ನವದೆಹಲಿ: ಜಾಗತಿಕ ಸುದ್ದಿ ಸಂಸ್ಥೆಯಾದ ಬ್ರಿಟಿಷ್ ಬ್ರಾಡ್ಕಾಸ್ಟಿಂಗ್ ಕಾರ್ಪೊರೇಷನ್ (BBC) ಇತ್ತೀಚೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಕುರಿತು ನಿರ್ಮಿಸಿದ್ದು ಸಾಕ್ಷ್ಯಚಿತ್ರವನ್ನು (Documentary) ಸಾಕಷ್ಟು ವಿವಾದಕ್ಕೀಡಾಗಿತ್ತು. 2002ರ ಗುಜರಾತ್ (Gujarat) ಗಲಭೆಗಳನ್ನು ಉಲ್ಲೇಖಿಸಿ ಅಂದಿನ ರಾಜ್ಯದ ಮುಖ್ಯಮಂತ್ರಿ ಮೋದಿ ಕುರಿತು ಬಿಬಿಸಿಯ 'ಇಂಡಿಯಾ: ದಿ ಮೋದಿ ಕ್ವೆಶ್ಚನ್' (India: The Modi Question) ಸಾಕ್ಷ್ಯಚಿತ್ರ ವಿವಾದಕ್ಕೀಡಾಗಿತ್ತು. ಪ್ರಧಾನಿಗೆ ಅವಮಾನ ಮಾಡುತ್ತಿದೆ ಎಂದು ಈ ಸಾಕ್ಷ್ಯಚಿತ್ರವನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಇದೀಗ ಸಾಕ್ಷ್ಯಚಿತ್ರವು ಭಾರತ, ನ್ಯಾಯಾಂಗ ಮತ್ತು ಪ್ರಧಾನಿಯ ಚಿತ್ರಣವನ್ನು ದೂಷಿಸುತ್ತದೆ ಎಂದು ಗುಜರಾತ್ ಮೂಲದ ಎನ್ಜಿಒ ಸಲ್ಲಿಸಿದ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಲಾಗುತ್ತು. ಇದೀಗ ದೆಹಲಿ ಹೈಕೋರ್ಟ್ ಸೋಮವಾರ ಬಿಬಿಸಿಗೆ ಸಮನ್ಸ್ ಜಾರಿ ಮಾಡಿದೆ.
ಸಾಕ್ಷ್ಯವನ್ನು ಸಲ್ಲಿಸಲು ಸೂಚನೆಗಳು
ಈ ಅರ್ಜಿ ಸಲ್ಲಿಸಿರುವ ಎನ್ಜಿಒ ಪರವಾಗಿ ಹಿರಿಯ ವಕೀಲ ಹರೀಶ್ ಸಾಳ್ವೆ ವಾದ ಮಂಡಿಸಿದರು. ಭಾರತ ಮತ್ತು ನ್ಯಾಯಾಂಗ ಸೇರಿದಂತೆ ಇಡೀ ದೇಶವನ್ನು ದೂಷಿಸಲು ಈ ಸಾಕ್ಷ್ಯಚಿತ್ರವನ್ನು ಮಾಡಿದ ಬಿಬಿಸಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ ಎಂದು ಅವರು ಹೇಳಿದರು. ಈ ಸಾಕ್ಷ್ಯಚಿತ್ರದ ಮೂಲಕ ಪ್ರಧಾನಿಗೆ ಉದ್ದೇಶಪೂರ್ವಕ ಅವಮಾನ ಮಾಡಲಾಗಿದೆ ಎಂದು ಸಾಳ್ವೆ ವಾದಿಸಿದರು. ಸಾಕ್ಷ್ಯಚಿತ್ರವು ಮಾನಹಾನಿಕರ ಮತ್ತು ದೇಶದ ಘನತೆಗೆ ಕಳಂಕ ತಂದಿದೆ ಎಂದು ವಾದಿಸಿದ್ದಾರೆ ಎಂದು ಪಿಟಿಐ ವರದಿ ತಿಳಿಸಿದೆ. ಪರಿಣಾಮವಾಗಿ, ಈ ಬಗ್ಗೆ ಸಂಪೂರ್ಣ ಸಾಕ್ಷ್ಯವನ್ನು ಸಲ್ಲಿಸುವಂತೆ ನ್ಯಾಯಮಂಡಳಿ ಬಿಬಿಸಿಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 15ಕ್ಕೆ ಮುಂದೂಡಲಾಗಿದೆ.
10000 ಕೋಟಿ ಮಾನನಷ್ಟ ಮೊಕದ್ದಮೆ
ಸಾಕ್ಷ್ಯಚಿತ್ರ ದೇಶದ ಪ್ರತಿಷ್ಠೆಗೆ ಮಸಿ ಬಳಿಯುವ ವಿಷಯವನ್ನು ಒಳಗೊಂಡಿದೆ ಮತ್ತು ಭಾರತದ ಪ್ರಧಾನ ಮಂತ್ರಿ, ಭಾರತೀಯ ನ್ಯಾಯಾಂಗ ಮತ್ತು ಭಾರತೀಯ ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ವಿರುದ್ಧ ಸುಳ್ಳು ಮತ್ತು ಮಾನಹಾನಿಕರ ಆರೋಪಗಳನ್ನು ಮತ್ತು ಒಳನೋಟಗಳನ್ನು ಹೊಂದಿದೆ ಎಂದು ವಾದಿಸಲಾಗಿದೆ. ಪ್ರತಿವಾದಿಗಳ ಮೇಲಿನ ನಡವಳಿಕೆಯು ಕ್ರಮಬದ್ಧವಾಗಿದೆ ಎಂದು ನ್ಯಾಯಾಲಯವು ಗಮನಿಸಿದೆ.
ಇದನ್ನೂ ಓದಿ: Mangaluru News: ಪ್ರಧಾನಿ ಮುಂದೆ ಕಾಂತಾರ ನೃತ್ಯ! ತುಳು ಸಂಸ್ಕೃತಿಯ ʼವಾ ಪೊರ್ಲು ಯಾʼ
ಕೇಂದ್ರ ಸರ್ಕಾರ ಈಗಾಗಲೇ ಬಿಬಿಸಿ ಸಾಕ್ಷ್ಯಚಿತ್ರ 'ಇಂಡಿಯಾ: ದಿ ಮೋದಿ ಕ್ವೆಶ್ಚನ್' ಅನ್ನು ನಿಷೇಧಿಸಿದೆ. 2002ಗುಜರಾತ್ ಗಲಭೆಗಳ ಸಮಯದಲ್ಲಿ ಪ್ರಧಾನಿ ಮೋದಿ ಅವರು ಆ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಅಂದಿನ ಆ ಘಟನೆ ನಂತರ ಅವರ ಮೇಲೆ ಹಲವು ಆರೋಪಗಳು ಬಂದಿದ್ದವು. ಆದರೆ ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಆದರೂ ಇದಕ್ಕೆ ವ್ಯತಿರಿಕ್ತವಾಗಿ ಬಿಬಿಸಿ ಮೋದಿ ವಿರುದ್ಧ ಸಾಕ್ಷ್ಯಚಿತ್ರ ಮಾಡಿದೆ.
ಈ ಸರಣಿಯು ಭಾರತೀಯ ನ್ಯಾಯ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ ಎಂದು ಬಿಜೆಪಿ ಆರೋಪಿಸಿದೆ. ತಮ್ಮ ಪಕ್ಷ ಮತ್ತು ಮೋದಿಯನ್ನು ಗುರಿಯಾಗಿಸಿಕೊಂಡು ಬಿಬಿಸಿ ಈ ಸಾಕ್ಷ್ಯಚಿತ್ರವನ್ನು ಮಾಡಿದೆ ಎಂದು ಪಕ್ಷದ ವಲಯಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ನಂತರ ತೆರಿಗೆ ವಂಚನೆಯ ಆರೋಪದ ಮೇಲೆ ಬಿಬಿಸಿ ಕಚೇರಿಗಳಲ್ಲಿಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ