• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Farmers Protest: 'ಸೇತುವೆಗಳನ್ನು ಕಟ್ಟಿ ಗೋಡೆಗಳನ್ನಲ್ಲ'; ರೈತ ಹೋರಾಟವನ್ನು ಹಣಿಯುತ್ತಿರುವ ಕೇಂದ್ರಕ್ಕೆ ರಾಹುಲ್ ಕಿವಿಮಾತು

Farmers Protest: 'ಸೇತುವೆಗಳನ್ನು ಕಟ್ಟಿ ಗೋಡೆಗಳನ್ನಲ್ಲ'; ರೈತ ಹೋರಾಟವನ್ನು ಹಣಿಯುತ್ತಿರುವ ಕೇಂದ್ರಕ್ಕೆ ರಾಹುಲ್ ಕಿವಿಮಾತು

ರಾಹುಲ್ ಗಾಂಧಿ.

ರಾಹುಲ್ ಗಾಂಧಿ.

ದೆಹಲಿಯ ಗಡಿಗಳಲ್ಲಿ ರೈತರು ಪ್ರತಿಭಟಿಸುತ್ತಿರುವ ಸ್ಥಳಗಳ ಸುತ್ತ ಮತ್ತು ಹತ್ತಿರದ ರಸ್ತೆಗಳಲ್ಲಿ ಬ್ಯಾರಿಕೇಡ್, ಕಾಂಕ್ರಿಟ್ ಗೋಡೆ ಮತ್ತು ಕಬ್ಬಿಣ ತಂತಿ-ಕಬ್ಬಿಣ ಮುಳ್ಳುಗಳನ್ನು ಅಳವಡಿಸಿರುವ ಸರ್ಕಾರದ ಕ್ರಮವನ್ನು ರಾಹುಲ್ ಗಾಂಧಿ ವ್ಯಂಗ್ಯದ ಮೂಲಕ ಟೀಕೆ ಮಾಡಿದ್ದು ಕೇವಲ ನಾಲ್ಕು ಪದಗಳ ಟ್ವೀಟ್ ಮಾಡಿದ್ದಾರೆ.

ಮುಂದೆ ಓದಿ ...
  • Share this:

ನವ ದೆಹಲಿ (ಫೆಬ್ರವರಿ 02); ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಯ ವಿರುದ್ಧ ದೇಶದ ರೈತರ ಕಳೆದ ಎರಡು ತಿಂಗಳಿನಿಂದ ಸತತ ಹೋರಾಟ ನಡೆಸುತ್ತಿದ್ದಾರೆ. ಇನ್ನೂ ಪಂಜಾಬ್ ಮತ್ತು ಹರಿಯಾಣ ರೈತರು ದೆಹಲಿಯ ಹೊರವಲಯದಲ್ಲಿರುವ ಸಿಂಘು ಗಡಿಯಲ್ಲಿ ಹೋರಾಟ ನಿರತರಾಗಿದ್ದಾರೆ. ಜನವರಿ 26 ರಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ರ‍್ಯಾಲಿ ನಡೆಸುವ ಮೂಲಕ ಶಕ್ತಿ ಪ್ರದರ್ಶ ಮಾಡಿದ್ದ ರೈತರು ಜನವರಿ.30 ರಂದು ಉಪವಾಸ ಸತ್ಯಾಗ್ರಹವನ್ನು ಆಚರಿಸಿದ್ದರು. ಇದಲ್ಲದೆ ಗಣರಾಜ್ಯೋತ್ಸವದ ಗಲಭೆ ಬೆನ್ನಿಗೆ ಪಂಜಾಬ್, ಹರಿಯಾಣ ಮತ್ತು ಉತ್ತರಪ್ರದೇಶದಿಂದ ದೆಹಲಿಗೆ ಆಗಮಿಸುತ್ತಿರುವ ರೈತರ ಸಂಖ್ಯೆ ದಿನಿದಿಂದ ದಿನಕ್ಕೆ ಅಧಿಕವಾಗುತ್ತಲೇ ಇದೆ. ಹೀಗಾಗಿ ಹೆಚ್ಚಿನ ರೈತರು ಪ್ರತಿಭಟನೆಗೆ ಬಂದು ಸೇರದಂತೆ ತಡೆಯಲು ಕೇಂದ್ರ ಸರ್ಕಾರ ರಸ್ತೆಗಳನ್ನು ಅಗೆದು, ಚೂಪಾದ ಮೊಳೆಗಳನ್ನು ನೆಟ್ಟಿ, ದೊಡ್ಡ ದೊಡ್ಡ ಗೋಡೆಗಳು, ಮುಳ್ಳುತಂತಿಗಳು, ಬ್ಯಾರಿಕೇಡ್‌ಗಳನ್ನು ಹಾಕುವ ಕೆಲಸಕ್ಕೆ ಮುಂದಾಗಿದೆ. ಆದರೆ, ಕೇಂದ್ರದ ಈ ನಡೆಯನ್ನು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ವಿರೋಧಿಸಿದ್ದಾರೆ.



ರೈತ ಹೋರಾಟವನ್ನು ದಮನಿಸುವ ಸಲುವಾಗಿ ಸರ್ಕಾರ ಮುಂದೆ ನಿಂತು ರಸ್ತೆಗಳನ್ನು ಅಗೆದು, ಚೂಪಾದ ಮೊಳೆಗಳನ್ನು ನೆಟ್ಟಿ, ದೊಡ್ಡ ದೊಡ್ಡ ಗೋಡೆಗಳು, ಮುಳ್ಳುತಂತಿಗಳು, ಬ್ಯಾರಿಕೇಡ್‌ಗಳನ್ನು ಹಾಕಿಸುತ್ತಿರುವ ಪೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ಕುರಿತು ಇಂದು ಟ್ವೀಟ್​ ಮಾಡುವ ಮೂಲಕ ಕೇಂದ್ರಕ್ಕೆ ಕಿವಿಮಾತು ಹೇಳಿರುವ ರಾಹುಲ್ ಗಾಂಧಿ, "ಭಾರತ ಸರ್ಕಾರ ಸೇತುವೆಗಳನ್ನು ಕಟ್ಟಿ, ಗೋಡೆಗಳನ್ನಲ್ಲ" ಎಂದು ಮಾರ್ಮಿಕವಾಗಿ ಅಸಮಾಧಾನ ಹೊರಹಾಕಿದ್ದಾರೆ.


ದೆಹಲಿಯ ಗಡಿಗಳಲ್ಲಿ ರೈತರು ಪ್ರತಿಭಟಿಸುತ್ತಿರುವ ಸ್ಥಳಗಳ ಸುತ್ತ ಮತ್ತು ಹತ್ತಿರದ ರಸ್ತೆಗಳಲ್ಲಿ ಬ್ಯಾರಿಕೇಡ್, ಕಾಂಕ್ರಿಟ್ ಗೋಡೆ ಮತ್ತು ಕಬ್ಬಿಣ ತಂತಿ-ಕಬ್ಬಿಣ ಮುಳ್ಳುಗಳನ್ನು ಅಳವಡಿಸಿರುವ ಸರ್ಕಾರದ ಕ್ರಮವನ್ನು ರಾಹುಲ್ ಗಾಂಧಿ ವ್ಯಂಗ್ಯದ ಮೂಲಕ ಟೀಕೆ ಮಾಡಿದ್ದು ಕೇವಲ ನಾಲ್ಕು ಪದಗಳ ಟ್ವೀಟ್ ಮಾಡಿದ್ದಾರೆ.



ಶಾಂತಿಯುತ ಪ್ರತಿಭಟನೆಯೋ ಅಥವಾ ಯುದ್ಧವೋ ? ರೈತರ ಧ್ವನಿಯನ್ನು ತಡೆಗಟ್ಟಲು ಈ ರೀತಿ ಮಾಡುವುದಕ್ಕೆ ಯಾವುದೇ ಸಮರ್ಥನೆಯಿಲ್ಲ. ನಿಮ್ಮ ಬ್ಯಾರಿಕೇಡ್‌ಗಳು, ಮುಳ್ಳುತಂತಿಗಳಿಂದ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ನಾವು ಶಾಂತಿಯುತವಾಗಿದ್ದೆವು, ಶಾಂತಿಯುವಾಗಿದ್ದೇವೆ ಮತ್ತು ಶಾಂತಿಯುತವಾಗಿರುತ್ತೇವೆ. ನಿಮ್ಮ ಗೂಂಡಾಗಳಿಂದ ನಮ್ಮನ್ನು ಪ್ರಚೋದಿಸಬೇಡಿ ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.


ಇದನ್ನೂ ಓದಿ: FDA Exam: ಎಫ್​ಡಿಎ ಪರೀಕ್ಷೆ ದಿನಾಂಕ ಘೋಷಿಸಿದ ಲೋಕ ಸೇವಾ ಆಯೋಗ; ಫೆಬ್ರವರಿ.28ಕ್ಕೆ ನಡೆಯಲಿದೆ ಪರೀಕ್ಷೆ!


ಈ ಕುರಿತು ಪ್ರಿಯಾಂಕಾ ಗಾಂಧಿ ಕೂಡ ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ‘ಪ್ರಧಾನ್‌ಮಂತ್ರಿ ಜಿ, ಅಪನೆ ಕಿಸಾನೊ ಸೆ ಹಿಂ ಯುದ್ಧ್?’ (ಪ್ರಧಾನಮಂತ್ರಿಯವರೇ, ನಮ್ಮ ರೈತರೊಂದಿಗೇ ಯುದ್ಧವಾ?) ಎಂದು ಕುಟುಕಿದ್ದಾರೆ. ಅವರು ಗೋಡೆ, ಕಬ್ಬಿಣ ತಂತಿ ಅಳವಡಿಸುವ ವಿಡಿಯೋ ಶೇರ್ ಮಾಡಿದ್ದಾರೆ.


ದೆಹಲಿಯ ಸಿಂಘು, ಟಿಕ್ರಿ ಹಾಗೂ ಗಾಜಿಪುರ್‌ ಗಡಿಗಳಲ್ಲಿ ರೈತರ ಪ್ರತಿಭಟೆನೆಗಳು ತೀವ್ರವಾಗಿ ಹೆಚ್ಚುತ್ತಿದೆ. ರೈತರು ಅಲ್ಲಿಗೆ ಭಾರಿ ಸಂಖ್ಯೆಯಲ್ಲಿ ಹರಿದು ಬರುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಅಲ್ಲಿ ಭದ್ರತಾ ಸಿಬ್ಬಂದಿಯನ್ನು ಹೆಚ್ಚಿಸುವುದು ಸೇರಿದಂತೆ, ಹಲವು ಹಂತಗಳ ಬ್ಯಾರಿಕೇಡ್ ಹಾಕಲು ಮುಂದಾಗಿದೆ. ಜೊತೆಗೆ ರಸ್ತೆಗಳಲ್ಲಿ ತಡರಾತ್ರಿ ಕಂದಕಗಳನ್ನು ಅಗೆಯಲಾಗಿದೆ. ರಸ್ತೆಯಲ್ಲಿ ಮುಳ್ಳು ಕಂಬಿಗಳನ್ನು ನೆಡುವ ಮೂಲಕ ರೈತರ ವಾಹನಗಳ ಟೈಯರ್ ಪಂಚರ್ ಮಾಡಲು ಯತ್ನಿಸುತ್ತಿದೆ.

First published: