ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್​ಗೆ ಫೇಸ್​ಬುಕ್ ನಿಷೇಧ

ರಾಜಾ ಸಿಂಗ್

ರಾಜಾ ಸಿಂಗ್

ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ತಮ್ಮ ಫೇಸ್ಬುಕ್​ನಲ್ಲಿ ದ್ವೇಷಪೂರಿತ ಪೋಸ್ಟ್ ಹಾಕಿದ್ದಾರೆಂದು ವಿಪಕ್ಷಗಳು ಆರೋಪ ಮಾಡಿದ ಬೆನ್ನಲ್ಲೇ ಶಾಸಕರ ಫೇಸ್​ಬುಕ್ ಅಕೌಂಟ್ ಅನ್ನು ತೆಗೆದುಹಾಕಲಾಗಿದೆ.

  • News18
  • 5-MIN READ
  • Last Updated :
  • Share this:

    ನವದೆಹಲಿ(ಸೆ. 03): ಭಾರತದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ಪರವಾಗಿ ಫೇಸ್​ಬುಕ್ ನೀತಿ ಅನುಸರಿಸುತ್ತಿದೆ ಎಂಬ ಆರೋಪಗಳು ದಟ್ಟವಾಗಿ ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಫೇಸ್​ಬುಕ್ ತೆಲಂಗಾಣದ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರನ್ನು ನಿಷೇಧಿಸಿದೆ. ಫೇಸ್​ಬುಕ್ ಮತ್ತು ಇನ್ಸ್​ಟಾಗ್ರಾಮ್​ನಲ್ಲಿ ರಾಜಾ ಸಿಂಗ್ ಅವರ ಖಾತೆಗಳನ್ನ ತೆಗೆದುಹಾಕಲಾಗಿದೆ. ಹಿಂಸಾಚಾರ ಮತ್ತು ದ್ವೇಷಕ್ಕೆ ಪ್ರಚೋದನೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಫೇಸ್​ಬುಕ್ ಈ ಕ್ರಮ ಕೈಗೊಂಡಿದೆ.


    “ಹಿಂಸಾಚಾರ ಮತ್ತು ದ್ವೇಷದಲ್ಲಿ ನಿರತರಾದವರು ಮತ್ತು ಅವುಗಳನ್ನ ಪ್ರಚೋದನೆ ಮಾಡಬಾರದು ಎಂಬ ನಮ್ಮ ನೀತಿಯನ್ನು ಉಲ್ಲಂಘಿಸಿದ ಕಾರಣಕ್ಕೆ ರಾಜಾ ಸಿಂಗ್ ಅವರನ್ನು ಫೇಸ್​ಬುಕ್​ನಿಂದ ನಿಷೇಧಿಸಿದ್ಧೇವೆ. ನಮ್ಮ ನೀತಿಯ ಉಲ್ಲಂಘನೆ ಮಾಡುವವರ ಮೇಲೆ ನಾವು ತೀವ್ರವಾಗಿ ನಿಗಾ ಇಡುವ ವ್ಯವಸ್ಥೆ ಹೊಂದಿದ್ದು, ಇದರ ಪರಿಣಾಮವಾಗಿ ಅವರ ಫೇಸ್​ಬುಕ್ ಖಾತೆಯನ್ನು ತೆಗೆದುಹಾಕಿದ್ದೇವೆ” ಎಂದು ಫೇಸ್​ಬುಕ್​ನ ವಕ್ತಾರರೊಬ್ಬರು ಹೇಳಿಕೆ ನೀಡಿದ್ದಾರೆ.


    ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್ ಸಿಎಂ ಆದಾಗಿನಿಂದ ಈವರೆಗೆ ಮಾಡಿರುವ ದಾನ ಎಷ್ಟು ಕೋಟಿ ಗೊತ್ತಾ?


    ಫೇಸ್​ಬುಕ್​ನ ಕಂಟೆಂಟ್ ಪಾಲಿಸಿ ಬಿಜೆಪಿಯ ಪರವಾಗಿ ಇದೆ ಎಂದು ಅಮೆರಿಕದ ವಾಲ್ ಸ್ಟ್ರೀಟ್ ಜರ್ನಲ್ ಪತ್ರಿಕೆ ಇತ್ತೀಚೆಗೆ ವರದಿಯೊಂದನ್ನು ಪ್ರಕಟಿಸಿತ್ತು. ಅದರಲ್ಲಿ ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ಅವರ ದ್ವೇಷಪೂರಿತ ಭಾಷಣವಿರುವ ಪೋಸ್ಟ್ ಅನ್ನ ಡಿಲೀಟ್ ಮಾಡಿಲ್ಲ ಎಂದು ಉದಾಹರಣೆಯಾಗಿ ಉಲ್ಲೇಖಿಸಿತ್ತು. ಆ ಬಳಿಕ ಈ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ವಾಗ್ದುದ್ಧವೇ ನಡೆಯುತ್ತಿದೆ.


    ಫೇಸ್​ಬುಕ್​ನ ಭಾರತ ವಿಭಾಗದಲ್ಲಿ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುವ ವ್ಯಕ್ತಿಯೊಬ್ಬರು ಬಹಿರಂಗವಾಗಿ ಬಿಜೆಪಗೆ ಬೆಂಬಲ ನೀಡುತ್ತಾರೆ ಎಂದೂ ವಿಪಕ್ಷಗಳು ಬೊಟ್ಟು ಮಾಡಿ ತೋರಿಸಿವೆ. ಆದರೆ, ವಿಪಕ್ಷಗಳ ಕೆಲ ನಾಯಕರ ಪ್ರಚೋದನಕಾರಿ ಹೇಳಿಕೆಗಳನ್ನ ಉಲ್ಲೇಖಿಸಿ ಬಿಜೆಪಿ ನಾಯಕರೂ ಕೂಡ ಫೇಸ್​ಬುಕ್ ಬಿಜೆಪಿ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಪ್ರತ್ಯಾರೋಪ ಮಾಡುತ್ತಿವೆ.


    ಕೇಂದ್ರದ ಮಾಹಿತಿ-ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಕೂಡ ಫೇಸ್​ಬುಕ್ ಮುಖ್ಯಸ್ಥ ಮಾರ್ಕ್ ಝುಕರ್​ಬರ್ಗ್ ಅವರಿಗೆ ಇತ್ತೀಚೆಗೆ ಪತ್ರ ಬರೆದು, ಫೇಸ್​ಬುಕ್​ನ ಉದ್ಯೋಗಿಗಳು ನಿರ್ದಿಷ್ಟ ರಾಜಕೀಯ ಪಕ್ಷಗಳ ವ್ಯಕ್ತಿಗಳಿಗೆ ಹೆಚ್ಚು ಮಣೆ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದರು.


    ಇದನ್ನೂ ಓದಿ: ಜಿಎಸ್‌ಟಿ ಪಾಲಿಗೆ ಒತ್ತಾಯಿಸಿ ಮೋದಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ, ಸಾಲ ಪಡೆಯಲು ಸಿದ್ದರಾದ ಯಡಿಯೂರಪ್ಪ


    ಇದರ ಮಧ್ಯೆ, ಇತ್ತೀಚೆಗೆ ಸಂಸದೀಯ ಸಮಿತಿಯೊಂದು ಈ ವಿಚಾರವಾಗಿ ಫೇಸ್​ಬುಕ್​ನ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿತ್ತು. ನಿನ್ನೆ ನಡೆದ ಸಭೆಯಲ್ಲಿ ಫೇಸ್​ಬುಕ್​ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಬಿಸಿ ಬಿಸಿ ಚರ್ಚೆಗಳಾದವು. ಸಮಿತಿಯಲ್ಲಿದ್ದ ಬಿಜೆಪಿ ಮತ್ತು ಬಿಜೆಪಿಯೇತರ ಸದಸ್ಯರು ಪರಸ್ಪರ ಆರೋಪ ಪ್ರತ್ಯಾರೋಪಗಳನ್ನ ಮಾಡಿದವು. ವಿಪಕ್ಷಗಳು ಶಾಸಕ ರಾಜಾ ಸಿಂಗ್, ಗೃಹ ಸಚಿವ ಅಮಿತ್ ಶಾ ಅವರ ಭಾಷಣಗಳನ್ನ ಉಲ್ಲೇಖಿಸಿದವು. ಬಿಜೆಪಿಯು ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಮತ್ತು ಕನ್ನಯ್ಯ ಕುಮಾರ್ ಅವರ ಹೇಳಿಕೆಗಳನ್ನ ಪ್ರಸ್ತಾಪಿಸಿ ಟೀಕಿಸಿತು.


    ಪ್ರಚೋದನಾತ್ಮಕ ಪೋಸ್ಟ್ ಬಗ್ಗೆ ದೂರು ನೀಡಿದಾಗ ಕ್ರಮ ತೆಗೆದುಕೊಳ್ಳುತ್ತೀರಿ. ನೀವೇ ಸ್ವಯಂಪ್ರೇರಿತವಾಗಿ ಎಷ್ಟು ಪ್ರಕರಣಗಳಲ್ಲಿ ಕ್ರಮ ತೆಗೆದುಕೊಂಡಿದ್ದೀರಿ ಎಂದು ಸಂಸದೀಯ ಸಮಿತಿಯಲ್ಲಿರುವ ಸಂಸದರು ಫೇಸ್​ಬುಕ್​ನ ಪ್ರತಿನಿಧಿಗಳನ್ನ ಕೇಳಿದರು. ಇದಕ್ಕೆ ಅವರು, ಸುಮೋಟೋ ಆಗಿ ಕ್ರಮ ತೆಗೆದುಕೊಂಡ ಪ್ರಕರಣಗಳ ಸಂಖ್ಯೆ ಇಟ್ಟುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.


    ಫೇಸ್​ಬುಕ್ ಸಾಮಾನ್ಯವಾಗಿ ಬಹುತೇಕ ಪ್ರಕರಣಗಳಲ್ಲಿ ದೂರು ಬಂದಾ ಮಾತ್ರ ಕ್ರಮ ತೆಗೆದುಕೊಳ್ಳುತ್ತದೆ. ಪೋಸ್ಟ್​ಗಳನ್ನ ಫ್ಲ್ಯಾಗ್ ಮಾಡುವ ಅವಕಾಶ ಎಲ್ಲರಿಗೂ ಇರುತ್ತದೆ. ಅದರ ಆಧಾರದ ಮೇಲೆ ಆ ಪೋಸ್ಟ್​ಗಳನ್ನ ಸ್ವಯಂ ಆಗಿ ಡಿಲೀಟ್ ಮಾಡಲಾಗುತ್ತದೆ. ಇನ್ನುಳಿದಂತೆ, ಒಂದು ಖಾತೆಯಿಂದ ಸತತವಾಗಿ ಫೇಸ್​ಬುಕ್ ನಿಯಮ ಉಲ್ಲಂಘನೆ ಆಗುತ್ತಿದ್ದ ಬಗ್ಗೆ ದೂರು ಬಂದರೆ ಅವರ ಖಾತೆಯನ್ನ ಸಂಸ್ಥೆ ಹಿಂಪಡೆಯುತ್ತದೆ.

    Published by:Vijayasarthy SN
    First published: