• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • ಮುಖ್ಯ ಸಲಹೆಗಾರನ ಹುದ್ದೆಗೆ ಪ್ರಶಾಂತ್​ ಕಿಶೋರ್​ ರಾಜಿನಾಮೆ; ಏಕಾಂಗಿಯಾದರೇ ಪಂಜಾಬಿನ ಕ್ಯಾಪ್ಟನ್​ ಸಿಂಗ್​

ಮುಖ್ಯ ಸಲಹೆಗಾರನ ಹುದ್ದೆಗೆ ಪ್ರಶಾಂತ್​ ಕಿಶೋರ್​ ರಾಜಿನಾಮೆ; ಏಕಾಂಗಿಯಾದರೇ ಪಂಜಾಬಿನ ಕ್ಯಾಪ್ಟನ್​ ಸಿಂಗ್​

ಕ್ಯಾಪ್ಟನ್​ - ಸಿಧು

ಕ್ಯಾಪ್ಟನ್​ - ಸಿಧು

"ಸಿಧು ನೇಮಕಾತಿಯ ವಿಷಯದಲ್ಲೇ ಕ್ಯಾಪ್ಟನ್​ ತಗಾದೆ ತೆಗೆದಿದ್ದರು, ಈಗ ಕಿಶೋರ್​ ರಾಜಿನಾಮೆಯಿಂದ ರಾಜ್ಯ ರಾಜಕಾರಣದಲ್ಲಿ ಕ್ಯಾಪ್ಟನ್ ಸಂಪೂರ್ಣವಾಗಿ ಏಕಾಂಗಿಯಾಗಬಹುದು ಎಂದು ಸೂಚಿಸುತ್ತದೆ "ಎಂದು ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

  • Share this:

    ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕ್ರಮೇಣ ಕಾಂಗ್ರೆಸ್ ಹೈಕಮಾಂಡ್ ಜೊತೆಗಿನ ಸಂಬಂಧ, ವಿಷಯಗಳಿಂದ ಪ್ರತ್ಯೇಕವಾಗಿರುವುದನ್ನು ಕಂಡುಕೊಂಡಿದ್ದಾರೆಯೇ? ಏಕೆಂದರೆ ಇತ್ತೀಚಿನ ಬೆಳವಣಿಗೆಯಲ್ಲಿ ಸದಾ ಹಿನ್ನಡೆಯನ್ನೇ ಅನುಭವಿಸುತ್ತಿರುವ ಕ್ಯಾಪ್ಟನ್​ ಮಂಕಾಗಿದ್ದಾರೆಯೇ?  ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಪ್ರಶಾಂತ್ ಕಿಶೋರ್ ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರರಾಗಿ ರಾಜೀನಾಮೆ ನೀಡಿರುವುದು ಸಹ ಸಿಂಗ್​ ಅವರಿಗೆ ಉಂಟಾಗಿರುವ ಹಿನ್ನಡೆ ಎಂದೇ ಹೇಳಲಾಗುತ್ತಿದೆ.

    ಕಿಶೋರ್ ಅವರು ಅಮರೀಂದರ್ ಅವರಿಗೆ ಗುರುವಾರ ಪತ್ರವೊಂದನ್ನು ಬರೆದಿದ್ದು, ಅದರಲ್ಲಿ ಅವರು "ಸಕ್ರಿಯ ರಾಜಕೀಯದಿಂದ ತಾತ್ಕಾಲಿಕ ವಿರಾಮ ತೆಗೆದುಕೊಳ್ಳುತ್ತಿರುವ ಕಾರಣ" ಸಲಹೆಗಾರನ ಸ್ಥಾನದಿಂದ ಕೆಳಗಿಳಿಯುವುದಾಗಿ ಹೇಳಿದ್ದಾರೆ.


    2017 ರ ವಿಧಾನಸಭಾ ಚುನಾವಣೆಯಲ್ಲಿ ಅಮರೀಂದರ್ ಗೆಲುವಿನ ಹಿಂದೆ ಇದ್ದಿದ್ದು ಇದೇ ಕಿಶೋರ್ ಅವರ ಯಶಸ್ವಿ ಮಾರ್ಗದರ್ಶನ, ಏಕೆಂದರೆ ಆಮ್ ಆದ್ಮಿ ಪಕ್ಷದ (ಎಎಪಿ) ಉದಯದೊಂದಿಗೆ ಕಠಿಣ ರಾಜಕೀಯ ಕದನ ಪಂಜಾಬ್​ನಲ್ಲಿ ಉಂಟಾಗಿತ್ತು, ಈ ವೇಳೆ ಕ್ಯಾಪ್ಟನ್​ ಕೈ ಹಿಡಿದ ಕಿಶೋರ್​ಅವರನ್ನು "ಪಂಜಾಬಿನ ಕ್ಯಾಪ್ಟನ್" ಎಂದು ಕರೆದರು. ಇದೇ ಅವರ ಗೆಲುವಿಗೆ ಕಾರಣವಾಯಿತು ಎಂದು ಹೇಳಲಾಗಿದೆ. ಕೆಲವು ತಿಂಗಳ ಹಿಂದೆ, ಕಿಶೋರ್ ಅವರು 2022 ರಾಜ್ಯ ಚುನಾವಣೆ ಹತ್ತಿರವಿರುವ ಕಾರಣ ಮತ್ತೊಮ್ಮೆ ಸಲಹೆಗಾರನ ಪಾತ್ರವನ್ನು ವಹಿಸಿಕೊಳ್ಳುವಂತೆ ಕೇಳಲಾಗಿತ್ತು.

    ಆದರೆ ಕಿಶೋರ್ ರಾಜೀನಾಮೆ ಕೊಟ್ಟ ಕಅರಣದಿಂದ ಪಂಜಾಬ್ ಕಾಂಗ್ರೆಸ್‌ನಲ್ಲಿ ಸಿಎಂ ಈಗ ಹೆಚ್ಚು ಏಕಾಂಗಿಯಾಗುತ್ತಿದ್ದಾರೆ ಎಂಬ ಊಹಾಪೋಹಕ್ಕೆ ಕಾರಣವಾಗಿದೆ. ಪಂಜಾಬ್ ಕಾಂಗ್ರೆಸ್ ನ ಅಧ್ಯಕ್ಷಗಿರಿಯನ್ನು ನವಜೋತ್ ಸಿಂಗ್ ಸಿಧುಗೆ ವಹಿಸಿದ ಕೆಲ ದಿನಗಳ ನಂತರ ಕಿಶೋರ್ ರಾಜೀನಾಮೆ ನೀಡಿದ್ದಾರೆ. ಸಿಧು ಅವರ ಔಪಚಾರಿಕ ನೇಮಕಾತಿಗೆ ಮುಂಚೆಯೇ, ಕಿಶೋರ್ ಸಿಧು ಜೊತೆ ನೇರ ಸಂಪರ್ಕದಲ್ಲಿದ್ದರು ಎಂದು ಉನ್ನತ ಮೂಲಗಳು ಬಹಿರಂಗಪಡಿಸಿವೆ.


    "ಸಿಧು ನೇಮಕಾತಿಯ ವಿಷಯದಲ್ಲೇ ಕ್ಯಾಪ್ಟನ್​ ತಗಾದೆ ತೆಗೆದಿದ್ದರು, ಈಗ ಕಿಶೋರ್​ ರಾಜಿನಾಮೆಯಿಂದ ರಾಜ್ಯ ರಾಜಕಾರಣದಲ್ಲಿ ಕ್ಯಾಪ್ಟನ್ ಸಂಪೂರ್ಣವಾಗಿ ಏಕಾಂಗಿಯಾಗಬಹುದು ಎಂದು ಸೂಚಿಸುತ್ತದೆ "ಎಂದು ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

    ಇದು ಪಕ್ಷದ ವ್ಯವಹಾರಗಳಲ್ಲಿ ಅಮರೀಂದರ್ ಅವರ ಪ್ರಭಾವ ಈ ಘಟನೆಗಳಿಂದ ಕಡಿಮೆಯಾಗುತ್ತಿದೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯ ಟಿಕೆಟ್ ವಿತರಣೆಯಲ್ಲಿ ಇವರ ಕೈಚಳಕ ನಡೆಯದೇ ಇರಬಹುದು ಎಂದು ಹೇಳಬಹುದು. "ಮೇಲ್ನೋಟಕ್ಕೆ, ಪಕ್ಷದ ಹೈಕಮಾಂಡ್ ಮೇಲೆ ಸಿಧು ಹೆಚ್ಚು ಹಿಡಿತ ಹೊಂದಿದ್ದಾರೆ ಮತ್ತು ಕಿಶೋರ್ ನಂತಹ ಹಳೆಯ ಸಹವರ್ತಿಗಳು ಕ್ಯಾಪ್ಟನ್​ ಅವರನ್ನು ದೂರವಿಡುತ್ತಿದ್ದಾರೆ ಎಂದು ತೋರುತ್ತದೆ. ಅಂತಿಮವಾಗಿ, ಇದು ಟಿಕೆಟ್ ವಿತರಣೆಯಲ್ಲಿ ಪ್ರತಿಫಲಿಸುತ್ತದೆ, ”ಎಂದು ಮಾಲ್ವಾದ ನಾಯಕ ಹೇಳಿದರು.


    ಇದನ್ನೂ ಓದಿ: Uttar Pradesh: ಆದಿತ್ಯನಾಥ್​ ಸರ್ಕಾರ ಕಳಪೆ ಸರ್ಕಾರ; ಎಸ್​ಪಿ 400 ಸೀಟು ಗೆಲ್ಲಲಿದೆ ಎಂದ ಅಖಿಲೇಶ್​

    ಅಮರೀಂದರ್ ಅವರನ್ನು ಮೂಲೆಗೆ ತಳ್ಳಿದ ನಂತರ ಅವರ ಮುಂದಿನ ನಡೆ ಹಾಗೂ ಬೆಳವಣಿಗೆಗಳ ಬಗ್ಗೆ ರಾಜಕೀಯ ವೀಕ್ಷಕರು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ. "ಅವರು ಮತ್ತೆ ಹೋರಾಡುತ್ತಾರೆಯೇ ಮತ್ತು ಪಕ್ಷ ರಾಜಕೀಯದಲ್ಲಿ ತಮ್ಮ ಪ್ರಭಾವವನ್ನು ಮತ್ತೆ ಸ್ಥಾಪಿಸುತ್ತಾರೆಯೇ ಅಥವಾ ರಾಜ್ಯ ಘಟಕದಲ್ಲಿ ಹೊರಹೊಮ್ಮಿರುವ ಹೊಸ ಶಕ್ತಿ ಕೇಂದ್ರಕ್ಕೆ ಶರಣಾಗುತ್ತಾರೆಯೇ, ಮುಂದಿನ ಎಲ್ಲಾ ಬೆಳವಣಿಗೆಗಳನ್ನು ನೋಡಲು ಆಸಕ್ತಿದಾಯಕವಾಗಿದೆ. ಅವರು ಯಾವ ಮಾರ್ಗವನ್ನು ಆರಿಸಿಕೊಂಡರೂ ಅದು ಪಂಜಾಬ್ ರಾಜಕೀಯದ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ, ’’ ಎಂದು ಹಿರಿಯ ನಾಯಕರೊಬ್ಬರು ಟೀಕಿಸಿದ್ದಾರೆ.




    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.

    Published by:HR Ramesh
    First published: