ಲಕ್ನೋ (ಅ. 18): ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಮೂರು ದಿನಗಳ ಹಿಂದೆ ಪೊಲೀಸರ ಎದುರಿನಲ್ಲೇ ವ್ಯಕ್ತಿಯೊಬ್ಬನನ್ನು ಗುಂಡು ಹಾರಿಸಿ, ಕೊಲೆ ಮಾಡಿದ್ದ ಆರೋಪದಲ್ಲಿ ಪ್ರಮುಖ ಆರೋಪಿ ಧೀರೇಂದ್ರ ಸಿಂಗ್ನನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ನಾನು ನಿರಪರಾಧಿ ಎಂದು ವಿಡಿಯೋ ರಿಲೀಸ್ ಮಾಡಿದ್ದ ಧೀರೇಂದ್ರ ಸಿಂಗ್ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರಿಗೆ ಆಪ್ತನಾಗಿದ್ದ ಎನ್ನಲಾಗಿದೆ. ಈತನ ಜೊತೆಗೆ ಸಂತೋಷ್ ಯಾದವ್ ಮತ್ತು ಅಮರಜೀತ್ ಯಾದವ್ ಎಂಬ ಇನ್ನಿಬ್ಬರು ಆರೋಪಿಗಳನ್ನು ಕೂಡ ಉತ್ತರಪ್ರದೇಶ ಎಸ್ಟಿಎಫ್ ಸಿಬ್ಬಂದಿ ಇಂದು ಲಕ್ನೋದಲ್ಲಿ ವಶಕ್ಕೆ ಪಡೆದಿದ್ದಾರೆ.
ಬಲ್ಲಿಯಾ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 10 ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಮೂರು ದಿನಗಳ ಹಿಂದೆ ಬಲ್ಲಿಯಾದಲ್ಲಿ ಪಡಿತರ ಅಂಗಡಿಗಳನ್ನು ಅಧಿಕಾರಿಗಳ ಸುಪರ್ದಿಗೆ ವಹಿಸುವ ಕಾರ್ಯಕ್ರಮದಲ್ಲಿ ಪೊಲೀಸ್ ಮತ್ತು ಸರ್ಕಾರಿ ಅಧಿಕಾರಿ ಎದುರಲ್ಲೇ ಬಿಜೆಪಿ ಕಾರ್ಯಕರ್ತ ಧೀರೇಂದ್ರ ಸಿಂಗ್ ಜೈ ಪ್ರಕಾಶ್ ಎಂಬುವವರಿಗೆ ಗುಂಡು ಹಾರಿಸಿ, ಕೊಲೆ ಮಾಡಿದ್ದ.
ಇದನ್ನೂ ಓದಿ: ಉತ್ತರಪ್ರದೇಶದಲ್ಲಿ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು; ಮೂವರ ಬಂಧನ
ಈ ಘಟನೆ ನಡೆದ ಬಳಿಕ ಧೀರೇಂದ್ರ ಸಿಂಗ್ ತಲೆಮರೆಸಿಕೊಂಡಿದ್ದ. ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಅಧಿಕಾರಿಯನ್ನು ಮುಖ್ಯಮಂತ್ರಿ ಆದಿತ್ಯನಾಥ್ ಅಮಾನತುಗೊಳಿಸಿದ್ದರು. ಈ ಪ್ರಕರಣದ ಬಗ್ಗೆ ವಿಡಿಯೋ ರಿಲೀಸ್ ಮಾಡಿದ್ದ ಧೀರೇಂದ್ರ ಸಿಂಗ್, ನಾನು ಗುಂಡು ಹೊಡೆದಿಲ್ಲ. ನನ್ನನ್ನು ಸಿಲುಕಿಸಲು ಯಾರೋ ಪಿತೂರಿ ನಡೆಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ