• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Afghanistan Crisis| ಅಫ್ಘನ್​ನಿಂದ ಮತ್ತಷ್ಟು ಭಾರತೀಯರ ರಕ್ಷಣೆ; 7 ಮಂದಿ ಕನ್ನಡಿಗರು ತಾಯ್ನಾಡಿಗೆ ವಾಪಸ್

Afghanistan Crisis| ಅಫ್ಘನ್​ನಿಂದ ಮತ್ತಷ್ಟು ಭಾರತೀಯರ ರಕ್ಷಣೆ; 7 ಮಂದಿ ಕನ್ನಡಿಗರು ತಾಯ್ನಾಡಿಗೆ ವಾಪಸ್

ಅಫ್ಘಾನ್​ನಿಂದ ರಕ್ಷಿಸಲ್ಪಟ್ಟ ಭಾರತೀಯ ನಾಗರಿಕರು (File Photo)

ಅಫ್ಘಾನ್​ನಿಂದ ರಕ್ಷಿಸಲ್ಪಟ್ಟ ಭಾರತೀಯ ನಾಗರಿಕರು (File Photo)

ಕಾಬೂಲ್​ನಿಂದ ತಜಿಕಿಸ್ತಾನದ ದುಶಾನಬೆಗೆ ಸಾಗಿಸಲಾಗಿದ್ದ 87 ಮಂದಿಯನ್ನ ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ. ಇನ್ನೂ ಈ ಪೈಕಿ 7 ಜನ ಕನ್ನಡಿಗರನ್ನೂ ಸಹ ರಕ್ಷಿಸಲಾಗಿದ್ದು, ಎಲ್ಲರೂ ಸುರಕ್ಷಿತವಾಗಿ ಮರಳಿದ್ದಾರೆ ಎಂದು ತಿಳಿದುಬಂದಿದೆ.

  • Share this:

ನವ ದೆಹಲಿ (ಆಫ್ಘನ್ 22); ತಾಲಿಬಾನ್ ಅಧಿಕಾರಕ್ಕೆ ಬರುತ್ತಲೇ ಅಫ್ಘಾನಿಸ್ತಾನ ದಿಂದ ಹೊರಹೋಗಲು ಸಾವಿರಾರು ಜನರು ಪ್ರಯತ್ನಿಸುತ್ತಿದ್ದಾರೆ. ಭಾರತ, ಅಮೆರಿಕ ಸೇರಿದಂತೆ ವಿವಿಧ ದೇಶಗಳು ತಮ್ಮ ನಾಗರಿಕರನ್ನು ಅಫ್ಘಾನಿಸ್ತಾನದಿಂದ ವಾಪಸ್ ಕರೆಸಿಕೊಳ್ಳುವ ಪ್ರಯತ್ನದಲ್ಲಿವೆ. ಭಾರತ ವಿವಿಧ ರೀತಿಯಲ್ಲಿ ತನ್ನ ನಾಗರಿಕರನ್ನ ಅಲ್ಲಿಂದ ತೆರವುಗೊಳಿಸಿ ವಾಪಸ್ ಕರೆಸಿಕೊಳ್ಳುತ್ತದೆ. ನೇಪಾಳದ ಇಬ್ಬರು ನಾಗರಿಕರು ಸೇರಿ 390 ಜನರನ್ನ ಭಾರತದ ಮಿಲಿಟರಿ ವಿಮಾನಗಳು ಆಫ್ಘಾನಿಸ್ತಾನದಿಂದ ಇಂದು ಕರೆ ತಂದಿವೆ. ಇವರೆಲ್ಲಾ ದೆಹಲಿ ಬಳಿಯ ಹಿಂದೋನ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಕಾಬೂಲ್ ವಿಮಾನ ನಿಲ್ದಾಣದಿಂದ 168 ಮಂದಿಯನ್ನ ಕರೆತರಲಾಗಿದೆ. 135 ಮಂದಿಯನ್ನ ಕತಾರ್​ನ ರಾಜಧಾನಿ ದೋಹಾಗೆ ಸಾಗಿಸಿ ಅಲ್ಲಿಂದ ಭಾರತಕ್ಕೆ ತರಲಾಗಿದೆ. ಇನ್ನು, ಕಾಬೂಲ್​ನಿಂದ ತಜಿಕಿಸ್ತಾನದ ದುಶಾನಬೆಗೆ ಸಾಗಿಸಲಾಗಿದ್ದ 87 ಮಂದಿಯನ್ನ ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ. ಇನ್ನೂ ಈ ಪೈಕಿ 7 ಜನ ಕನ್ನಡಿಗರನ್ನೂ ಸಹ ರಕ್ಷಿಸಲಾಗಿದ್ದು, ಎಲ್ಲರೂ ಸುರಕ್ಷಿತವಾಗಿ ಮರಳಿದ್ದಾರೆ ಎಂದು ತಿಳಿದುಬಂದಿದೆ.


ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ಗಳಿಂದ ಘರ್ಷಣೆ ಆರಂಭವಾದ ವೇಳೆ ಕನ್ನಡಿಗರೂ ಸಹ ಕಾಬೂಲ್​ನಲ್ಲಿ ಸಿಲುಕಿದ್ದರು. ಕಳೆದ ಭಾನುವಾರವೇ 2 ಸೇನಾ ವಿಮಾನವನ್ನು ಕಾಬೂಲ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಳುಹಿಸಿದ್ದ ಭಾರತ ಸರ್ಕಾರ ರಾಯಭಾರಿ ಕಚೇರಿ ಅಧಿಕಾರಿಗಳು ಸೇರಿದಂತೆ ಸುಮಾರು 200ಕ್ಕೂ ಹೆಚ್ಚು ಜನರನ್ನು ರಕ್ಷಿಸಿತ್ತು. ಇದರಲ್ಲಿ ಅನೇಕರು ಕನ್ನಡಿಗರೂ ಸಹ ಇದ್ದರು. ಇದೀಗ ಇಂದೂ ಸಹ ಅಫ್ಘಾನಿಸ್ತಾನದಿಂದ ರಕ್ಷಿಸಲ್ಪಟ್ಟವರಲ್ಲಿ 7 ಜನ ಕನ್ನಡಿಗರಿದ್ದಾರೆ ಎಂದು ತಿಳಿದುಬಂದಿದೆ.


ದಿನೇಶ್ ರೈ , ಜಗದೀಶ್ ಪೂಜಾರಿ, ಡಿಸೋಜ ಸೇರಿ ಮತ್ತೆ ಐವರನ್ನು ರಕ್ಷಿಸಲಾಗಿದ್ದು, ಈ ಎಲ್ಲರೂ ಮಂಗಳೂರು ಮೂಲದ ನಿವಾಸಿಗಳು ಎನ್ನಲಾಗಿದೆ. ಇವರು ಕಾಬೂಲ್ ಏರ್‌ಪೋರ್ಟ್ ನಲ್ಲಿ ಒಎಸ್​ಎಸ್​ ಎಂಬ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸ್ತಿದ್ದರು. ಆದರೆ, ಕಾಬೂಲ್ ದೀಢಿರೆಂದು ತಾಲಿಬಾನಿಗಳ ವಶವಾಶ ಕಾರಣ ವಿಚಲಿತರಾಗಿದ್ದರು. ಆದರೆ, ಇದೀಗ ಇವರನ್ನೂ ಸಹ ರಕ್ಷಿಸುವಲ್ಲಿ ಭಾರತ ಸರ್ಕಾರ ಯಶಸ್ವಿಯಾಗಿದೆ.


ಇದನ್ನೂ ಓದಿ: ರಕ್ಷಾ ಬಂಧನದ ವಿಶೇಷ: ಭಾರತದ ರಾಜಕಾರಣದ ಪ್ರಮುಖ 5 ಅಣ್ಣ- ತಂಗಿಯರು ಇವರು...!


ಅಫ್ಘಾನಿಸ್ತಾನದಿಂದ ರಕ್ಷಿಸಲ್ಪಟ್ಟ ಎಲ್ಲರನ್ನೂ ವಿಮಾನ ನಿಲ್ದಾಣದಲ್ಲಿ ಆರ್​ಟಿ ಪಿಸಿಆರ್ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದ್ದು, ಅದರ ರಿಪೋರ್ಟ್ ಬಂದ ಬಳಿಕ ಅವರ ಊರುಗಳಿಗೆ ಕಳುಹಿಸಲು ಸಿದ್ದತೆ ನಡೆಸಲಾಗುತ್ತಿದೆ. ಭಾಹಶಃ ನಾಳೆ ಕೊರೋನಾ ವರದಿ ಸಿಗುವ ಸಾಧ್ಯತೆ ಇದ್ದು, ನಾಳೆಯೇ ಎಲ್ಲರೂ ದೆಹಲಿಯಿಂದ ಕರ್ನಾಟಕಕ್ಕೆ ಕರೆತರುವ ಸಾಧ್ಯತೆ ಇದೆ ಎಂದು ಎಂಇಎಯಿಂದ ಕರ್ನಾಟಕ ನೋಡಲ್ ಅಧಿಕಾರಿಗೆ ಮಾಹಿತಿ‌ ರವಾನೆಯಾಗಿದೆ ಎನ್ನಲಾಗಿದೆ.


ಇದಲ್ಲದೆ, ಮತ್ತೊಬ್ಬ ಕನ್ನಡಿಗ ಸದ್ಯ ಕಾಬೂಲ್ ಏರ್ ಪೋರ್ಟ್ ನಲ್ಲೇ ಸಿಲುಕಿದ್ದು, ಶೀಘ್ರದಲ್ಲೇ ಆತನನ್ನೂ ರಕ್ಷಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಬ್ಬ ಕನ್ನಡಿಗ ಕಾಬೂಲ್ ನಿಂದ ಇಟಲಿಗೆ ಪ್ರಯಾಣ ಮಾಡಿದ್ದಾರೆ ಎಂದೂ ತಿಳಿದುಬಂದಿದೆ.


ಇದನ್ನೂ ಓದಿ: Caste-Based Census| ಜಾತಿ ಆಧಾರಿತ ಜನಗಣತಿ ಒಮ್ಮೆ ನಡೆಯಬೇಕು, ಇದರಿಂದ ಜನರಿಗೆ ಪ್ರಯೋಜನವಾಗಲಿದೆ; ನಿತೀಶ್ ಕುಮಾರ್

ಈ ನಡುವೆ ಅಫ್ಘಾನಿಸ್ತಾನದ ಅಲ್ಪಸಂಖ್ಯಾತ ಸಮುದಾಯದ ಪ್ರಜೆಗಳಿಗೂ ಭಾರತಕ್ಕೆ ಬರಲು ಅವಕಾಶ ನೀಡಲಾಗಿದೆ. ಹಲವು ಆಫ್ಘನ್ ಸಿಖ್ ಮತ್ತು ಹಿಂದೂಗಳು ಭಾರತಕ್ಕೆ ಬರಲು ಹಾತೊರೆಯುತ್ತಿದ್ದಾರೆ. ಆದರೆ, ತಾವೆಲ್ಲರೂ ಅಫ್ಘನ್ನರಾಗಿರುವುದಿರಂದ ಭಾರತಕ್ಕೆ ಹೋಗದಿರಿ ಎಂದು ತಾಲಿಬಾನ್ ತಾಕೀತು ಮಾಡುತ್ತಿದೆ ಎಂದೂ ವರದಿಯಾಗಿದೆ.


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

top videos
    First published: