• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • ಟ್ವೀಟ್​ ಮೂಲಕ ಸರ್ಕಾರಿ ಸಂಸ್ಥೆಗಳ ಅವಹೇಳನ: ನಟಿ ಕಂಗನಾ ವಿರುದ್ಧ ದಾಖಲಾಯ್ತು ಮತ್ತೊಂದು ದೂರು

ಟ್ವೀಟ್​ ಮೂಲಕ ಸರ್ಕಾರಿ ಸಂಸ್ಥೆಗಳ ಅವಹೇಳನ: ನಟಿ ಕಂಗನಾ ವಿರುದ್ಧ ದಾಖಲಾಯ್ತು ಮತ್ತೊಂದು ದೂರು

ನಟಿ ಕಂಗನಾ.

ನಟಿ ಕಂಗನಾ.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಮಸೂದೆಗಳ ವಿರುದ್ಧ ದೇಶದಾದ್ಯಂತ ರೈತರು ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲೂ ಸಹ ಟ್ವೀಟ್​ ಮಾಡಿದ್ದ ಕಂಗನಾ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಕೆ ಮಾಡಿದ್ದರು. ಈ ಹೇಳಿಕೆ ಸಂಬಂಧ ಕರ್ನಾಟಕದ ತುಮಕೂರಿನಲ್ಲಿ ದೂರು ದಾಖಲಾಗಿದೆ.

  • Share this:

    ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್​ ಆತ್ಮಹತ್ಯೆಗೆ ಶರಣಾದ ದಿನದಿಂದ ಒಂದಿಲ್ಲೊಂದು ಹೇಳಿಕೆ ನೀಡುತ್ತಾ ವಿವಾದಕ್ಕೆ ಗುರಿಯಾಗುತ್ತಲೇ ಬಂದಿರುವ ನಟಿ ಕಂಗನಾ ರಣಾವತ್​ ವಿರುದ್ಧ ಇಂದು ಮತ್ತೊಂದು ದೂರು ದಾಖಲಾಗಿದೆ. ಈ ಹಿಂದೆ ನಟ ಸುಶಾಂತ್ ಅವರ ಸಾವಿನ ತನಿಖೆಗೆ ಸಂಬಂಧಿಸಿದಂತೆ ಬಹಿರಂಗ ಹೇಳಿಕೆ ನೀಡಿದ್ದ ನಟಿ ಕಂಗನಾ, "ನನಗೆ ಮುಂಬೈ ಪೊಲೀಸರ ಮೇಲೆ ನಂಬಿಕೆ ಇಲ್ಲ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಬೇಕು" ಎಂದು ಒತ್ತಾಯಿಸಿದ್ದರು. ಅವರ ಈ ಹೇಳಿಕೆಯನ್ನೇ ಮುಂದಿಟ್ಟು ಇದೀಗ ವಕೀಲರೊಬ್ಬರು ಕಂಗನಾ ವಿರುದ್ಧ ಆಂಧೇರಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮತ್ತೊಂದು ಕ್ರಿಮಿನಲ್ ದೂರು ದಾಖಲಿಸಿದ್ದಾರೆ.


    ಈ ದೂರಿನಲ್ಲಿ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆಯ ವೇಳೆ ನಟಿ ಕಂಗನಾ ಮುಂಬೈ ಪೊಲೀಸರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಟ್ವಿಟರ್​​ನಲ್ಲಿ ರನೌತ್ ಮಾಡಿದ ಟ್ವೀಟ್‌ಗಳು ನಮ್ಮ ದೇಶದ ಕಾನೂನಿನ ಅಡಿಯಲ್ಲಿ ಸ್ಥಾಪಿಸಲ್ಪಟ್ಟ “ಪೊಲೀಸ್ ವ್ಯವಸ್ಥೆ, ಅಧಿಕೃತ ಸರ್ಕಾರಿ ಸಂಸ್ಥೆಗಳು, ಕಾರ್ಯನಿರ್ವಾಹಕ ಯಂತ್ರೋಪಕರಣಗಳು ಇವೆಲ್ಲವನ್ನೂ ಅವಮಾನಿಸಿದಂತಾಗಿದೆ"ಎಂದು ಆರೋಪಿಸಲಾಗಿದೆ.



    ಈ ನಡುವೆ  ಕಳೆದ ವಾರ ಖಾಸಗಿ ವ್ಯಕ್ತಿಯ ದೂರಿನ ವಿಚಾರಣೆ ನಡೆಸಿದ್ದ ಬಾಂದ್ರಾ ನ್ಯಾಯಾಲಯವು ಮುಂಬೈ ಪೊಲೀಸರಿಗೆ ಟ್ವೀಟ್ ಮಾಡಿದ್ದಕ್ಕಾಗಿ ಕಂಗನಾ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಿಸುವಂತೆ ನಿರ್ದೇಶಿಸಿತ್ತು. ಆದರೆ, ನಟಿ ಕಂಗನಾ ನ್ಯಾಯಾಲಯದ ಈ ತೀರ್ಪನ್ನು ಗೇಲಿ ಮಾಡಿದ್ದರು. ಇಂದು ಸಲ್ಲಿಸಲಾಗಿರುವ ದೂರಿನಲ್ಲಿ ಇದನ್ನೂ ಸಹ ಉಲ್ಲೇಖಿಸಲಾಗಿದೆ.


    ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಮಸೂದೆಗಳ ವಿರುದ್ಧ ದೇಶದಾದ್ಯಂತ ರೈತರು ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲೂ ಸಹ ಟ್ವೀಟ್​ ಮಾಡಿದ್ದ ಕಂಗನಾ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಕೆ ಮಾಡಿದ್ದರು. ಈ ಹೇಳಿಕೆಗೂ ಸಹ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಅಲ್ಲದೆ, ಕರ್ನಾಟಕದ ತುಮಕೂರಿನಲ್ಲಿ ಈ ಸಂಬಂಧ ಕಂಗನಾ ವಿರುದ್ಧ ಒಂದು ಎಫ್​ಐಆರ್​ ದಾಖಲಾಗಿದೆ.


    ಪ್ರಸ್ತುತ ಇಂದು ದಾಖಲಾಗಿರುವ ಎಫ್​​ಐಆರ್​ನಲ್ಲಿ ದೇಶದ್ರೋಹ, ವಿವಿಧ ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಪ್ರಚೋದನೆ ಸೇರಿದಂತೆ ರನೌತ್ ವಿರುದ್ಧ ಅನೇಕ ಕಲಂಗಳ ಅಡಿಯಲ್ಲಿ ದೂರು ದಾಖಲಾಗಿದೆ. ನವೆಂಬರ್ 10 ರಂದು ಈ ದೂರಿನ ವಿಚಾರಣೆ ನಡೆಯಲಿದೆ.



    ಆದರೆ, ತನ್ನ ವಿರುದ್ಧ ಮತ್ತೊಂದು ದೂರು ದಾಖಲಾಗುತ್ತಿದ್ದಂತೆ ಮತ್ತೆ ಟ್ವಿಟರ್​ನಲ್ಲಿ ಅಸಮಾಧಾನವನ್ನು ತೋಡಿಕೊಂಡಿರುವ ಕಂಗನಾ ರಣಾವತ್​, ನಟ ಅಮಿರ್​​ ಖಾನ್​ ಅವರು 2015ರಲ್ಲಿ ದೇಶದಲ್ಲಿ ಅಸಹಿಷ್ಣುತೆ ಹೆಚ್ಚಿದೆ ಎಂದು ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿ, ಅಮಿರ್​ ಖಾನ್ ಮತ್ತು ಮುಂಬೈ ಮಹಾನಗರ ಪಾಲಿಕೆ​ ವಿರುದ್ಧ ಮತ್ತೊಮ್ಮೆ ಕಿಡಿಕಾರಿದ್ದಾರೆ. ಅಲ್ಲದೆ, ಪಾಲಿಕೆ ಅಧಿಕಾರಿಗಳು ತಮ್ಮ ಕಚೇರಿಯನ್ನು ಧ್ವಂಸಗೊಳಿಸಿದ ಕ್ರಿಯೆಯನ್ನು ಬ್ರಿಟೀಷರು ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರ ಕೋಟೆಯನ್ನು ಧ್ವಂಸಗೊಳಿಸಿದ ಘಟನೆಗೆ ಹೋಲಿಕೆ ಮಾಡಿ ಟ್ವೀಟ್ ಮಾಡಿದ್ದಾರೆ.

    Published by:MAshok Kumar
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು