• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Mamata Banerjee| ಟ್ವಿಟರ್​ ನಿಯಂತ್ರಣಕ್ಕೆ ಮುಂದಾದ ಕೇಂದ್ರ ಸರ್ಕಾರದ ನಡೆ; ಪ್ರಧಾನಿ ಮೋದಿ ವಿರುದ್ಧ ಮಮತಾ ಟೀಕಾಸ್ರ್ತ

Mamata Banerjee| ಟ್ವಿಟರ್​ ನಿಯಂತ್ರಣಕ್ಕೆ ಮುಂದಾದ ಕೇಂದ್ರ ಸರ್ಕಾರದ ನಡೆ; ಪ್ರಧಾನಿ ಮೋದಿ ವಿರುದ್ಧ ಮಮತಾ ಟೀಕಾಸ್ರ್ತ

ಮಮತಾ ಬ್ಯಾನರ್ಜಿ.

ಮಮತಾ ಬ್ಯಾನರ್ಜಿ.

ಒಕ್ಕೂಟ ಸರ್ಕಾರಕ್ಕೆ ಟ್ವಿಟರ್‌ ಅನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ, ಆದ್ದರಿಂದ ಅದನ್ನು ಧ್ವಂಸ ಮಾಡಲು ಪ್ರಯತ್ನಿಸುತ್ತಿದೆ. ಇದನ್ನು ನಾನು ಖಂಡಿಸುತ್ತೇನೆ. ಒಕ್ಕೂಟಕ್ಕೆ ನಿರ್ವಹಿಸಲು ಸಾಧ್ಯವಾಗದ ಎಲ್ಲರೊಂದಿಗೆ ಹಾಗೆ ಮಾಡಲು ಪ್ರಯತ್ನಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.

ಮುಂದೆ ಓದಿ ...
  • Share this:

    ಕೋಲ್ಕತ್ತಾ (ಜೂನ್ 17); ಟ್ವಿಟರ್​ ವಿರುದ್ಧ ಭಾರತದಲ್ಲಿ ಕೇಂದ್ರ ಸರ್ಕಾರ ನಿರಂತರವಾಗಿ ದಾಳಿ ನಡೆಸುತ್ತಲೇ ಇದೆ. ಸಾಮಾಜಿಕ ಜಾಲತಾಣಗಳಿಗೆ ಸಂಬಂಧಿಸಿದಂತೆ ಕಳೆದ ತಂಗಳು ಹೊಸ ಐಟಿ ನೀತಿಯೊಂದನ್ನು ಜಾರಿಗೆ ತರುವ ಮೂಲಕ ಟ್ವಿಟರ್​ ನಿಯಂತ್ರಣಕ್ಕೆ ಮುಂದಾಗಿದ್ದ ಕೇಂದ್ರ ಸರ್ಕಾರ, ಉತ್ತರಪ್ರದೇಶದಲ್ಲಿ ಮುಸ್ಲೀಂ ವೃದ್ಧನ ಮೇಲಿನ ಹಲ್ಲೆಗೆ ಸಂಬಂಧಿಸಿದ ಪ್ರಕರಣದಲ್ಲಿ ಟ್ವಿಟರ್​ ವಿರುದ್ಧವೇ ಕೇಸ್​ ದಾಖಲಿಸಿತ್ತು. ಈ ಸಂಬಂಧ ಇಂದು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, "ಒಕ್ಕೂಟ ಸರ್ಕಾರವು ಟ್ವಿಟರ್‌‌ ಮೇಲೆ ಪ್ರಭಾವ ಬೀರಲು ವಿಫಲವಾಗಿದೆ ಆದ್ದರಿಂದ ಇದೀಗ ಅವನ್ನು ಧ್ವಂಸ ಮಾಡಲು ಪ್ರಯತ್ನಿಸುತ್ತಿದೆ" ಎಂದು ಆರೋಪಿಸಿದ್ದಾರೆ.


    "ಸುದ್ದಿಗಾರೊಂದಿಗೆ ಮಾತನಾಡಿ ಅವರು, “ಒಕ್ಕೂಟ ಸರ್ಕಾರಕ್ಕೆ ಟ್ವಿಟರ್‌ ಅನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ, ಆದ್ದರಿಂದ ಅದನ್ನು ಧ್ವಂಸ ಮಾಡಲು ಪ್ರಯತ್ನಿಸುತ್ತಿದೆ. ಇದನ್ನು ನಾನು ಖಂಡಿಸುತ್ತೇನೆ. ಒಕ್ಕೂಟಕ್ಕೆ ನಿರ್ವಹಿಸಲು ಸಾಧ್ಯವಾಗದ ಎಲ್ಲರೊಂದಿಗೆ ಹಾಗೆ ಮಾಡಲು ಪ್ರಯತ್ನಿಸುತ್ತಿದೆ. ಅವರಿಗೆ ನನ್ನನ್ನು ನಿಯಂತ್ರಿಸಲು ಸಾಧ್ಯಗಿಲ್ಲ, ಅದಕ್ಕಾಗಿಯೇ ಅವರು ನನ್ನ ಸರ್ಕಾರವನ್ನು ಧ್ವಂಸ ಮಾಡಲು ಪ್ರಯತ್ನಿಸುತ್ತಿದ್ದಾರೆ" ಎಂದು ಹೇಳಿದ್ದಾರೆ.


    ಐಟಿ ನಿಯಮಗಳನ್ನು ಪಾಲಿಸದಿರುವುದು ಮತ್ತು ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕಡ್ಡಾಯವಾಗಿರುವ ಪ್ರಮುಖ ಸಿಬ್ಬಂದಿಯನ್ನು ನೇಮಿಸುವಲ್ಲಿ ವಿಫಲವಾದ ಕಾರಣ ಟ್ವಿಟರ್‌ ಭಾರತದಲ್ಲಿ ಕಾನೂನು ರಕ್ಷಣೆಯನ್ನು ಕಳೆದುಕೊಂಡಿದೆ. ಆದ್ದರಿಂದ ಈಗ ಟ್ವಿಟರ್‌‌ನಲ್ಲಿ ವ್ಯಕ್ತಿಯೊಬ್ಬರು ಯಾವುದೆ ಆಕ್ಷೇಪಾರ್ಹ ವಿಷಯಗಳನ್ನು ಹಾಕಿದರೆ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಟ್ವಿಟರ್‌ ಮೇಲೆ ಕೂಡಾ ಕ್ರಮ ಕೈಗೊಳ್ಳಬಹುದಾಗಿದೆ.


    ರಾಜ್ಯದಲ್ಲಿ ರಾಜಕೀಯ ಹಿಂಸಾಚಾರ ಮುಂದುವರೆಸಿದೆ ಎಂಬ ಬಿಜೆಪಿಯ ಆರೋಪಗಳ ಕುರಿತು ಬೆಳಕು ಚೆಲ್ಲಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, "ಇದು ಬಿಜೆಪಿಯ ಗಿಮಿಕ್ ಆಗಿದ್ದು, ಮಾಡಲ್ಪಟ್ಟ ಎಲ್ಲಾ ಆರೋಪಗಳು ಸಂಪೂರ್ಣವಾಗಿ ಆಧಾರರಹಿತ" ಎಂದು ಹೇಳಿದ್ದಾರೆ.


    ಇದನ್ನೂ ಓದಿ: ಪ್ರಧಾನಿ ಮೋದಿ ತನ್ನ ತಪ್ಪುಗಳನ್ನು ಒಪ್ಪಿ, ದೇಶವನ್ನು ಪುನರ್​ ನಿರ್ಮಿಸಲು ತಜ್ಞರಿಗೆ ಸಹಕರಿಸಬೇಕು; ರಾಹುಲ್ ಗಾಂಧಿ


    "ರಾಜ್ಯದಲ್ಲಿ ಈಗ ಯಾವುದೇ ರಾಜಕೀಯ ಹಿಂಸಾಚಾರಗಳು ನಡೆಯುತ್ತಿಲ್ಲ. ಒಂದು ಅಥವಾ ಎರಡು ವಿರಳ ಘಟನೆಗಳು ನಡೆದಿರಬಹುದು, ಆದರೆ ಅವುಗಳನ್ನು ರಾಜಕೀಯ ಹಿಂಸಾಚಾರದ ಘಟನೆಗಳೆಂದು ಹಣೆಪಟ್ಟಿ ಕಟ್ಟಲು ಸಾಧ್ಯವಿಲ್ಲ" ಎಂದು ಅವರು ಹೇಳಿದ್ದಾರೆ.


    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.

    Published by:MAshok Kumar
    First published: