• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • ಭ್ರಷ್ಟಾಚಾರ ಆರೋಪ; ಅಧಿಕಾರ ಸ್ವೀಕರಿಸಿದ ಮೂರೇ ದಿನಕ್ಕೆ ರಾಜೀನಾಮೆ ನೀಡಿದ ಬಿಹಾರದ ಶಿಕ್ಷಣ ಸಚಿವ

ಭ್ರಷ್ಟಾಚಾರ ಆರೋಪ; ಅಧಿಕಾರ ಸ್ವೀಕರಿಸಿದ ಮೂರೇ ದಿನಕ್ಕೆ ರಾಜೀನಾಮೆ ನೀಡಿದ ಬಿಹಾರದ ಶಿಕ್ಷಣ ಸಚಿವ

ಮೇವಾಲಾಲ್ ಚೌಧರಿ.

ಮೇವಾಲಾಲ್ ಚೌಧರಿ.

ಆಗಿನ ಬಿಹಾರ ರಾಜ್ಯಪಾಲರಾಗಿದ್ದ ರಾಮನಾಥ್ ಕೋವಿಂದ್ ಅವರ ಅನುಮೋದನೆಯ ನಂತರ ಆಗಿನ ತಾರಾಪುರದ ಜೆಡಿಯು ಶಾಸಕರಾಗಿದ್ದ ಮೇವಾಲಾಲ್ ಚೌಧರಿ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನೂ ಹೂಡಲಾಗಿತ್ತು. ಆದರೆ ಅವರ ವಿರುದ್ಧ ಇನ್ನೂ ಯಾವುದೇ ಚಾರ್ಜ್‌ಶೀಟ್ ದಾಖಲಾಗಿಲ್ಲ.

  • Share this:

    ಪಾಟ್ನಾ (ನವೆಂಬರ್​ 19); ಬಿಹಾರದಲ್ಲಿ ಮತ್ತೊಂದು ಅವಧಿಗೆ ಎನ್​ಡಿಎ ಮೈತ್ರಿಕೂಟ ಅಧಿಕಾರ ಹಿಡಿದು ನಿತೀಶ್​ ಕುಮಾರ್​ ಸಿಎಂ ಗಾದಿಗೆ ಏರಿದ್ದಾರೆ. ಆದರೆ, ಅವರ ಜೊತೆಗೆ ಶಿಕ್ಷಣ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಸಚಿವ ಮೇವಾಲಾಲ್​ ಚೌಧರಿ ಇದೀಗ ಭ್ರಷ್ಟಾಚಾರದ ಆರೋಪಕ್ಕೆ ಒಳಗಾಗಿ ಕೇವಲ ಮೂರೇ ದಿನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ರಾಷ್ಟ್ರ ಮಟ್ಟದಲ್ಲಿ ಸುದ್ದಿಯ ಕೇಂದ್ರವಾಗಿದ್ದಾರೆ. ಮೇವಾಲಾಲ್​ ಚೌಧರಿ ಕಳೆದ ಸೋಮವಾರವಷ್ಟೇ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ, ಈ ಸಮಾರಂಭ ಮುಗಿಯುತ್ತಿದ್ದಂತೆ ಪ್ರತಿಪಕ್ಷ ರಾಷ್ಟ್ರೀಯ ಜನತಾ ದಳದಿಂದ ತೀವ್ರ ಟೀಕೆಗೆ ಒಳಗಾಗಿದ್ದರು. 2017 ರಲ್ಲಿ ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಕೆದಕಿ ಆರ್‌ಜೆಡಿ ಪಕ್ಷವು ನಿತೀಶ್ ಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿತ್ತು. ಹೀಗಾಗಿ ನೂತನ ಸಚಿವ ಮೇವಾಲಾಲ್ ಚೌಧರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.



    ಮೇವಾಲಾಲ್​ ಚೌಧರಿ ಭಾಗಲ್ಪುರ್ ಜಿಲ್ಲೆಯ ಬಿಹಾರ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದ ಅವಧಿಯಲ್ಲಿ ಸಹಾಯಕ ಪ್ರಾಧ್ಯಾಪಕ ಮತ್ತು ಕಿರಿಯ ವಿಜ್ಞಾನಿಗಳ ಹುದ್ದೆಗಳಿಗೆ ನೇಮಕಾತಿ ನಡೆದಿತ್ತು. ಆದರೆ, ಚೌಧರಿ ಈ ನೇಮಕಾತಿಯಲ್ಲಿ ಅಕ್ರಮವೆಸಗಿದ್ದರು ಎಂಬ ಆರೋಪಗಳು ಬಲವಾಗಿ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ 67 ವರ್ಷದ ಮೇವಾಲಾಲ್ ಚೌಧರಿ ಅವರನ್ನು 2017 ರಲ್ಲಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷದಿಂದ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿತ್ತು.


    ಆಗಿನ ಬಿಹಾರ ರಾಜ್ಯಪಾಲರಾಗಿದ್ದ ರಾಮನಾಥ್ ಕೋವಿಂದ್ ಅವರ ಅನುಮೋದನೆಯ ನಂತರ ಆಗಿನ ತಾರಾಪುರದ ಜೆಡಿಯು ಶಾಸಕರಾಗಿದ್ದ ಮೇವಾಲಾಲ್ ಚೌಧರಿ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನೂ ಹೂಡಲಾಗಿತ್ತು. ಆದರೆ ಅವರ ವಿರುದ್ಧ ಇನ್ನೂ ಯಾವುದೇ ಚಾರ್ಜ್‌ಶೀಟ್ ದಾಖಲಾಗಿಲ್ಲ.


    ಇದನ್ನೂ ಓದಿ : ಬಿಹಾರದ ಹಂಗಾಮಿ ವಿಧಾನಸಭಾ ಸ್ಪೀಕರ್​ ಆಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ


    ಇಂದು ಸಹ ಧ್ವಜಾರೋಹಣ ಸಮಾರಂಭದಲ್ಲಿ ರಾಷ್ಟ್ರಗೀತೆಯ ಸಾಲುಗಳನ್ನು ಹೇಳಲು ಹೆಣಗಾಡುತ್ತಿದ್ದ ಮೇವಾಲಾಲ್ ಚೌಧರಿ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಬಿಹಾರದ ಪ್ರತಿಪಕ್ಷ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ತನ್ನ ಟ್ವಿಟರ್‌ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು ವಾಗ್ದಾಳಿ ನಡೆಸಿತ್ತು.


    ಬಿಹಾರ ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ನಿತೀಶ್ ಕುಮಾರ್ ಅಪರಾಧಿಗಳನ್ನು ನೇಮಕ ಮಾಡಿದ್ದಾರೆ ಎಂದು ರಾಷ್ಟ್ರೀಯ ಜನತಾದಳದ ತೇಜಶ್ವಿ ಯಾದವ್ ಸರಣಿ ಟ್ವೀಟ್‌ಗಳಲ್ಲಿ ಆರೋಪಿಸಿದ್ದಾರೆ. ಇದು ಸಾಮಾನ್ಯವಾಗಿ ಆಡಳಿತರೂಢ ಸರ್ಕಾರಕ್ಕೆ ಮುಜುಗರವನ್ನುಂಟು ಮಾಡಿತ್ತು. ಹೀಗಾಗಿ ಇದರ ಬೆನ್ನಿಗೆ ಮೇವಲಾಲ್ ಚೌಧರಿ ತಮ್ಮ ಸಚಿವ ಸ್ಥಾನಕ್ಕೆ​ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

    Published by:MAshok Kumar
    First published: