ಸೆಪ್ಟೆಂಬರ್ 25, ಮಾಜಿ ಉಪ ಪ್ರಧಾನ ಮಂತ್ರಿ ದೇವಿ ಲಾಲ್ ಅವರ ಜನ್ಮ ದಿನಾಚರಣೆಗಿಂತ ಮುನ್ನವೇ ಪ್ರತಿಪಕ್ಷ ನಾಯಕರನ್ನು ಭೇಟಿ ಮಾಡಿ, ಎಲ್ಲರನ್ನೂ ಒಂದೇ ವೇದಿಕೆಗೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.


    ಇದನ್ನೂ ಓದಿ: Corona Vaccine| 2 ಡೋಸ್ ಲಸಿಕೆ ಪಡೆದ 87,000 ಜನರಲ್ಲಿ ಮತ್ತೆ ಕಾಣಿಸಿಕೊಂಡ ಸೋಂಕು, ಈ ಪೈಕಿ ಕೇರಳದ ಪಾಲು ಶೇ.46!


    "ಪ್ರಬಲವಾದ ತೃತೀಯ ರಂಗವು ರೂಪುಗೊಳ್ಳುವುದನ್ನು ನೋಡುವುದಕ್ಕಾಗಿಯೇ ನನ್ನ ಪ್ರಯತ್ನವಾಗಿದೆ. ಚುನಾವಣೆಯಲ್ಲಿ ನಾವು ಯಶಸ್ವಿಯಾದರೆ ಈ ಜನವಿರೋಧಿ ಮತ್ತು ಭ್ರಷ್ಟ ಸರ್ಕಾರವನ್ನು ಸೋಲಿಸಲಾಗುತ್ತದೆ" ಎಂದು ಹರಿಯಾಣದ ಮಾಜಿ ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಓಂ ಪ್ರಕಾಶ್ ಚೌಟಾಲಾ ತೃತೀಯ ರಂಗದ ರಚನೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದ್ದರು ಎನ್ನಲಾಗಿದೆ.


    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

    Published by:MAshok Kumar
    First published: