• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • NEET ಪರೀಕ್ಷೆ: ತಮಿಳುನಾಡಿನಲ್ಲಿ ವೈದ್ಯಕೀಯ ಕಾಲೇಜಿಗೆ ಸೇರುವ ವಿದ್ಯಾರ್ಥಿಗಳ ಸಂಖ್ಯೆ ಸೊನ್ನೆ

NEET ಪರೀಕ್ಷೆ: ತಮಿಳುನಾಡಿನಲ್ಲಿ ವೈದ್ಯಕೀಯ ಕಾಲೇಜಿಗೆ ಸೇರುವ ವಿದ್ಯಾರ್ಥಿಗಳ ಸಂಖ್ಯೆ ಸೊನ್ನೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸೀಟುಗಳನ್ನು ಪಡೆಯುವ ಸರ್ಕಾರಿ ಶಾಲೆಗಳ ಮಕ್ಕಳ ಸಂಖ್ಯೆ 2017ರಲ್ಲಿ 5  ವಿದ್ಯಾರ್ಥಿಗಳು, 2018ರಲ್ಲಿ 7 ಹಾಗೂ 2019ರಲ್ಲಿ ಒಬ್ಬರೂ ಇಲ್ಲ

  • Share this:





ನೀಟ್‌ ಬರುವುದಕ್ಕೂ ಮುಂಚೆ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯುತ್ತಿದ್ದ ವಿದ್ಯಾರ್ಥಿಗಳಲ್ಲಿ ಶೇ.90 ಮಂದಿ ರಾಜ್ಯ ಪಠ್ಯಕ್ರಮವನ್ನು ಬೋಧಿಸುತ್ತಿದ್ದ ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳು ಅಥವಾ ಕಡಿಮೆ ವೆಚ್ಚದ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಾಗಿರುತ್ತಿದ್ದರು. ಆದರೆ, ನೀಟ್‌ ಬಂದ ಮೇಲೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸೀಟುಗಳನ್ನು ಪಡೆಯುವ ಸರ್ಕಾರಿ ಶಾಲೆಗಳ ಮಕ್ಕಳ ಸಂಖ್ಯೆ 2017ರಲ್ಲಿ 5  ವಿದ್ಯಾರ್ಥಿಗಳು, 2018ರಲ್ಲಿ 7 ಹಾಗೂ 2019ರಲ್ಲಿ ಒಬ್ಬರೂ ಇಲ್ಲ ಎಂದು ಸಿಪಿಐ (ಎಂ) ತನ್ನ ಹೇಳಿಕೆಯಲ್ಲಿ ತಿಳಿಸಿದೆ.


ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌)ಯಿಂದ ತಮಿಳುನಾಡಿನ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆಯುವ ಸಂಖ್ಯೆಯಲ್ಲಿ ಗಣನೀಯ ಕುಸಿತವಾಗಿರುವುದು ಚಿಂತೆಗೀಡು ಮಾಡುವ ವಿಷಯವಾಗಿದ್ದು, ಈ ಸಮಸ್ಯೆ ಬಗೆಹರಿಸುವ ಹೊಣೆಗಾರಿಕೆ ರಾಜ್ಯ ಸರ್ಕಾರದ ಮೇಲಿದೆ ಎಂದು ಮದ್ರಾಸ್‌ ಹೈಕೋರ್ಟ್‌ ಮುಂದೆ ಭಾರತೀಯ ಕಮ್ಯುನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ) - ಸಿಪಿಐ(ಎಂ) ಹೇಳಿಕೆ ಸಲ್ಲಿಸಿದೆ.









ಮುಂದುವರೆದು, ನೀಟ್‌ ಅನ್ನು ಪರಿಚಯಿಸಿದ ನಂತರ ವೈದ್ಯಕೀಯ ಕಾಲೇಜುಗಳಲ್ಲಿ ಸರ್ಕಾರಿ ಸೀಟುಗಳನ್ನು ಪಡೆಯುವ ಸರ್ಕಾರಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ ಎಂದೂ ಸಿಪಿಐ(ಎಂ) ಹೇಳಿದೆ.







ಆಡಳಿತಾರೂಢ ಡಿಎಂಕೆ ಸರ್ಕಾರವು ಸಾಮಾಜಿಕವಾಗಿ ವಂಚಿತರಾಗಿರುವ ವಿದ್ಯಾರ್ಥಿಗಳ ಮೇಲೆ ನೀಟ್ ಪರೀಕ್ಷೆಯು ಬೀರಿರುವ ಪರಿಣಾಮವನ್ನು ಅಧ್ಯಯನ ಮಾಡಲು ಒಂಭತ್ತು ಸದಸ್ಯರ ಸಮಿತಿಯನ್ನು ರಚಿಸಿದ್ದನ್ನು ಪ್ರಶ್ನಿಸಿ ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕರು ನಾಗರಾಜನ್‌ ಅವರು ಅರ್ಜಿಯೊಂದನ್ನು ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಮಧ್ಯಪ್ರವೇಶ ಕೋರಿ ಸಿಪಿಐ(ಎಂ) ಅರ್ಜಿ ಸಲ್ಲಿಸಿದೆ.









ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಬಾಲಕೃಷ್ಣನ್‌ ಅವರ ಮೂಲಕ ಸಿಪಿಐ(ಎಂ) ಸಲ್ಲಿಸಿರುವ ಅರ್ಜಿಯಲ್ಲಿ ಕರು ನಾಗರಾಜನ್‌ ಅವರ ಅರ್ಜಿಯು ಅಕಾಲಿಕವಾಗಿದ್ದು ವಜಾಗೊಳಿಸಲು ಯೋಗ್ಯವಾಗಿದೆ ಎನ್ನಲಾಗಿದೆ. ಈ ಕೆಳಗಿನ ಅಂಶಗಳನ್ನು ಅರ್ಜಿಯಲ್ಲಿ ದಾಖಲಿಸಲಾಗಿದೆ:


2016ರಲ್ಲಿ ತಮಿಳು ಮಾಧ್ಯಮ ಶಾಲೆಗಳಿಂದ ವೈದ್ಯಕೀಯ ಕೋರ್ಸ್‌ಗಳಿಗೆ ಸೇರಿಕೊಂಡ ವಿದ್ಯಾರ್ಥಿಗಳ ಸಂಖ್ಯೆ ಒಟ್ಟು 600 ಇತ್ತು. ಆದರೆ ಈಗ ಶೂನ್ಯಕ್ಕೆ ಇಳಿದಿದೆ.


ಬೋರ್ಡ್‌ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಗಳಿಸುವ ವಿದ್ಯಾರ್ಥಿಗಳು ಸಹ ನೀಟ್‌ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಆಗುತ್ತಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಮೂರು ವರ್ಷದ ಹಿಂದೆ ನೀಟ್‌ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡು ಪ್ರಾಣತೆತ್ತ ಪ್ರತಿಭಾವಂತ ವಿದ್ಯಾರ್ಥಿನಿ ಅನಿತಾ ಅವರ ಉದಾಹರಣೆಯನ್ನು ಉಲ್ಲೇಖಿಸಲಾಗಿದೆ. ಮತ್ತೊಂದು ಉದಾಹರಣೆಯಲ್ಲಿ, 2018ರಲ್ಲಿ ನೀಟ್‌ ಪರೀಕ್ಷೆಯಲ್ಲಿ ತೇರ್ಗಡೆಯಾಗದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಮತ್ತೋರ್ವ ಪ್ರತಿಭಾವಂತ ವಿದ್ಯಾರ್ಥಿನಿ ಪ್ರದೀಪಾ ಅವರ ಬಗ್ಗೆ ಉಲ್ಲೇಖಿಸಲಾಗಿದೆ.









ಇದನ್ನೂ ಓದಿ:  National anthem: ರಾಷ್ಟ್ರಗೀತೆ ಹಾಡುವಾಗ ಎದ್ದು ನಿಲ್ಲದೇ ಇರುವುದು ಅಪರಾಧವಲ್ಲ: ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್


ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯವು 2018-19ರಲ್ಲಿ ಕೈಗೊಂಡಿದ್ದ ಅಖಿಲ ಭಾರತೀಯ ಉನ್ನತ ಶಿಕ್ಷಣ ಸಮೀಕ್ಷೆಯಡಿ (ಎಐಎಸ್‌ಎಚ್‌ಇ) ತಮಿಳುನಾಡಿನಲ್ಲಿ ಉನ್ನತ ಶಿಕ್ಷಣಕ್ಕೆ ದಾಖಲಾಗುವ ಪ್ರಮಾಣ ಶೇ.51.4 ಇದ್ದು ದೇಶದ ಸರಾಸರಿಯಾದ ಶೇ.27.1ಕ್ಕಿಂತ ಸಾಕಷ್ಟು ಹೆಚ್ಚು. ಉನ್ನತ ಶಿಕ್ಷಣ ಪಡೆಯಲು ದಾಖಲಾಗುವ ವಿದ್ಯಾರ್ಥಿನಿಯರ ಪ್ರಮಾಣ ಶೇ.48.3, ಪರಿಶಿಷ್ಟ ಜಾತಿಯಲ್ಲಿ ಈ ಪ್ರಮಾಣ ಶೇ.41.6 ಹಾಗೂ ಪರಿಶಿಷ್ಟ ಪಂಗಡದಲ್ಲಿ ಇದೇ ಪ್ರಮಾಣ ಶೇ.37.8 ಆಗಿದೆ. ಪರಿಸ್ಥಿತಿ ಹೀಗಿರುವಾಗ, ಇದ್ದಕ್ಕಿದ್ದಂತೆ ತಮಿಳುನಾಡು ವಿದ್ಯಾರ್ಥಿಗಳ ಸಂಖ್ಯೆ ಉನ್ನತ ಶಿಕ್ಷಣದಲ್ಲಿ ಇಳಿಕೆಯಾಗುವುದು ಗಂಭೀರ ಚಿಂತೆಯ ವಿಷಯವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.




  1. ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.




top videos
    First published: