• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • ತಮಿಳುನಾಡು ಚುನಾವಣೆಯಲ್ಲಿ ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಮುಂದುವರಿಕೆ; ನಡ್ಡಾ ಘೋಷಣೆ

ತಮಿಳುನಾಡು ಚುನಾವಣೆಯಲ್ಲಿ ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಮುಂದುವರಿಕೆ; ನಡ್ಡಾ ಘೋಷಣೆ

ಜೆಪಿ ನಡ್ಡಾ.

ಜೆಪಿ ನಡ್ಡಾ.

ಮಧುರೈನಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಈ ಕುರಿತು ಘೋಷಣೆ ಮಾಡಿದ್ದಾರೆ.

  • Share this:

    ಮಧುರೈ (ಜ. 30): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಜೊತೆಗಿನ ಮೈತ್ರಿಯನ್ನು ಮುಂದುವರೆಸುವುದಾಗಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ತಿಳಿಸಿದ್ದಾರೆ. ಚುನಾವಣೆ ಹಿನ್ನಲೆ ತಮಿಳುನಾಡಿನ ರಾಜ್ಯದ ಮೂರು ದಿನಗಳ ಪ್ರವಾಸಲ್ಲಿರುವ ಅವರು ಮಧುರೈನಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಈ ಕುರಿತು ಘೋಷಣೆ ಮಾಡಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿಯೂ ಎಐಡಿಎಂಕೆ ಜೊತೆ  ಮೈತ್ರಿ ಮೂಲಕ ಬಿಜೆಪಿ ಚುನಾವಣೆ ಎದುರಿಸಿತು. ಸಮಾವೇಶಕ್ಕೆ ಮೊದಲು ಮಧುರೈ ಮೀನಾಕ್ಷಿ ದೇವಾಸ್ಥಾನಕ್ಕೆ ಅವರು ಭೇಟಿ ನೀಡಿ ಆಶೀರ್ವಾದ ಪಡೆದರು. ಬಳಿಕ ನಡ್ಡಾ ನೇತೃತ್ವದಲ್ಲಿ ಬಿಜೆಪಿ ಕೋರ್​ ಸಮಿತಿ ಸಭೆ ನಡೆಸಲಾಯಿತು. ಈ ವೇಳೆ ಚುನಾವಣೆ ರೂಪು ರೇಷ ಕುರಿತು ಚರ್ಚೆ ನಡೆಸಲಾಯಿತು.


    ತಮಿಳುನಾಡು ಚುನಾವಣೆ ಹಿನ್ನಲೆ ಜನವರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ನೀಡಿರುವ ಎರಡನೇ ಭೇಟಿ ಇದಾಗಿದೆ. ಸಂಕ್ರಾಂತಿ ಸಂದರ್ಭದಲ್ಲಿ ನಮ್ಮ ನಗರ ಪೊಂಗಲ್​ ಕಾರ್ಯಕ್ರಮದಲ್ಲಿ ಭಾಗಿಯಾಗಲಿ ಅವರು ತಮಿಳುನಾಡಿಗೆ ಆಗಮಿಸಿದ್ದರು.



    ಎಐಎಡಿಎಂಕೆ ನಾಯಕರಾಗಿರುವ ಮುಖ್ಯಮಂತ್ರಿ ಪಳನಿಸ್ವಾಮಿ ಮತ್ತು ಪನ್ನೀರ್​ ಸೆಲ್ವಂ ಕೂಡ ಈ ಹಿಂದೆ ಬಿಜೆಪಿ ಜೊತೆಗಿನ ಮೈತ್ರಿ ಮುಂದುವರೆಸುವ ಸುಳಿವು ನೀಡಿದ್ದರು. ಇನ್ನು ಆಡಳಿತಾರೂಢ ಎಐಎಡಿಎಂಕೆ ಪಳನಿಸ್ವಾಮಿಯನ್ನು ಈ ಬಾರಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದೆ.


    ನವೆಂಬರ್​ನಲ್ಲಿ ಚೆನ್ನೈಗೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್​​ ಶಾ ಕೂಡ ವಿಧಾನಸಭಾ ಚುನಾವಣೆಯಲ್ಲಿ ಈ ಮೈತ್ರಿ ಮುಂದುವರೆಸುವ ಕುರಿತು ಘೋಸಿಸಿದ್ದರು.

    Published by:Seema R
    First published: