ನವ ದೆಹಲಿ (ನವೆಂಬರ್ 12); ಆತ್ಮಹತ್ಯೆಗೆ ಪ್ರಚೋಧನೆ ನೀಡಿದ್ದ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಇತ್ತೀಚೆಗೆ ಮುಂಬೈ ಪೊಲೀಸರು ಬಂದಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಸ್ವಾಮಿ ಅವರಿಗೆ ಜಾಮೀನು ನೀಡಲು ಮುಂಬೈ ಕೋರ್ಟ್ ನಿರಾಕರಿಸಿತ್ತು. ಆದರೆ, ಆರೋಪಿಯ ಮೇಲ್ಮನವಿಯನ್ನು ಆಲಿಸಿದ್ದ ಸುಪ್ರೀಂ ಕೋರ್ಟ್ ಗೋಸ್ವಾಮಿ ಅವರಿಗೆ ಕೊನೆಗೂ ನಿನ್ನೆ ಜಾಮೀನು ನೀಡಿತ್ತು. ಆದರೆ, ಸುಪ್ರೀಂ ಕೋರ್ಟ್ನ ಈ ಕಾರ್ಯವೈಖರಿಯನ್ನು ಖಂಡಿಸಿದ್ದ ಖ್ಯಾತ ಸ್ಟಾಂಡಪ್ ಕಾಮಿಡಿಯನ್ ಕುನಾಲ್ ಕಮ್ರಾ ಈ ಕುರಿತು ಟ್ವೀಟ್ ಒಂದನ್ನು ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಕುನಾಲ್ ಕಮ್ರಾ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸಲು ಅನುಮತಿ ನೀಡಿದ್ದಾರೆ.
ಕುನಾಲ್ ಕಮ್ರಾ ವಿರುದ್ದದ ಅರ್ಜಿಯನ್ನು ಮನ್ನಿಸಿರುವ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್, “ಸುಪ್ರೀಂ ಕೋರ್ಟ್ ಘನತೆಯ ಮೇಲೆ ವಿನಾಕಾರಣ ದಾಳಿ ನಡೆಸುವವರು ಶಿಕ್ಷೆಗೆ ಆಹ್ವಾನ ನೀಡುತ್ತಿದ್ದಾರೆ ಎಂದು ಜನರು ಅರ್ಥಮಾಡಿಕೊಳ್ಳುವ ಸಮಯ ಇದಾಗಿದೆ” ಎಂದು ಹೇಳಿದ್ದಾರೆ.
Attorney General KK Venugopal grants consent for initiating criminal contempt against stand up comedian Kunal Kamra (in file photo), for his alleged derogatory tweets against a Supreme Court judge. pic.twitter.com/KNLNEp2Nhw
— ANI (@ANI) November 12, 2020
ಟ್ವಿಟ್ಟರ್ನಲ್ಲಿ 17 ಲಕ್ಷ ಫಾಲೋವರ್ಸ್ ಹೊಂದಿರುವ ಕುನಾಲ್ ಕಮ್ರಾ ರವರು ಸುಪ್ರೀಂ ಕೋರ್ಟಿನ ಕಾರ್ಯವೈಖರಿಯನ್ನು ಅವರಹೇಳನ ಮಾಡುವ ನಾಲ್ಕು ಟ್ವೀಟ್ ಮಾಡಿದ್ದಾರೆ. ಅವರನ್ನು ಶಿಕ್ಷಿಸದಿದ್ದರೆ ಅವರ ಫಾಲೋವರ್ಸ್ ಕೂಡ ಸುಪ್ರೀಂ ಕೋರ್ಟಿಗೆ ಬೆಲೆ ನೀಡುವುದಿಲ್ಲ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.
ಇದನ್ನೂ ಓದಿ : ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ ಬಂಧನ; ಸಾಮಾಜಿಕ ಜಾಲತಾಣಗಳಲ್ಲಿ ಗರಿಗೆದರಿದ ಪರ-ವಿರೋಧ ಚರ್ಚೆ
ರಿಪಬ್ಲಿಕ್ ಟಿವಿ ಸ್ಟುಡಿಯೋ ನಿರ್ಮಿಸುವಾಗ ಅನ್ವಯ್ ನಾಯಕ್ ಅವರೇ ಇಂಟೀರಿಯರ್ ಡಿಸೈನಿಂಗ್ ಮಾಡಿಕೊಟ್ಟಿದ್ದರು. ಅದರ ಹಣ ನೀಡದೆ ಸತಾಯಿಸಿದ್ದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಅರ್ನಬ್ ಗೋಸ್ವಾಮಿ ವಿರುದ್ಧ ಕೇಳಿಬಂದಿತ್ತು. 2018ರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಅರ್ನಬ್ ಗೋಸ್ವಾಮಿ ವಿರುದ್ಧ ದಾಖಲಾಗಿದ್ದ ಕೇಸನ್ನು 2019ರಲ್ಲಿ ರಾಯಘಡ ಪೊಲೀಸರು ಕ್ಲೋಸ್ ಮಾಡಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ