ಪ್ರಚೋದನಕಾರಿ ಭಾಷಣ ಮಾಡಿದವರ ವಿರುದ್ಧ ಕ್ರಮದ ಬಗ್ಗೆ ಮಾಹಿತಿ; ಕೇಂದ್ರಕ್ಕೆ 1 ತಿಂಗಳ ಕಾಲಾವಕಾಶ; ಹೈಕೋರ್ಟ್
ಪರಿಸ್ಥಿತಿ ತಹಬದಿಗೆ ತರಲು ಕಂಡಲ್ಲಿ ಗುಂಡಿಗೆ ಆದೇಶ ಹೊರಡಿಸಲಾಗಿದೆ. ಈಶಾನ್ಯ ದೆಹಲಿಯಲ್ಲಿ 1 ತಿಂಗಳು 144 ಸೆಕ್ಷನ್ ಜಾರಿ ಮಾಡಲಾಗಿದೆ. ಇದರ ಜತೆಗೆ ದೆಹಲಿಯ ಹಲವೆಡೆ ಕರ್ಫ್ಯೂ ಹೇರಲಾಗಿದೆ. ಕಲ್ಲುತೂರಾಟ, ವಾಹನಗಳು ಮತ್ತು ಅಂಗಡಿ ಮುಂಗಟ್ಟುಗಳಿಗೆ ಬೆಂಕಿ, ಪರಸ್ಪರ ಗುಂಡಿನ ದಾಳಿಗಳಿಂದಾಗಿ ಇಡೀ ದೆಹಲಿಯಲ್ಲಿ ಪ್ರಕ್ಷ್ಯುಬ್ದ ಪರಿಸ್ಥಿತಿ ನೆಲೆಸಿದೆ.
news18-kannada Updated:February 27, 2020, 9:21 PM IST

ಅಮಿತ್ ಶಾ
- News18 Kannada
- Last Updated: February 27, 2020, 9:21 PM IST
ನವದೆಹಲಿ(ಫೆ.27): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಿಂಸಾಚಾರ ಸಂಭವಿಸುವಂತೆ ಪ್ರಚೋದನಕಾರಿ ಭಾಷಣಗಳನ್ನು ಮಾಡಿದವರ ವಿರುದ್ಧ ಕೈಗೊಂಡ ಕ್ರಮದ ಬಗ್ಗೆ ಒಂದು ತಿಂಗಳಲ್ಲಿ ವರದಿ ನೀಡಬೇಕೆಂದು ಇಲ್ಲಿನ ಹೈಕೋರ್ಟ್ ಆದೇಶಿಸಿದೆ. ಹೀಗೆ ಖಡಕ್ ಆದೇಶ ಹೊರಡಿಸಿ ಹೈಕೋರ್ಟ್ ನ್ಯಾಯಮೂರ್ತಿ ಎಸ್. ಮುರಳೀಧರ್ ನೇತೃತ್ವದ ನ್ಯಾಯಪೀಠ ಕೇಂದ್ರ ಸರ್ಕಾರಕ್ಕೆ ಒಂದು ತಿಂಗಳು ಕಾಲಾವಕಾಶ ನೀಡಿದೆ.
ಸಿಎಎ ಮತ್ತು ಎನ್ಆರ್ಸಿ ವಿರೋಧಿ ಗುಂಪುಗಳಿಂದ ಸಂಭವಿಸಿದ ಹಿಂಸಾಚಾರದಿಂದ ದೆಹಲಿಯಲ್ಲಿ ಇಲ್ಲಿಯವರೆಗೂ 38 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಸಾಯುವವರ ಸಂಖ್ಯೆ ಏರುತ್ತಲೇ ಇದೆ. 200ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಈ ಕುರಿತಂತೆ ಅಸಮಾಧಾನ ಹೊರಹಾಕಿದ ಜಸ್ಟೀಸ್ ಎಸ್. ಮುರಳೀಧರ್ ನೇತೃತ್ವದ ನ್ಯಾಯಪೀಠ ದೆಹಲಿ ಪೊಲೀಸರಿಗೆ ಛೀಮಾರಿ ಹಾಕಿದೆ. ಪ್ರಚೋದನಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ತರಾಟೆ ತೆಗೆದುಕೊಂಡಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಪರ-ವಿರೋಧ ಸಂಘರ್ಷದಲ್ಲಿ ಭುಗಿಲೆದ್ದ ಹಿಂಸಾಚಾರ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಸಂಘರ್ಷದಲ್ಲಿ ಬಲಿಯಾದವರ ಸಂಖ್ಯೆ ಏರುತ್ತಲೇ ಇದೆ. ಈ ನಡುವೆ ಹೈಕೋರ್ಟ್ ಆದೇಶದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 106 ಮಂದಿಯನ್ನು ಬಂಧಿಸಲಾಗಿದ್ದು, 18 ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ದೆಹಲಿ ಹಿಂಸಾಚಾರ; ಬೇಜವಾಬ್ದಾರಿ ಹೇಳಿಕೆ ನೀಡದಂತೆ ಇಸ್ಲಾಮಿಕ್ ಸಂಘಟನೆಗಳಿಗೆ ಸೂಚನೆ ನೀಡಿದ ಕೇಂದ್ರ ಸರ್ಕಾರ
ಹಿಂಸಾಚಾರದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ, ಗಾಯಗೊಂಡವರಿಗೆ ಚಿಕಿತ್ಸಾ ವೆಚ್ಚ ಭರಿಸಲಾಗುವುದು. ಮೃತಪಟ್ಟ ಪೊಲೀಸ್ ಕಾನ್ಸ್ಟೇಬಲ್ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಮತ್ತು ಕುಟುಂಬದ ಒಬ್ಬರಿಗೆ ಸರಕಾರಿ ನೌಕರಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಪರಿಸ್ಥಿತಿ ತಹಬದಿಗೆ ತರಲು ಕಂಡಲ್ಲಿ ಗುಂಡಿಗೆ ಆದೇಶ ಹೊರಡಿಸಲಾಗಿದೆ. ಈಶಾನ್ಯ ದೆಹಲಿಯಲ್ಲಿ 1 ತಿಂಗಳು 144 ಸೆಕ್ಷನ್ ಜಾರಿ ಮಾಡಲಾಗಿದೆ. ಇದರ ಜತೆಗೆ ದೆಹಲಿಯ ಹಲವೆಡೆ ಕರ್ಫ್ಯೂ ಹೇರಲಾಗಿದೆ. ಕಲ್ಲುತೂರಾಟ, ವಾಹನಗಳು ಮತ್ತು ಅಂಗಡಿ ಮುಂಗಟ್ಟುಗಳಿಗೆ ಬೆಂಕಿ, ಪರಸ್ಪರ ಗುಂಡಿನ ದಾಳಿಗಳಿಂದಾಗಿ ಇಡೀ ದೆಹಲಿಯಲ್ಲಿ ಪ್ರಕ್ಷ್ಯುಬ್ದ ಪರಿಸ್ಥಿತಿ ನೆಲೆಸಿದೆ.
ಸಿಎಎ ಮತ್ತು ಎನ್ಆರ್ಸಿ ವಿರೋಧಿ ಗುಂಪುಗಳಿಂದ ಸಂಭವಿಸಿದ ಹಿಂಸಾಚಾರದಿಂದ ದೆಹಲಿಯಲ್ಲಿ ಇಲ್ಲಿಯವರೆಗೂ 38 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಸಾಯುವವರ ಸಂಖ್ಯೆ ಏರುತ್ತಲೇ ಇದೆ. 200ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಈ ಕುರಿತಂತೆ ಅಸಮಾಧಾನ ಹೊರಹಾಕಿದ ಜಸ್ಟೀಸ್ ಎಸ್. ಮುರಳೀಧರ್ ನೇತೃತ್ವದ ನ್ಯಾಯಪೀಠ ದೆಹಲಿ ಪೊಲೀಸರಿಗೆ ಛೀಮಾರಿ ಹಾಕಿದೆ. ಪ್ರಚೋದನಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ತರಾಟೆ ತೆಗೆದುಕೊಂಡಿದೆ.
ಇದನ್ನೂ ಓದಿ: ದೆಹಲಿ ಹಿಂಸಾಚಾರ; ಬೇಜವಾಬ್ದಾರಿ ಹೇಳಿಕೆ ನೀಡದಂತೆ ಇಸ್ಲಾಮಿಕ್ ಸಂಘಟನೆಗಳಿಗೆ ಸೂಚನೆ ನೀಡಿದ ಕೇಂದ್ರ ಸರ್ಕಾರ
ಹಿಂಸಾಚಾರದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ, ಗಾಯಗೊಂಡವರಿಗೆ ಚಿಕಿತ್ಸಾ ವೆಚ್ಚ ಭರಿಸಲಾಗುವುದು. ಮೃತಪಟ್ಟ ಪೊಲೀಸ್ ಕಾನ್ಸ್ಟೇಬಲ್ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಮತ್ತು ಕುಟುಂಬದ ಒಬ್ಬರಿಗೆ ಸರಕಾರಿ ನೌಕರಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಪರಿಸ್ಥಿತಿ ತಹಬದಿಗೆ ತರಲು ಕಂಡಲ್ಲಿ ಗುಂಡಿಗೆ ಆದೇಶ ಹೊರಡಿಸಲಾಗಿದೆ. ಈಶಾನ್ಯ ದೆಹಲಿಯಲ್ಲಿ 1 ತಿಂಗಳು 144 ಸೆಕ್ಷನ್ ಜಾರಿ ಮಾಡಲಾಗಿದೆ. ಇದರ ಜತೆಗೆ ದೆಹಲಿಯ ಹಲವೆಡೆ ಕರ್ಫ್ಯೂ ಹೇರಲಾಗಿದೆ. ಕಲ್ಲುತೂರಾಟ, ವಾಹನಗಳು ಮತ್ತು ಅಂಗಡಿ ಮುಂಗಟ್ಟುಗಳಿಗೆ ಬೆಂಕಿ, ಪರಸ್ಪರ ಗುಂಡಿನ ದಾಳಿಗಳಿಂದಾಗಿ ಇಡೀ ದೆಹಲಿಯಲ್ಲಿ ಪ್ರಕ್ಷ್ಯುಬ್ದ ಪರಿಸ್ಥಿತಿ ನೆಲೆಸಿದೆ.