Jagan Mohan Reddy| ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ 11 ಕೇಸ್ ದಾಖಲಿಸಿದ ಆಂಧ್ರಪ್ರದೇಶ ಹೈಕೋರ್ಟ್​

ಜಗನ್ ಮೋಹನ್ ರೆಡ್ಡಿ.

ಜಗನ್ ಮೋಹನ್ ರೆಡ್ಡಿ.

ಸಿಆರ್ ಪಿಸಿ ಸೆಕ್ಷನ್ 397, 401, 482 ಮತ್ತು 483 ರ ಅಡಿಯಲ್ಲಿ ಹೈಕೋರ್ಟ್ ತನ್ನ ಅಧಿಕಾರವನ್ನು ಬಳಸಿಕೊಂಡು ಸುಮೊಟು ಕೇಸ್ ದಾಖಲಿಸಲು ಸಾಧ್ಯವಿಲ್ಲ. ನ್ಯಾಯಾಂಗ ಇತಿಹಾಸದಲ್ಲಿ ಮೊದಲ ಬಾರಿಗೆ ಆಡಳಿತಾತ್ಮಕ ನಿರ್ಧಾರವನ್ನು ಆಧರಿಸಿ ಸುಮೊಟು ಕೇಸ್ ದಾಖಲಿಸಲಾಗಿದೆ ಎಂದು ಅಡ್ವೊಕೇಟ್ ಜನರಲ್ ಶ್ರೀರಾಮ್ ವಾದಿಸಿದ್ದಾರೆ.

ಮುಂದೆ ಓದಿ ...
  • News18
  • 3-MIN READ
  • Last Updated :
  • Share this:

    ವಿಜಯವಾಡ (ಜೂನ್ 24); ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರೋಧ ಪಕ್ಷದಲ್ಲಿದ್ದಾಗ 2016 ರಲ್ಲಿ ಅಂದಿನ ಸಿಎಂ, ಟಿಡಿಪಿ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ವಿರುದ್ಧ ಅಮರಾವತಿ ಭೂಮಿ ಅಕ್ರಮದ ಆರೋಪ ಮಾಡಿದ್ದರು. ಅಲ್ಲದೆ, ನ್ಯಾಯಾಲಯದ ಕಾರ್ಯವೈಖರಿಯನ್ನೂ ಟೀಕಿಸಿ ಹಲವು ಆರೋಪಗಳನ್ನು ಮಾಡಿದ್ದರು. ಜಗನ್ ಮೋಹನ್ ರೆಡ್ಡಿ ಅವರ ಈ ವರ್ತನೆಯನ್ನು ಹಲವರು ಟೀಕಿಸಿದ್ದರು. ಈ ಸಂಬಂಧ ಇಂದು ಪರಿಷ್ಕರಣೆ ನಡೆಸಿರುವ ಹೈಕೋರ್ಟ್​ಗೆ ಜಗನ್ ಮೋಹನ್ ರೆಡ್ಡಿ ವಿರುದ್ಧ 11 ಸುಮೊಟೋ ಕೇಸ್​ ದಾಖಲಿಸಿದೆ. ಆಂಧ್ರಪ್ರದೇಶ ಇತಿಹಾಸದಲ್ಲಿ ಸಿಎಂ ವಿರುದ್ಧ ದಾಖಲಾದ ಅತಿಹೆಚ್ಚು ಸುಮೋಟೋ ಪ್ರಕರಣ ಇದಾಗಿದೆ.


    2016ರಲ್ಲಿ ಜಗನ್ ಮೋಹನ್ ರೆಡ್ಡಿ ಅವರ ಹೇಳಿಕೆಗಳನ್ನು ಆಧರಿಸಿ ಅನಂತಪುರ ಮತ್ತು ಗುಂಟೂರು ಜಿಲ್ಲೆಯಲ್ಲಿ ಕೆಲವು ಪ್ರಕರಣಗಳು ದಾಖಲಾಗಿದ್ದವು. ಪ್ರಕರಣಗಳ ಪರಿಶೀಲನೆ ನಡೆಸಿರುವ ಪೊಲೀಸರು, ಕ್ರಿಯಾಶೀಲ ಸಾಕ್ಷ್ಯಗಳ ಅನುಪಸ್ಥಿತಿಯಲ್ಲಿ ಅಂತಿಮ ವರದಿಗಳನ್ನು ಸಲ್ಲಿಸಿದ್ದರು.


    ಈ ವರದಿ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿರುವ ಆಂಧ್ರ ಹೈಕೋರ್ಟ್‌ನ ನ್ಯಾಯಮೂರ್ತಿ ಕಣ್ಣಂಗೇಟಿ ಲಲಿತಾ ಅವರು, ಹೈಕೋರ್ಟ್ ಆಡಳಿತಾತ್ಮಕ ಸಮಿತಿ ಶಿಫಾರಸ್ಸಿನಂತೆ ಸುಮೊಟು ಕೇಸ್ ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಪೊಲೀಸರಿಗೆ ನೋಟಿಸ್ ನೀಡುವುದನ್ನು ತಡೆದಿದ್ದಾರೆ.


    ಪ್ರಕರಣಗಳನ್ನು ರದ್ದುಗೊಳಿಸಲು ಯಾವುದೇ ಆಕ್ಷೇಪಣೆ ಇಲ್ಲ ಎಂದು ಅರ್ಜಿದಾರರು ಸಂಬಂಧಪಟ್ಟ ಮ್ಯಾಜಿಸ್ಟ್ರೇಟ್ ನ್ಯಾಯಾಲಯಗಳಿಗೆ ಮಾಹಿತಿ ನೀಡಿದ್ದರು. ಹೀಗಾಗಿ ಕೆಳ ನ್ಯಾಯಾಲಯಗಳು ಪ್ರಕರಣಗಳನ್ನು ರದ್ದುಗೊಳಿಸಿದ್ದವು. ಆದರೆ, ನ್ಯಾಯಾಲಯದ ಆಡಳಿತ ಸಮಿತಿಯು ಅದರಲ್ಲಿ ದೋಷವನ್ನು ಕಂಡುಹಿಡಿದಿದ್ದು ಆಡಳಿತಾತ್ಮಕ ನಿರ್ಧಾರವನ್ನು ತೆಗೆದುಕೊಂಡಿತು.


    ಇದನ್ನೂ ಓದಿ: ಆಂಧ್ರದಲ್ಲಿ 12ನೇ ತರಗತಿ ಪರೀಕ್ಷೆ ನಡೆಸಲು ಮುಂದಾದ ಸರ್ಕಾರ; ಕೊರೋನಾದಿಂದ ಒಂದು ಸಾವಾದರೂ ನೀವೆ ಹೊಣೆ ಸುಪ್ರೀಂ ಎಚ್ಚರಿಕೆ!


    ಸಿಆರ್ ಪಿಸಿ ಸೆಕ್ಷನ್ 397, 401, 482 ಮತ್ತು 483 ರ ಅಡಿಯಲ್ಲಿ ಹೈಕೋರ್ಟ್ ತನ್ನ ಅಧಿಕಾರವನ್ನು ಬಳಸಿಕೊಂಡು ಸುಮೊಟು ಕೇಸ್ ದಾಖಲಿಸಲು ಸಾಧ್ಯವಿಲ್ಲ. ನ್ಯಾಯಾಂಗ ಇತಿಹಾಸದಲ್ಲಿ ಮೊದಲ ಬಾರಿಗೆ ಆಡಳಿತಾತ್ಮಕ ನಿರ್ಧಾರವನ್ನು ಆಧರಿಸಿ ಸುಮೊಟು ಕೇಸ್ ದಾಖಲಿಸಲಾಗಿದೆ ಎಂದು ಅಡ್ವೊಕೇಟ್ ಜನರಲ್ ಶ್ರೀರಾಮ್ ವಾದಿಸಿದ್ದಾರೆ.


    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

    Published by:MAshok Kumar
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು