ಪಾಟ್ನಾ (ನ. 11): ಮತಗಟ್ಟೆಯ ಸಮೀಕ್ಷೆಯನ್ನು ಬುಡಮೇಲಾಗಿಸಿ, ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕೊನೆಗೂ ಎನ್ಡಿಎ ಅಧಿಕಾರಕ್ಕೆ ಬಂದಿದೆ. ನಿತೀಶ್ ಕುಮಾರ್ ಮತ್ತೆ ಬಿಹಾರದ ಮುಖ್ಯಮಂತ್ರಿಯಾಗುವುದು ಪಕ್ಕಾ ಎನ್ನಲಾಗಿದೆ. ಬಿಹಾರದಲ್ಲಿ ಮತ್ತೊಮ್ಮೆ ಎನ್ಡಿಎ ಮೈತ್ರಿಕೂಡ ಜಯಭೇರಿ ಬಾರಿಸಿದೆ. ಸಾಕಷ್ಟು ಏರಿಳಿತಗಳ ನಡುವೆಯೂ, ಹಲವು ಲೆಕ್ಕಾಚಾರಗಳನ್ನು ತಲೆ ಕೆಳಗಾಗಿಸಿದ ಎನ್ಡಿಎ ಸತತ 14 ಗಂಟೆಗಳ ಮತ ಎಣಿಕೆಯ ಬಳಿಕ ಗೆಲುವಿನ ನಗು ಬೀರಿದೆ. ಇದರಿಂದ ಬಿಹಾರದ ಅತಿದೊಡ್ಡ ಪಕ್ಷವಾಗಿ ಆರ್ಜೆಡಿ ಹೊರಹೊಮ್ಮಿದ್ದರೂ ತೇಜಸ್ವಿ ಯಾದವ್ ಮುಖ್ಯಮಂತ್ರಿ ಪದವಿಯ ಕನಸು ಕನಸಾಗಿಯೇ ಉಳಿಯಲಿದೆ. ಬಿಜೆಪಿಯೊಂದಿಗೆ ಕೈ ಜೋಡಿಸಿರುವ ಜೆಡಿಯು ಪಕ್ಷದ ನಿತೀಶ್ ಕುಮಾರ್ ಮತ್ತೊಮ್ಮೆ ಸಿಎಂ ಆಗುವುದು ಬಹುತೇಕ ಖಚಿತವಾಗಿದೆ.
ನಿನ್ನೆಯ ಮತ ಎಣಿಕೆಯ ಆರಂಭದಲ್ಲಿ ಎನ್ಡಿಎ ಮತ್ತು ಮಹಾಘಟಬಂಧನ್ ಮಧ್ಯೆ ತೀವ್ರ ಪೈಪೋಟಿ ಮತ್ತು ಸಮಾನ ಮುನ್ನಡೆ ಸ್ಥಿತಿ ಇದ್ದರೂ ಮಧ್ಯಾಹ್ನದ ನಂತರ ಎನ್ಡಿಎ ಮುನ್ನಡೆ ಸಾಧಿಸಿತ್ತು. ಒಂದುವೇಳೆ ಬಿಹಾರದಲ್ಲಿ ಎನ್ಡಿಎ ಜಯ ಸಾಧಿಸಿದರೆ ನಿತೀಶ್ ಕುಮಾರ್ ಅವರೇ ಸರ್ಕಾರ ಮುನ್ನಡೆಸುವರು ಎಂದು ಹೇಳಲಾಗಿತ್ತು. ಅದರಂತೆ ನಿತೀಶ್ ಕುಮಾರ್ ಮತ್ತೊಮ್ಮೆ ಬಿಹಾರದ ಸಿಎಂ ಗದ್ದುಗೆ ಏರುವುದು ಬಹುತೇಕ ಖಚಿತವಾಗಿದೆ.
ಇತ್ತ ಕಾಂಗ್ರೆಸ್ ಕೂಡ ನಿತೀಶ್ ಕುಮಾರ್ಗೆ ಆಹ್ವಾನ ನೀಡಿದ್ದು, ನಮ್ಮ ಜೊತೆ ಕೈ ಜೋಡಿಸಿ, ತೇಜಸ್ವಿ ಯಾದವ್ಗೆ ಬೆಂಬಲ ನೀಡಬೇಕಾಗಿ ಮನವಿ ಮಾಡಿದ್ದಾರೆ. ಎನ್ಡಿಎ ಮೈತ್ರಿಕೂಟದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ನಿತೀಶ್ ಕುಮಾರ್ ಅವರಿಗೆ ಸಿಎಂ ಸ್ಥಾನ ನೀಡಲು ಒಪ್ಪದಿದ್ದರೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ದಿಗ್ವಿಜಯ್ ಸಿಂಗ್ ಬಹಿರಂಗವಾಗಿಯೇ ಆಹ್ವಾನ ನೀಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ಗಳನ್ನು ಮಾಡಿರುವ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಬಿಜೆಪಿಯನ್ನು ಯಾವ ಕಾರಣಕ್ಕೂ ನಂಬುವಂತಿಲ್ಲ. ಲಾಲೂ ಪ್ರಸಾದ್ ಯಾದವ್ ನಿಮ್ಮ ಕಷ್ಟಕಾಲದಲ್ಲಿ ನಿಮ್ಮ ಜೊತೆಗೆ ಬೆಂಬಲವಾಗಿದ್ದವರು. ಅವರ ಪಕ್ಷ ಅಧಿಕಾರಕ್ಕೆ ಬರಲು ನೀವು ಬಿಜೆಪಿಯನ್ನು ತೊರೆದು ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಜೊತೆ ಕೈ ಜೋಡಿಸಿ ಎಂದು ದಿಗ್ವಿಜಯ್ ಸಿಂಗ್ ಆಹ್ವಾನ ನೀಡಿದ್ದಾರೆ.
भाजपा/संघ अमरबेल के समान हैं, जिस पेड़ पर लिपट जाती है वह पेड़ सूख जाता है और वह पनप जाती है।
नितीश जी, लालू जी ने आपके साथ संघर्ष किया है आंदोलनों मे जेल गए है भाजपा/संघ की विचारधारा को छोड़ कर तेजस्वी को आशीर्वाद दे दीजिए। इस “अमरबेल” रूपी भाजपा/संघ को बिहार में मत पनपाओ।
— digvijaya singh (@digvijaya_28) November 11, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ