• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Budget Session 2021: ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ; ರಾಷ್ಟ್ರಪತಿ ಭಾಷಣ ಬಹಿಷ್ಕಾರಕ್ಕೆ ವಿಪಕ್ಷಗಳು ನಿರ್ಧಾರ

Budget Session 2021: ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ; ರಾಷ್ಟ್ರಪತಿ ಭಾಷಣ ಬಹಿಷ್ಕಾರಕ್ಕೆ ವಿಪಕ್ಷಗಳು ನಿರ್ಧಾರ

ರಾಷ್ಟ್ರಪತಿ ರಾಮನಾಥ ಕೋವಿಂದ್

ರಾಷ್ಟ್ರಪತಿ ರಾಮನಾಥ ಕೋವಿಂದ್

Union Budget 2021: ಇಂದಿನಿಂದ ಫೆ. 15ರವರೆಗೆ ಮೊದಲ ಹಂತದ ಸಂಸತ್ ಬಜೆಟ್ ಅಧಿವೇಶನ ನಡೆಯಲಿದೆ. ಬಜೆಟ್ ಅಧಿವೇಶನದ ಮೊದಲ ದಿನವಾದ ಇಂದು ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ. ಆದರೆ, 16 ವಿರೋಧ ಪಕ್ಷಗಳು ರಾಷ್ಟ್ರಪತಿ ಭಾಷಣವನ್ನು ಬಹಿಷ್ಕರಿಸಲಿವೆ.

ಮುಂದೆ ಓದಿ ...
  • Share this:

ನವದೆಹಲಿ (ಜ. 29): ಇಂದಿನಿಂದ ಸಂಸತ್​ನ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬಜೆಟ್ ಅಧಿವೇಶನದ ಮೊದಲ ದಿನವಾದ ಇಂದು ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ. ಆದರೆ, ಕಾಂಗ್ರೆಸ್​, ಎನ್​ಸಿಪಿ, ಆಮ್​ ಆದ್ಮಿ ಪಕ್ಷ ಸೇರಿದಂತೆ 16 ವಿರೋಧ ಪಕ್ಷಗಳು ರಾಷ್ಟ್ರಪತಿ ಭಾಷಣವನ್ನು ಬಹಿಷ್ಕರಿಸಲಿವೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ವಿಪಕ್ಷಗಳು ರಾಷ್ಟ್ರಪತಿಗಳ ಭಾಷಣವನ್ನು ಬಹಿಷ್ಕರಿಸಲು ನಿರ್ಧರಿಸಿವೆ. ಇಂದಿನಿಂದ ಫೆ. 15ರವರೆಗೆ ಮೊದಲ ಹಂತದ ಸಂಸತ್ ಬಜೆಟ್ ಅಧಿವೇಶನ ನಡೆಯಲಿದೆ. ಮಾ. 8 ರಿಂದ ಏ. 8ರವರೆಗೆ ಎರಡನೇ ಹಂತದ ಅಧಿವೇಶನ ನಡೆಯಲಿದೆ. ಫೆಬ್ರವರಿ 1ಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ.


ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಂಸದರು RT-PCR ಟೆಸ್ಟ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಕೊರೋನಾ ಕಾರಣಕ್ಕೆ ನಿಯಮಾವಳಿಗಳಲ್ಲಿ ಬದಲಾವಣೆ ಮಾಡಲಾಗಿದ್ದು, ಶಿಫ್ಟ್​ನಲ್ಲಿ ಅಧಿವೇಶನ ನಡೆಸಲು ನಿರ್ಧಾರ ಮಾಡಲಾಗಿದೆ. ಇಂದು ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ರಾಜ್ಯಸಭೆ ಕಲಾಪ ನಡೆಯಲಿದ್ದು, ಸಂಜೆ 4ರಿಂದ ರಾತ್ರಿ 9 ಗಂಟೆವರೆಗೆ ಲೋಕಸಭೆ ಕಲಾಪ ನಡೆಯಲಿದೆ. ಮಧ್ಯೆ 2 ಗಂಟೆಗಳ ಬಿಡುವಿನಲ್ಲಿ ಕಟ್ಟಡಕ್ಕೆ ಸ್ಯಾನಿಟೈಸ್ ಮಾಡಲಾಗುವುದು.



ಕಲಾಪದಲ್ಲಿ ಶೂನ್ಯ ವೇಳೆ ಮತ್ತು ಪ್ರಶ್ನೋತ್ತರಕ್ಕೆ ಅವಕಾಶ ನೀಡಲಾಗಿದೆ. ಇಂದಿನಿಂದ ಫೆ. 15ರವರೆಗೆ ಮೊದಲ ಹಂತದ ಸಂಸತ್ ಬಜೆಟ್ ಅಧಿವೇಶನ ನಡೆಯಲಿದೆ. ಮಾ. 8 ರಿಂದ ಏ. 8ರವರೆಗೆ ಎರಡನೇ ಹಂತದ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಫೆಬ್ರವರಿ 1ಕ್ಕೆ ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಕೊರೋನಾ-ಲಾಕ್​ಡೌನ್ ನಂತರದ ಮೊದಲ ಬಜೆಟ್ ಇದಾಗಿದೆ. ಅಧಿವೇಶನದಲ್ಲಿ ಕೊರೊನಾ, ಆರ್ಥಿಕ ಹಿನ್ನಡೆ, ಗಡಿ ಸಮಸ್ಯೆ, ಜಿಡಿಪಿ ಕುಸಿತ, ಪೆಟ್ರೋಲ್ - ಡೀಸೆಲ್ ಬೆಲೆ ಏರಿಕೆ ಬಗ್ಗೆ ಸಂಸತ್​ನಲ್ಲಿ ಚರ್ಚೆ ನಡೆಯಲಿದೆ. ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ವಿರೋಧ ಪಕ್ಷಗಳು ಒತ್ತಾಯಿಸುವ ಸಾಧ್ಯತೆಯಿದೆ.


ಇದನ್ನೂ ಓದಿ: Union Budget 2021: ಜನವರಿ 29 ರಿಂದ ಸಂಸತ್ ಅಧಿವೇಶನ : ಫೆಬ್ರವರಿ 1ಕ್ಕೆ ಬಜೆಟ್ ಮಂಡನೆ


ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಮೂರು ಕೃಷಿ ಕಾಯ್ದೆಯ ವಿರುದ್ಧ ಬಹುತೇಕ ಎಲ್ಲಾ ವಿರೋಧ ಪಕ್ಷಗಳು ಆರಂಭದಿಂದಲೂ ಅಸಮಾಧಾನ ವ್ಯಕ್ತಪಡಿಸುತ್ತಲೇ ಇದ್ದವು. ಆದರೆ, ಕೊರೋನಾ ಲಾಕ್​ಡೌನ್ ಸಂದರ್ಭವನ್ನು ಬಳಸಿಕೊಂಡಿದ್ದ ಕೇಂದ್ರ ಬಿಜೆಪಿ ಸರ್ಕಾರ ಲಾಕ್​ಡೌನ್ ಸಂದರ್ಭದಲ್ಲಿ ಕೃಷಿ ಕಾಯ್ದೆಗಳ ಬಗ್ಗೆ ಸಂಸತ್​ನಲ್ಲಿ ಚರ್ಚೆ ನಡೆಸದೆ ಸುಗ್ರೀವಾಜ್ಞೆ ಮೂಲಕ ಈ ವಿವಾದಾತ್ಮಕ ಕಾಯ್ದೆಯನ್ನು ಜಾರಿಗೆ ತಂದಿತ್ತು. ಹೀಗಾಗಿ, ಆ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಸಂಸತ್​ನಲ್ಲಿ ವಿಪಕ್ಷಗಳು ಒತ್ತಾಯಿಸುವ ಸಾಧ್ಯತೆಯಿದೆ.


ಗಣರಾಜ್ಯೋತ್ಸವ ದಿನ ದೆಹಲಿಯಲ್ಲಿ ರೈತರು ನಡೆಸಿದ ಟ್ರ್ಯಾಕ್ಟರ್ ರ್ಯಾಲಿ ಸಂದರ್ಭದಲ್ಲಿ ನಡೆದ ಹಿಂಸಾಚಾರದಲ್ಲಿ ಬಿಜೆಪಿ ಸರ್ಕಾರದ ಪಾತ್ರದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು ಎಂದೂ ಈ ಪಕ್ಷಗಳು ಒತ್ತಾಯಿಸಿವೆ. ವಿವಾದಾತ್ಮಕವಾದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿವೆ. ಹೀಗಾಗಿ, ಇಂದಿನಿಂದ ಆರಂಭವಾಗಲಿರುವ ಸಂಸತ್ ಅಧಿವೇಶನಕ್ಕೆ ಆರಂಭದಲ್ಲೇ ವಿಪಕ್ಷಗಳಿಂದ ಅಡ್ಡಿಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.

First published: