• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Arvind Kejriwal| 2022 ಗುಜರಾತ್ ಚುನಾವಣೆಯಲ್ಲಿ ಎಎಪಿ ಸ್ಪರ್ಧೆ ಖಚಿತ; ಮೋದಿ ರಾಜ್ಯದಲ್ಲಿ ಪರಿಸ್ಥಿತಿ ಬದಲಾಗಲಿದೆ ಎಂದ ಕೇಜ್ರಿವಾಲ್!

Arvind Kejriwal| 2022 ಗುಜರಾತ್ ಚುನಾವಣೆಯಲ್ಲಿ ಎಎಪಿ ಸ್ಪರ್ಧೆ ಖಚಿತ; ಮೋದಿ ರಾಜ್ಯದಲ್ಲಿ ಪರಿಸ್ಥಿತಿ ಬದಲಾಗಲಿದೆ ಎಂದ ಕೇಜ್ರಿವಾಲ್!

ಅರವಿಂದ್ ಕೇಜ್ರಿವಾಲ್.

ಅರವಿಂದ್ ಕೇಜ್ರಿವಾಲ್.

ದೆಹಲಿಯಲ್ಲಿ ವಿದ್ಯುತ್ ಉಚಿತವಾಗುವುದಾದರೇ, ಗುಜರಾತ್‌ನಲ್ಲಿ ಯಾಕೆ ಇಲ್ಲ? ಎಂದು ಗುಜರಾತ್ ಜನರು ಯೋಜಿಸುತ್ತಿದ್ದಾರೆ. ಕಳೆದ 70 ವರ್ಷಗಳಿಂದ ಆಸ್ಪತ್ರೆಗಳ ಪರಿಸ್ಥಿತಿ ಬದಲಾಗಿಲ್ಲ ಎಂಬ ಬಗ್ಗೆಯೂ ಜನ ಚಿಂತಿಸುತ್ತಿದ್ದಾರೆ. ಈಗ ಪರಿಸ್ಥಿತಿ ಬದಲಾಗುತ್ತಿದೆ ಎಂದು ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.

ಮುಂದೆ ಓದಿ ...
  • Share this:

ಅಹಮದಾಬಾದ್ (ಜೂನ್ 14); ದೆಹಲಿಯಲ್ಲಿ ಸತತ ಮೂರನೇ ಭಾರಿ ಅಧಿಕಾರದ ಗದ್ದುಗೆ ಹಿಡಿದಿರುವ ಅರವಿಂದ ಕೇಜ್ರಿವಾಲ್ ನೇತೃತ್ವದ ಎಎಪಿ, ದೆಹಲಿ ಹೊರತಾಗಿ ಪಂಜಾಬ್​ ರಾಜ್ಯದಲ್ಲಿ ಉತ್ತಮ ನೆಲೆ ಹೊಂದಿದೆ. ಇದೀಗ 2022ರಲ್ಲಿ ಗುಜರಾತ್ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಎದುರಾಗಲಿದೆ. ಈ ಭಾರಿಯಾದರೂ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಟ್ಟು ಗೆಲ್ಲುವ ಹುಮ್ಮಸ್ಸಿನಲ್ಲಿ ಕಾಂಗ್ರೆಸ್​ ಇದೆ. ಆದರೆ, ಈ ನಡುವೆ ಆಮ್ ಆದ್ಮಿ ಪಕ್ಷವು ಗುಜರಾತ್​ನ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿರುವುದು ರಾಷ್ಟ್ರ ರಾಜಕಾರಣ ದಲ್ಲಿ ಕೋಲಾಹಲ ಮೂಡಿಸಿದೆ. ಈ ಬಗ್ಗೆ ಅಹಮದಾಬಾದ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತ ಮಾಹಿತಿ ನೀಡಿರುವ ಅರವಿಂದ ಕೇಜ್ರಿವಾಲ್, "ನಮ್ಮ ಪಕ್ಷದ ಅಭ್ಯರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದ್ದಾರೆ" ಎಂದು ತಿಳಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಗುಜರಾತಿ ಭಾಷೆಯಲ್ಲಿ ಟ್ವೀಟ್ ಸಹ ಮಾಡಿದ್ದಾರೆ.



ಗುಜರಾತ್​ನಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಮಾತನಾಡಿರುವ ಅರವಿಂದ ಕೇಜ್ರಿವಾಲ್, "ದೆಹಲಿಯಲ್ಲಿ ವಿದ್ಯುತ್ ಉಚಿತವಾಗುವುದಾದರೇ, ಗುಜರಾತ್‌ನಲ್ಲಿ ಯಾಕೆ ಇಲ್ಲ? ಎಂದು ಗುಜರಾತ್ ಜನರು ಯೋಜಿಸುತ್ತಿದ್ದಾರೆ. ಕಳೆದ 70 ವರ್ಷಗಳಿಂದ ಆಸ್ಪತ್ರೆಗಳ ಪರಿಸ್ಥಿತಿ ಬದಲಾಗಿಲ್ಲ ಎಂಬ ಬಗ್ಗೆಯೂ ಜನ ಚಿಂತಿಸುತ್ತಿದ್ದಾರೆ. ಈಗ ಪರಿಸ್ಥಿತಿ ಬದಲಾಗುತ್ತಿದೆ. ಜನ ಎಎಪಿ ಕಡೆ ಮನಸ್ಸು ಬದಲಾಯಿಸುತ್ತಿದ್ದಾರೆ" ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.


ಗುಜರಾತ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಸೋಮವಾರ ಚಾಲನೆ ನೀಡಲು ಗುಜರಾತ್ ತಲುಪಿದ್ದಾರೆ ಎನ್ನಲಾಗಿದೆ. "ರಾಜ್ಯವು ಈಗ ಬದಲಾಗುತ್ತದೆ. ನಾಳೆ ಗುಜರಾತ್‌ಗೆ ಬರುತ್ತೇನೆ ಮತ್ತು ರಾಜ್ಯದ ಜನರನ್ನು ಭೇಟಿಯಾಗುತ್ತೇನೆ" ಎಂದು ಕೇಜ್ರಿವಾಲ್ ಭಾನುವಾರ ಗುಜರಾತಿ ಭಾಷೆಯಲ್ಲಿ ಟ್ವೀಟ್ ಮಾಡಿದ್ದರು.


2021 ರಲ್ಲಿ ನಡೆದ ಸೂರತ್ ಮುನ್ಸಿಪಲ್ ಕಾರ್ಪೊರೇಷನ್ (ಎಸ್‌ಎಂಸಿ) ಚುನಾವಣೆಯಲ್ಲಿ 120 ಸ್ಥಾನಗಳ ಪೈಕಿ 27 ಸ್ಥಾನಗಳನ್ನು ಆಮ್ ಆದ್ಮಿ ಪಾರ್ಟಿ ಗಳಿಸಿತ್ತು. ಕೇಜ್ರಿವಾಲ್ ನೇತೃತ್ವದ ಪಕ್ಷವು ಎಲ್ಲಾ ಸ್ಥಳೀಯ ಸಂಸ್ಥೆಗಳಾದ ಪುರಸಭೆ ನಿಗಮಗಳು, ಪುರಸಭೆಗಳು, ಜಿಲ್ಲೆ ಮತ್ತು ತಾಲ್ಲೂಕು ಪಂಚಾಯಿತಿಗಳಲ್ಲೂ ಸ್ಪರ್ಧಿಸಿತ್ತು.


ಇದನ್ನೂ ಓದಿ: Priyanka Gandhi| ರಾಮ ಮಂದಿರ ಟ್ರಸ್ಟ್​ ಮೇಲೆ ಭ್ರಷ್ಟಾಚಾರದ ಆರೋಪ; ಇದು ದಾನ-ನಂಬಿಕೆಗೆ ಅವಮಾನ ಎಂದ ಪ್ರಿಯಾಂಕ ಗಾಂಧಿ


ಈ ಗೆಲುವಿನ ನಂತರ ಕೇಜ್ರಿವಾಲ್ ಅವರ ಎರಡನೇ ಗುಜರಾತ್ ಪ್ರವಾಸ ಇದಾಗಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಗುಜರಾತ್​ನಲ್ಲಿ ಅಧಿಕ ಸ್ಥಾನಗಳನ್ನು ಗಳಿಸಿ ಪ್ರಧಾನಿ ನರೇಂದ್ರ ಮೋದಿಗೆ ಟಾಂಗ್ ನೀಡುವ ಯೋಜನೆಯಲ್ಲಿ ಎಎಪಿ ಮತ್ತು ದೆಹಲಿ ಸಿಎಂ ಅರವಿಂದ ಕೇಜ್ರವಾಲ್ ಇದ್ದಾರೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: Same Sex Wedding: ಮನೆಯಿಂದ ಓಡಿಹೋಗಿ ಮದುವೆಯಾದ ಇಬ್ಬರು ಯುವತಿಯರು, ಪ್ರೀತಿಗೆ ದೇವರೇ ಸಾಕ್ಷಿ !


ಹೀಗಾಗಿ ಆಶ್ರಮ ರಸ್ತೆಯಲ್ಲಿರುವ ಎಎಪಿಯ ಹೊಸ ಗುಜರಾತ್ ರಾಜ್ಯ ಕಚೇರಿಯನ್ನು ಅರವಿಂದ ಕೇಜ್ರಿವಾಲ್ ಉದ್ಘಾಟಿಸಲಿದ್ದಾರೆ. ಗುಜರಾತ್‌ನ ಹಿರಿಯ ಪತ್ರಕರ್ತ ಇಸುದಾನ್ ಗಧ್ವಿ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ಎಎಪಿಗೆ ಸೇರಿದ್ದಾರೆ ಎನ್ನಲಾಗಿದೆ.


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.

First published: