• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Crime News| ಅಪ್ರಾಪ್ತ ವಯಸ್ಸಿನ ಸ್ವಂತ ಮಗಳ ಮೇಲೆ ಅತ್ಯಾಚಾರ ಎಸಗಿದ ಮಧ್ಯಪ್ರದೇಶದ ಆರ್​ಎಸ್​ಎಸ್​ ಮುಖಂಡ ಬಂಧನ!

Crime News| ಅಪ್ರಾಪ್ತ ವಯಸ್ಸಿನ ಸ್ವಂತ ಮಗಳ ಮೇಲೆ ಅತ್ಯಾಚಾರ ಎಸಗಿದ ಮಧ್ಯಪ್ರದೇಶದ ಆರ್​ಎಸ್​ಎಸ್​ ಮುಖಂಡ ಬಂಧನ!

ಆರೋಪಿ ಆರ್‌ಎಸ್‌ಎಸ್ ಮುಖಂಡ ಸತೀಶ್ ಮಿಶ್ರಾ.

ಆರೋಪಿ ಆರ್‌ಎಸ್‌ಎಸ್ ಮುಖಂಡ ಸತೀಶ್ ಮಿಶ್ರಾ.

ಬಿಜೆಪಿ,ಆರ್‌ಎಸ್‌ಎಸ್‌ನ ಅಸಹ್ಯಕರ ಮುಖ ಇದು. ಬಿಜೆಪಿ ಮುಖಂಡ ತಮ್ಮ ಸ್ವಂತ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾರೆ. ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಕೆಟ್ಟ ರೂಪ ರಾಜ್ಯದ ಪನ್ನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

  • Share this:

    ಭೋಪಾಲ್; ಭಾರತೀಯ ಸಂಸ್ಕೃತಿ ರಕ್ಷಕರು ಎಂದು ಗುರುತಿಸಿಕೊಳ್ಳುವ ಆರ್​ಎಸ್​ಎಸ್​ ಮುಖಂಡನೊಬ್ಬ ಅಪ್ರಾಪ್ರ ವಯಸ್ಸಿನ ತನ್ನ ಸ್ವಂತ ಮಗಳ ಮೇಲೆಯೇ ನಿರಂತರವಾಗಿ ಅತ್ಯಾಚಾರ ಎಸಗುವ ಮೂಲಕ ತಂದೆ-ಮಗಳ ಸಂಬಂಧಕ್ಕೆ ಮಸಿ ಬಳಿದಿರುವುದು ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಈ ಅಸಹ್ಯದ ಕೃತ್ಯವನ್ನು ಕಾಂಗ್ರೆಸ್​ ಖಂಡಿಸಿದೆ.  ಮಧ್ಯಪ್ರದೇಶದ ಪೊವಾಯ್ ಪೊಲೀಸ್ ಠಾಣಾ ವ್ಯಾಪ್ತಿಯ ಮುದ್ವಾರಿ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಆರೋಪಿಯನ್ನು ಬಿಜೆಪಿ, ಆರ್‌ಎಸ್‌ಎಸ್ ಮುಖಂಡ ಸತೀಶ್ ಮಿಶ್ರಾ ಎಂದು ಗುರುತಿಸಲಾಗಿದೆ. ಘಟನೆ ಬಗ್ಗೆ ಮಗಳು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಆರೋಪಿ ಕೀಚಕ ತಂದೆಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.



    ಪ್ರಕರಣದ ಬಗ್ಗೆ ಟ್ವೀಟ್ ಮೂಲಕ ಅಸಹನೆಯನ್ನು ಹೊರಹಾಕಿರುವ ಮಧ್ಯಪ್ರದೇಶ ಕಾಂಗ್ರೆಸ್, "ಬಿಜೆಪಿ,ಆರ್‌ಎಸ್‌ಎಸ್‌ನ ಅಸಹ್ಯಕರ ಮುಖ ಇದು. ಬಿಜೆಪಿ ಮುಖಂಡ ತಮ್ಮ ಸ್ವಂತ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾರೆ. ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಕೆಟ್ಟ ರೂಪ ರಾಜ್ಯದ ಪನ್ನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಆರ್‌ಎಸ್‌ಎಸ್ ಕಾರ್ಯಕರ್ತ ಮತ್ತು ಬಿಜೆಪಿ ಮುಖಂಡ ಸತೀಶ್ ಮಿಶ್ರಾ ತಮ್ಮ ಸ್ವಂತ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಶಿವರಾಜ್ ಜೀ, ತನ್ನ ಸ್ವಂತ ಮಗಳ ಮೇಲೆ ಅತ್ಯಾಚಾರ ಎಸೆಗಿ, ಸಂಬಂಧಗಳಿಗೆ ಮಸಿ ಬಳಿದಿರುವ ಈತ ರಾಕ್ಷಸರಿಗಿಂತ ಕಡೆ" ಎಂದು  ಆಕ್ರೋಶ ವ್ಯಕ್ತಪಡಿಸಿದ್ದಾರೆ.


    ಇದನ್ನೂ ಓದಿ: CoronaVaccine| ಎಲ್ಲರಿಗೂ ಲಸಿಕೆ ನೀಡಲು ವರ್ಷಾಂತ್ಯದೊಳಗೆ ಬೇಕಿದೆ 216 ಕೋಟಿ ಡೊಸೇಜ್​; ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ


    ತಂದೆಯೇ ತನ್ನನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದನ್ನು ಪ್ರತಿಭಟಿಸಿದ 17 ವರ್ಷದ ಅಪ್ರಾಪ್ತ ಬಾಲಕಿ, ಕಷ್ಟಪಟ್ಟು ಪೊಲೀಸ್ ಠಾಣೆ ತಲುಪಿ ಅಲ್ಲಿ ತನ್ನ ತಂದೆಯ ದುಷ್ಕೃತ್ಯಗಳನ್ನು ವಿವರಿಸಿದ್ದಾಳೆ ಎಂದು ಹೇಳಲಾಗುತ್ತಿದೆ. ಬಾಲಕಿಯ ದೂರಿನ ಮೇರೆಗೆ ಪೊಲೀಸರು ಸಂಬಂಧಪಟ್ಟ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


    ಎಫ್‌ಐಆರ್ ದಾಖಲಾದ ಬಳಿಕ, ಆರೋಪಿಯ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿವೆ. ಬಿಜೆಪಿ ರಾಜ್ಯ ಅಧ್ಯಕ್ಷ ವಿ.ಡಿ.ಶರ್ಮಾ ಸೇರಿದಂತೆ ಇತರ ಹಿರಿಯ ಬಿಜೆಪಿ ನಾಯಕರೊಂದಿಗಿನ ಆರೋಪಿಯ ಚಿತ್ರಗಳು ವೈರಲ್ ಆಗುತ್ತಿವೆ.


    ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ ಅಂತ್ಯ; ಮೆಜೆಸ್ಟಿಕ್​ಗೆ ದೌಡಾಯಿಸುತ್ತಿವೆ ಸಾರಿಗೆ ಬಸ್​ಗಳು, ಜನರಿಲ್ಲದೆ ಬಣಗುಡುತ್ತಿದೆ ನಿಲ್ದಾಣ!


    "ಮುದ್ವಾಯಿ ಗ್ರಾಮದ 17 ವರ್ಷದ ಬಾಲಕಿಯೊಬ್ಬಳು ತನ್ನ ತಂದೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊವಾಯ್ ಠಾಣೆಗೆ ದೂರು ನೀಡಿದ್ದಾರೆ. ಪೊವಾಯ್ ಪೊಲೀಸ್ ಠಾಣೆಯಲ್ಲಿ ‌ಎಫ್‌ಐಆರ್‌ ದಾಖಲಿಸಿಕೊಂಡು, ಅಪ್ರಾಪ್ತ ಬಾಲಕಿಗೆ ಭದ್ರತೆ ಒದಗಿಸಿದ್ದಾರೆ. ಜೊತೆಗೆ, ಶೀಘ್ರವೇ ಕ್ರಮ ಕೈಗೊಂಡು, ಪನ್ನಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮರಾಜ್ ಮೀನಾ ಅವರ ನೇತೃತ್ವದಲ್ಲಿ ತಂಡವನ್ನು ರಚಿಸುವ ಮೂಲಕ, ಅಮಾನವೀಯ ಕೃತ್ಯ ಎಸಗಿ ಪರಾರಿಯಾಗಿದ್ದ ಆರೋಪಿ ಸತೀಶ್ ಮಿಶ್ರಾ ಅವರನ್ನು ಮುದ್ವಾರಿ ಬಳಿ ಬಂಧಿಸಲಾಗಿದೆ" ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

    Published by:MAshok Kumar
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು