ಬಿಹಾರ (ನವೆಂಬರ್ 02); ಕೊರೋನಾ ಬಿಕ್ಕಟ್ಟಿನ ನಡುವೆಯೂ ಇಡೀ ದೇಶ ಬಿಹಾರ ವಿಧಾನಸಭಾ ಚುನಾವಣೆಯನ್ನು ಕಾತರದಿಂದ ಕಾಯುತ್ತಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್ಡಿಎ ಮೈತ್ರಿಕೂಟ ಬಿಹಾರದಲ್ಲಿ ಮತ್ತೊಂದು ಅವಧಿಗೆ ಅಧಿಕಾರ ಹಿಡಿಯುವ ತವಕದಲ್ಲಿದ್ದರೆ ಮತ್ತೊಂದೆಡೆ ಯುವ ನಾಯಕ ತೇಜಸ್ವಿ ಯಾದವ್ ಎನ್ಡಿಎ ಮೈತ್ರಿಗೆ ಸವಾಲಾಗಿ ಪರಿಣಮಿಸುತ್ತಿದ್ದಾರೆ. ಈ ನಡುವೆ ಮೊದಲ ಹಂತದ ಚುಣಾವಣೆಯೂ ಮುಕ್ತಾಯವಾಗಿದ್ದು, ಇದೀಗ ಬಿಹಾರ ಎರಡನೇ ಹಂತದ ಚುನಾವಣೆಯ ಸಿದ್ದತೆಯಲ್ಲಿದೆ. 2ನೇ ಹಂತದ ಮತದಾನಕ್ಕೆ ಬಹಿರಂಗ ಪ್ರಚಾರ ನಿನ್ನೆ ಮುಕ್ತಾಯವಾಗಿದೆ. ಆದರೆ, ಇದರ ನಡುವೆಯೇ ಟ್ವಿಟರ್ನಲ್ಲಿ ಇದೀಗ #BiharRejectsModi ಹ್ಯಾಷ್ಟ್ಯಾಗ್ ದೇಶಾದ್ಯಂತ ಟ್ರೆಂಡಿಂಗ್ ಆಗುತ್ತಿದೆ.
ಈ ಹ್ಯಾಶ್ಟ್ಯಾಗ್ ಬಳಸಿ ಸಾವಿರಾರು ಜನ ಟ್ವೀಟ್ ಮಾಡಿದ್ದು, ಬಿಜೆಪಿ ಸರ್ಕಾರ ಮತ್ತು ನರೇಂದ್ರ ಮೋದಿಯ ವಿರುದ್ಧದ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಆಡಳಿತ ಮತ್ತು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆಡಳಿತದ ವಿರುದ್ಧ ಅಲ್ಲಿನ ಜನ ತಿರುಗಿಬಿದ್ದಿದ್ದಾರೆ.
#BiharRejectsModi because Biharis will not forget how they were mistreated and abandoned by Modi. pic.twitter.com/ciURbvjyao
— Geet V (@geetv79) November 2, 2020
No more farmer suicide
No more unemployment
No more Jungle Raj
No more public loot
No more religious hatred
No more fake Jumlas
No more language politics
No more fake nationalism
No more Vaccine politics
Bihar will be prosperous.
Vote For Congress and RJD#BiharRejectsModi pic.twitter.com/MCWU61roeU
— Valsala Kumari T✋ (@t_valsala) November 2, 2020
This is how Bihar had dealt with the Covid19 patients. Doctors had exposed themselves and many Died due to the incompetence of both Goverment Central as well as Bihar.#BiharRejectsModi@narendramodi or @NitishKumar सिर्फ लम्बी लम्बी हांकते है।
pic.twitter.com/A5K2Fe5HL2
— Md Obaidullah (@INCObaid) November 2, 2020
ಕಳೆದ 15 ವರ್ಷಗಳಿಂದಲೂ ಬಿಹಾರ ರಾಜ್ಯವು ನಿತೀಶ್ ಕುಮಾರ್ ಆಡಳಿತದಲ್ಲಿಯೇ ಇದೆ. ಆದರೂ ಯಾವುದೇ ಅಭಿವೃದ್ಧಿ ಕಂಡಿಲ್ಲ ಎಂಬುದಾಗಿ ವಿರೋಧ ಪಕ್ಷಗಳೂ ಸೇರಿದಂತೆ ಹಲವರು ಆರೋಪಿಸಿದ್ದಾರೆ. ಅದೂ ಅಲ್ಲದೇ ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಇದರ ವಿರುದ್ಧವೂ ಈಗ ಜನ ತಿರುಗಿ ಬಿದ್ದಿದ್ದಾರೆ ಎನ್ನಲಾಗುತ್ತಿದೆ.
ಬಿಹಾರ ರಾಜಕೀಯ ವಲಯದಲ್ಲಿ ತೇಜಸ್ವಿ ಯಾದವ್, ಚಿರಾಗ್ ಪಾಸ್ವಾನ್ ಮತ್ತು ನಿತೀಶ್ ಕುಮಾರ್ ನಡುವೆ ಮಹಾ ಪೈಪೋಟಿ ನಡೆಯುತ್ತಿದೆ. ಎನ್ಡಿಎ ಮೈತ್ರಿಯಲ್ಲಿ ಬಿಜೆಪಿ, ಜೆಡಿಯು ಮತ್ತು ಎಲ್ಜೆಪಿ ಪಕ್ಷಗಳಿದ್ದವು. ಆದರೆ ನಿತೀಶ್ ಕುಮಾರ್ ಅವರೊಂದಿಗಿನ ಭಿನ್ನಾಭಿಪ್ರಾಯದಿಂದ ಚಿರಾಗ್ ಪಾಸ್ವಾನ್ ಅವರ ಎಲ್ಜೆಪಿ ಪಕ್ಷವು ಎನ್ಡಿಎ ಮೈತ್ರಿಕೂಟದಿಂದ ಹೊರಗುಳಿದಿದೆ. ಇದು ಬಿಜೆಪಿ ಮತ್ತು ನಿತೀಶ್ ಕುಮಾರ್ಗೆ ಹಿನ್ನಡೆಯನ್ನುಂಟುಮಾಡಿದೆ. ಇನ್ನು ತೇಜಸ್ವಿಯವರ ಆರ್ಜೆಡಿ ಮತ್ತು ಎಲ್ಲಾ ಎಡ ಪಕ್ಷಗಳೂ ಸೇರಿ ಮಹಾಘಟಬಂಂಧನ್ ರಚಿಸಿಕೊಂಡಿವೆ. ರಾಜ್ಯದಲ್ಲಿ ಇದಕ್ಕೆ ಉತ್ತಮ ಬೆಂಬಲವಿದೆ ಎನ್ನಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ