ಶ್ರೀಕಾಕುಲಂ (ಆಗಸ್ಟ್ 24); ದೇಶದ ಗಡಿಯಲ್ಲಿ ಮೃತಪಟ್ಟ ಸೈನಿಕನ (indian soldier) ಪಾರ್ಥೀವ ಶರೀರವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಿ ಹಿಂದಿರುಗಿದ್ದ ವೇಳೆ ನಡೆದ ರಸ್ತೆ ಅಪಘಾತದಲ್ಲಿ (Accident) ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಒಟ್ಟು ನಾಲ್ಕು ಜನ ಪೊಲೀಸರು ಮೃತಪಟ್ಟಿರು ಧಾರುಣ ಘಟನೆ ಇಂದು ಆಂಧ್ರ ಪ್ರದೇಶದ (Andhra Pradesh) ಶ್ರೀಕಾಕುಲಂ (Srikakulam) ನಲ್ಲಿ ನಡೆದಿದೆ. ಜಿಲ್ಲೆಯ ಭೈರಿ ಸಾರಂಗಪುರಂನಲ್ಲಿರುವ ಯೋಧನ ಕುಟುಂಬಕ್ಕೆ ಯೋಧನ ಮೃತದೇಹ ಹಸ್ತಾಂತರಿಸಿದ ಬಳಿಕ ಪೊಲೀಸ್ ಸಿಬ್ಬಂದಿ ಹಿಂದಿರುಗು ತ್ತಿದ್ದರು. ಈ ವೇಳೆ ಅವರ ಚಲಿಸುತ್ತಿದ್ದ ಕಾರು ಪಲಸಾ ಬಳಿಯಿರುವ ಹೆದ್ದಾರಿ-16 ರಲ್ಲಿ ಅಪಘಾತಕ್ಕೀಡಾಗಿದೆ. ದುರ್ಘಟನೆಯಲ್ಲಿ ಓರ್ವ ಸಬ್ ಇನ್ಸ್ಪೆಕ್ಟರ್ ಮತ್ತು ಮೂವರು ಸಶಸ್ತ್ರ ಮೀಸಲು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಆಂಧ್ರ ಪ್ರದೇಶ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
ಶ್ರೀಕಾಕುಳಂಗೆ ತೆರಳುತ್ತಿದ್ದ ಪೊಲೀಸ್ ಜೀಪ್ಗೆ ಲಾರಿಯೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಮೃತಪಟ್ಟವರನ್ನು ಎಸ್ಐ ಜೆ. ಕೃಷ್ಣುಡು, ಹೆಡ್ ಕಾನ್ಸ್ಟೇಬಲ್ಗಳಾದ ವೈ ಬಾಬು ರಾವ್, ಟಿ. ಆಂಟೋನಿ ಮತ್ತು ಚಾಲಕ ಪಿ. ಜನಾರ್ಧನ ರಾವ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: Love U Rachu| ಲವ್ ಯು ರಚ್ಚು ಸಿನಿಮಾ ದುರಂತ; ಪ್ರಮುಖ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ
ಅಪಘಾತದ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಆದಷ್ಟು ಬೇಗ ವರದಿ ಸಲ್ಲಿಸುವಂತೆ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಮತ್ತು ಶ್ರೀಕಾಕುಳಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿರುವುದಾಗಿ ಪೊಲೀಸ್ ಮಹಾನಿರ್ದೇಶಕ ಡಿ. ಗೌತಮ್ ಸಾವಂಗ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ನಾಲ್ವರು ಸಿಬ್ಬಂದಿಯನ್ನು ಕಳೆದುಕೊಂಡಿರುವುದು ಪೊಲೀಸ್ ಇಲಾಖೆಗೆ ತುಂಬಲಾರದ ನಷ್ಟ, ಮೃತರ ಕುಟುಂಬದ ನೆರವಿಗೆ ಇಲಾಖೆ ನಿಲ್ಲಲಿದೆ ಎಂದು ಡಿಜಿಪಿ ಸಾವಂಗ್ ಆಶ್ವಾಸನೆ ನೀಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ