ಅಸ್ಸಾಂ; ಬ್ರಹ್ಮಪುತ್ರ ನದಿಯಲ್ಲಿ ಎರಡು ದೋಣಿಗಳ ನಡುವೆ ಡಿಕ್ಕಿ, 50 ಕ್ಕೂ ಹೆಚ್ಚು ಜನ ಸಾವಿನ ಶಂಕೆ!
ದುರಂತ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ, NDRF ಮತ್ತು SDRF ತಂಡಗಳ ಸಹಾಯದಿಂದ ತ್ವರಿತವಾಗಿ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳುವಂತೆ ಮಜುಲಿ ಮತ್ತು ಜೋರ್ಹತ್ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
ಅಸ್ಸಾಂ (ಸೆಪ್ಟೆಂಬರ್ 08); ಬ್ರಹ್ಮಪುತ್ರ ನದಿಯಲ್ಲಿ ಎರಡು ದಿಕ್ಕಿನಿಂದ ಬಂದ ಹಡಗುಗಳ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕನಿಷ್ಟ 50 ಜನ ಮೃತಪಟ್ಟಿರುವ ಶಂಕೆ ಇದ್ದು, 40ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ. ಹಲವರು ಕಾಣೆಯಾಗಿದ್ದಾರೆ ಎಂದು NDRF ಸಹಾಯಕ ಕಮಾಂಡೆಂಟ್ 12 ಬೆಟಾಲಿಯನ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಅಸ್ಸಾಂನ ಜೋರ್ಹತ್ ಜಿಲ್ಲೆಯ ನಿಮತಿ ಘಾಟ್ ಬಳಿ ನಡೆದಿದೆ ಎಂದು ತಿಳಿದುಬಂದಿದೆ. "ಸಿಬ್ಸಾಗರದಲ್ಲಿ 12 ನೇ ಬೆಟಾಲಿಯನ್ನ NDRF ತಂಡವು ಈಗಾಗಲೇ ಸ್ಥಳದಲ್ಲಿದೆ ಮತ್ತು ಇನ್ನೊಂದು ಎರಡು ಗಂಟೆಗಳಲ್ಲಿ ಎರಡು ತಂಡಗಳು ಸ್ಥಳವನ್ನು ತಲುಪುತ್ತವೆ. ಅರುಣಾಚಲ ಪ್ರದೇಶದ ದೋಯಿಮುಖ್ ಪಟ್ಟಣದಲ್ಲಿ ನೆಲೆಗೊಂಡಿರುವ ಇನ್ನೂ ಎರಡು NDRF ತಂಡಗಳು ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ಮತ್ತು ಸಹಾಯ ಮಾಡಲು ಸಿದ್ಧತೆ ನಡೆಸುತ್ತಿವೆ "ಎಂದು NDRF ಅಧಿಕಾರಿ ತಿಳಿಸಿದ್ದಾರೆ.
I am pained at the tragic boat accident near Nimati Ghat, Jorhat.
Directed Majuli & Jorhat admin to undertake rescue mission expeditiously with help of @NDRFHQ & SDRF. Advising Min @BimalBorahbjp to immediately rush to the accident site. I'll also visit Nimati Ghat tomorrow.
ದುರಂತ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ, NDRF ಮತ್ತು SDRF ತಂಡಗಳ ಸಹಾಯದಿಂದ ತ್ವರಿತವಾಗಿ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳುವಂತೆ ಮಜುಲಿ ಮತ್ತು ಜೋರ್ಹತ್ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
ಅಲ್ಲದೆ, ಪರಿಸ್ಥಿತಿಯನ್ನು ಅವಲೋಕಿಸಲು ರಾಜ್ಯ ಸಚಿವ ಬಿಮಲ್ ಬೋರಾ ಅವರಿಗೆ ತಕ್ಷಣ ಮಜುಲಿಗೆ ಭೇಟಿ ನೀಡುವಂತೆ ಸೂಚಿಸಿದ್ದಾರೆ ಮತ್ತು ಬೆಳವಣಿಗೆಗಳನ್ನು 24 ಗಂಟೆಯೂ ಮೇಲ್ವಿಚಾರಣೆ ಮಾಡುವಂತೆ ಪ್ರಧಾನ ಕಾರ್ಯದರ್ಶಿ ಸಮೀರ್ ಕುಮಾರ್ ಸಿನ್ಹಾ ಅವರಿಗೆ ಆದೇಶಿಸಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಬಗ್ಗೆ ವಿಚಾರಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿದ್ದಾರೆ ಮತ್ತು ಇದುವರೆಗೆ ರಕ್ಷಿಸಿದವರ ರಕ್ಷಣಾ ಕಾರ್ಯಗಳು ಮತ್ತು ಸ್ಥಿತಿಗತಿಗಳ ಬಗ್ಗೆ ಅಪ್ಡೇಟ್ ತೆಗೆದುಕೊಂಡಿದ್ದಾರೆ ಎಂದು ಶರ್ಮಾ ಮಾಹಿತಿ ನೀಡಿದರು. ಕೇಂದ್ರವು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲು ಸಿದ್ಧವಾಗಿದೆ ಎಂದು ಶಾ ಭರವಸೆ ನೀಡಿದರು. ಪರಿಸ್ಥಿತಿಯನ್ನು ನಿರ್ಣಯಿಸಲು ಮುಖ್ಯಮಂತ್ರಿ ಗುರುವಾರ ಮಜುಲಿಗೆ ಭೇಟಿ ನೀಡಲಿದ್ದಾರೆ.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ