ಬೆಂಗಳೂರು (ಅ.12) ಪಕ್ಷ ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದ ಹಿನ್ನಲೆ ಕೇರಳದ ಜೆಡಿಎಸ್ ಘಟಕವನ್ನು ವಿಸರ್ಜಿಸಲಾಗಿದೆ. ಈ ಕುರಿತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿರುವ ಎಚ್ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ತಿಳಿಸಿದ್ದಾರೆ. ಕೇರಳದ ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಪರಾಗಿರುವ ಸಿಕೆ ನಾನು, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದರು. ಈ ಕುರಿತು ಕಾರಣಕೇಳಿ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು. ಆದರೆ, ಇದಕ್ಕೆ ಅವರಿಂದ ಉತ್ತರ ಬಂದಿಲ್ಲ. ಈ ಹಿನ್ನಲೆ ಈ ಕ್ರಮಕ್ಕೆ ಮುಂದಾಗಿರುವುದಾಗಿ ಅವರು ತಿಳಿಸಿದ್ದಾರೆ. ಇದೇ ವೇಳೆ ಸಚಿವ ಮ್ಯಾಥ್ಯು ಟಿ ಥಾಮಸ್ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
The existing state unit of Kerala Pradesh Janata Dal (Secular) has been dissolved with immediate effect.
The new ad-hoc committee of Kerala Pradesh Janata Dal (Secular) has been formed with former Minister and MLA Shri. Mathew T Thomas as its President. pic.twitter.com/mqdZN4sVKd
— H D Devegowda (@H_D_Devegowda) October 12, 2020
ಸಿಕೆ ನಾನು ರಾಜ್ಯ ಘಟಕವನ್ನು ಬಲಪಡಿಸುವ ಬದಲು ಅದಕ್ಕೆ ತದ್ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದ್ದು, ಪಕ್ಷ ರಚಿಸಿದ ಪ್ರಮುಖ ಸಮಿತಿಗಳನ್ನು ಸಂಪರ್ಕಿಸಿಲ್ಲ ಎಂದರು
ಇದೇ ವೇಳೆ ಜೋಸ್ ತೆಟ್ಟಾಯಿ, ಜಮೀಲ ಪ್ರಕಾಶಂ ಅವರನ್ನು ಉಪಾಧ್ಯಕ್ಷರನ್ನಾಗಿ , ಬೆನ್ನಿ ಮೂಂಜೇಲಿ, ವಿ. ಮುರುಗದಾಸ್, ಬಿಕೈ ಜೋಸೆರ್ಫ್ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ