• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • ದಲಿತ ಮಹಿಳೆಯನ್ನು ಸಾಮೂಹಿಕ ಅತ್ಯಾಚಾರಕ್ಕೊಳಪಡಿಸಿ ಮಗುವಿನ ಸಮೇತ ಕಾಲುವೆಗೆ ಎಸೆದ ಕೀಚಕರು

ದಲಿತ ಮಹಿಳೆಯನ್ನು ಸಾಮೂಹಿಕ ಅತ್ಯಾಚಾರಕ್ಕೊಳಪಡಿಸಿ ಮಗುವಿನ ಸಮೇತ ಕಾಲುವೆಗೆ ಎಸೆದ ಕೀಚಕರು

ಪ್ರಾತಿನಿಧಿಕ ಚಿತ್ರ.

ಪ್ರಾತಿನಿಧಿಕ ಚಿತ್ರ.

ಕಳೆದ ತಿಂಗಳು ದೆಹಲಿಯ ಆಸ್ಪತ್ರೆಯಲ್ಲಿ ನಿಧನರಾದ ಉತ್ತರ ಪ್ರದೇಶದ ಹತ್ರಾಸ್‌ನ 20 ವರ್ಷದ ಯುವತಿಯನ್ನು ಕ್ರೂರವಾಗಿ ಅತ್ಯಾಚಾರಗೈದು ಹಲ್ಲೆ ಮಾಡಿದ್ದ ಘಟನೆಯ ಬೆನ್ನಲ್ಲೇ, ದೇಶದಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ವಿರುದ್ಧ ಆಕ್ರೋಶ ಹೆಚ್ಚುತ್ತಿರುವ ನಡುವೆ ಈ ಘಟನೆ ನಡೆದಿದೆ.

  • Share this:

    ಬಿಹಾರ (ಅಕ್ಟೋಬರ್​12); ಉತ್ತರಪ್ರದೇಶದ ಹತ್ರಾಸ್​ ಎಂಬಲ್ಲಿ ಕಳೆದ ತಿಂಗಳು ಓರ್ವ ದಲಿತ ಯುವತಿಯನ್ನು ಕೆಲವರು ಸಾಮೂಹಿಕ ಅತ್ಯಾಚಾರವೆಸಗಿ ಅತ್ಯಂತ ನಿರ್ಧಯವಾಗಿ ಕೊಲೆ ಮಾಡಿದ್ದರು. ಈ ಘಟನೆ ಇದೀಗ ರಾಷ್ಟ್ರಾದ್ಯಂತ ದೊಡ್ಡ ಚರ್ಚೆಗೆ ಕಾರಣವಾಗಿದೆ. ಅಲ್ಲದೆ, ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್​ ಅವರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ನಡುವೆ ಈ ಪ್ರಕರಣದ ತನಿಖೆಯನ್ನು ಈಗಾಗಲೇ ಸಿಬಿಐಗೆ ವಹಿಸಲಾಗಿದೆ. ಆದರೆ, ಈ ಘಟನೆ ಮಾಸುವ ಮುನ್ನವೇ ಬಿಹಾರ ರಾಜ್ಯದ ಬಕ್ಸರ್ ಜಿಲ್ಲೆಯಲ್ಲಿ ಮತ್ತೋರ್ವ ದಲಿತ ಮಹಿಳೆಯೊಬ್ಬರ ಮೇಲೆ ಕೆಲವು ಕಿರಾತಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆಕೆಯ ಮಗುವಿನ ಸಮೇತ ಅವರನ್ನು ಕಾಲುವೆಗೆ ಎಸೆದಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಈ ಘಟನೆಯಲ್ಲಿ ಸಂತ್ರಸ್ತ ಮಹಿಳೆಯ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ.


    ಐದು ವರ್ಷದ ಮಗುವನ್ನು ಕಾಲುವೆಗೆ ಎಸೆದಿದ್ದರಿಂದ ಮಗು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣದ ಏಳು ಆರೋಪಿಗಳಲ್ಲಿ ಒಬ್ಬನನ್ನು ಈಗಾಗಲೇ ಬಂಧಿಸಲಾಗಿದೆ. ಇಬ್ಬರನ್ನು ಗುರುತಿಸಲಾಗಿದೆ. ಸಂತ್ರಸ್ತೆಯನ್ನು ಚಿಕಿತ್ಸೆಗಾಗಿ ಪಾಟ್ನಾದಿಂದ 135 ಕಿ.ಮೀ ದೂರದಲ್ಲಿರುವ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


    “ಮಹಿಳೆಯ ವೈದ್ಯಕೀಯ ಪರೀಕ್ಷೆ ನಡೆಯುತ್ತಿದೆ. ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಲಾಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿ ಕೆ.ಕೆ.ಸಿಂಗ್ ಹೇಳಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.


    ಕಳೆದ ತಿಂಗಳು ದೆಹಲಿಯ ಆಸ್ಪತ್ರೆಯಲ್ಲಿ ನಿಧನರಾದ ಉತ್ತರ ಪ್ರದೇಶದ ಹತ್ರಾಸ್‌ನ 20 ವರ್ಷದ ಯುವತಿಯನ್ನು ಕ್ರೂರವಾಗಿ ಅತ್ಯಾಚಾರಗೈದು ಹಲ್ಲೆ ಮಾಡಿದ್ದ ಘಟನೆಯ ಬೆನ್ನಲ್ಲೇ, ದೇಶದಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ವಿರುದ್ಧ ಆಕ್ರೋಶ ಹೆಚ್ಚುತ್ತಿರುವ ನಡುವೆ ಈ ಘಟನೆ ನಡೆದಿದೆ.


    ಇದನ್ನೂ ಓದಿ : ಮೋದಿ ಓಡಾಡಲು 8400 ಕೋಟಿ ಬೆಲೆಯ ವಿಮಾನ, ಸೈನಿಕರಿಗೆ ಬುಲೆಟ್​ ಪ್ರೂಫ್​ ರಹಿತ ಟ್ರಕ್​; ರಾಹುಲ್ ಗಾಂಧಿ ಕಿಡಿ


    ದೆಹಲಿಯಲ್ಲಿ 2012 ರಲ್ಲಿ ನಡೆದ ಸಾಮೂಹಿಕ ಅತ್ಯಾಚಾರವನ್ನು ನೆನಪಿಸುವ ಹತ್ರಾಸ್ ಪ್ರಕರಣವನ್ನು ಸಿಬಿಐ ತೆಗೆದುಕೊಂಡಿದೆ. ಯುವತಿಯನ್ನು ತನ್ನ ಹಳ್ಳಿಯ ನಾಲ್ಕು ಮೇಲ್ಜಾತಿ ಪುರುಷರು ಸಾಮೂಹಿಕ ಅತ್ಯಾಚಾರ ಮತ್ತು ಹಲ್ಲೆ ಮಾಡಿದ್ದಾರೆ ಎಂದು ಕುಟುಂಬ ಆರೋಪಿಸಿದೆ. ಆಕೆಯ ಕುಟುಂಬ ಇಂದು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠದ ಮುಂದೆ ಹಾಜರಾಗಲಿದೆ.


    ಕಳೆದ ತಿಂಗಳು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ, ಭಾರತವು 2019 ರಲ್ಲಿ ಪ್ರತಿದಿನ ಸರಾಸರಿ 87 ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಿದೆ. ಈ ವರ್ಷದಲ್ಲಿ ಮಹಿಳೆಯರ ಮೇಲಿನ 4,05,861 ಅಪರಾಧಗಳು ದಾಖಲಾಗಿವೆ. ಇದು 2018 ಕ್ಕಿಂತ ಶೇ.7 ರಷ್ಟು ಹೆಚ್ಚಾಗಿದೆ.

    Published by:MAshok Kumar
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು