ಅಂಡಮಾನ್ (ಜೂನ್ 27); ಬಾಂಗ್ಲಾದೇಶದ ಪ್ರಜೆಗಳಿಗೆ ವಾಸ್ತವ್ಯ ಪ್ರಮಾಣಪತ್ರಗಳನ್ನು ನೀಡಿದ ಆರೋಪದ ಮೇಲೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮಾಜಿ ಕೌನ್ಸಿಲರ್ರನ್ನು ಬಂಧಿಸಲಾಗಿದೆ. ಇದು ಮತದಾರರ ಗುರುತಿನ ಚೀಟಿ ಮತ್ತು ಇತರ ಭಾರತೀಯ ದಾಖಲೆಗಳನ್ನು ಪಡೆಯಲು ಸಹಾಯ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವೀಸಾ ಅವಧಿ ಮುಗಿದಿದ್ದರೂ ಬಾಂಗ್ಲಾದೇಶದ ನಯಾನ್ ಸರ್ಕಾರ್ ಮತ್ತು ಅವರ ಕುಟುಂಬ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ. ಮಾಜಿ ಕೌನ್ಸಿಲರ್ ಸಂಜಯ್ ಮೆಶಾಕ್ ಅವರು ನಯನ್ ಸರ್ಕಾರ್, ಅವರ ಸಹೋದರ ಮತ್ತು ಪೋಷಕರಿಗೆ ವಾಸ್ತವ್ಯ ಪ್ರಮಾಣಪತ್ರವನ್ನು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ನಿವಾಸ ಪ್ರಮಾಣಪತ್ರಗಳು ಮತದಾರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಪಡೆಯಲು ಅವರಿಗೆ ಸಹಾಯ ಮಾಡಿದೆ ಎಂದು ಪೊಲೀಸರು ಆರೋಪಿಸಿದ್ದಾರೆ. ಮಾನ್ಯ ದಾಖಲೆಗಳಿಲ್ಲದೆ ಭಾರತದಲ್ಲಿ ಅಕ್ರಮವಾಗಿ ಉಳಿದುಕೊಂಡಿದ್ದಕ್ಕಾಗಿ ಸರ್ಕಾರ್ನನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಸರ್ಕಾರ್ ಮತ್ತು ಅವರ ಕುಟುಂಬದ ಸದಸ್ಯರಿಗೆ ವಾಸ್ತವ್ಯ ಪ್ರಮಾಣಪತ್ರವನ್ನು ನೀಡಿದ ಆರೋಪದ ಮೇಲೆ ಮೆಶಾಕ್ರನ್ನೂ ಕೂಡ ಬಂಧಿಸಲಾಗಿದೆ.
ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಂಗ್ಲಾದೇಶಿಗರು ಕಾನೂನುಬಾಹಿರವಾಗಿ ದ್ವೀಪಗಳಲ್ಲಿ ಉಳಿದುಕೊಂಡಿದ್ದರೆ, ಆ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಿಗೆ ವಿನಂತಿ ಮಾಡಿದ್ದಾರೆ. ಮಾಹಿತಿ ನೀಡಿದವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದೂ ಅವರು ಭರವಸೆ ನೋಡಿದ್ದಾರೆ.
ಕೇಂದ್ರಾಡಳಿತ ಪ್ರದೇಶವಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಅಕ್ರಮವಾಗಿ ವಲಸೆ ಬಂದವರನ್ನು ತಡೆಗಟ್ಟಲು ಸಾರ್ವಜನಿಕರ ಸಹಕಾರ ಬಹಳ ಮುಖ್ಯ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ