news18-kannada Updated:January 27, 2021, 4:21 PM IST
Sourav Ganguly
ಕೋಲ್ಕತ್ತ: ಭಾರತ ಕ್ರಿಕೆಟ್ ತಂಡ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಇಂದು ಮತ್ತೆ ಎದೆನೋವು ಕಾಣಿಸಿಕೊಂಡ ಪರಿಣಾಮ ಇಂದು ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕುಟುಂಬ ಸದಸ್ಯರು ನೀಡಿರುವ ಮಾಹಿತಿಯ ಪ್ರಕಾರ ಬುಧವಾರ ಬೆಳಗ್ಗೆ ಸೌರವ್ ಗಂಗೂಲಿ ಅವರಿಗೆ ಸಣ್ಣ ಪ್ರಮಾಣದ ಎದೆ ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಕೋಲ್ಕತ್ತಾದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಮಂಗಳವಾರ ಸಂಜೆ ಗಂಗೂಲಿ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಆ ಬಳಿಕ ಮತ್ತೆ ಬುಧವಾರ ಬೆಳಿಗ್ಗೆ ಸಣ್ಣ ಪ್ರಮಾಣದಲ್ಲಿ ಎದೆ ನೋವು ಕಾಣಿಸಿಕೊಂಡಿದೆ. ಹಾಗಾಗಿ ಅವರನ್ನು ಇಂದು ಕೋಲ್ಕತ್ತದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಅವರನ್ನು ಐಸಿಯುನಲ್ಲಿ ಇರಿಸಲಾಗಿದ್ದು, ವೈದ್ಯರಾದ ಅಫ್ತಬ್ ಖಾನ್ ಮತ್ತು ಸರೋಜ್ ಮಂಡಲ್ ಅವರು ಗಂಗೂಲಿ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದಾರೆ.
ಮಧ್ಯಾಹ್ನ ಸುಮಾರು 2.45ರಲ್ಲಿ ಸೌರವ್ ಗಂಗೂಲಿ ಅವರನ್ನು ಗ್ರೀನ್ ಕಾರಿಡಾರ್ ಮೂಲಕ ಅಪೋಲೊ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವೇಳೆ ಗಂಗೂಲಿ ಆಗಮನಕ್ಕಾಗಿ ವೈದ್ಯರ ತಂಡ ಕಾಯುತ್ತಿತ್ತು. ಆಸ್ಪತ್ರೆಗೆ ಬಂದ ಗಂಗೂಲಿ ಸ್ಟ್ರಚ್ಚರ್ ನಿರಾಕರಿಸಿ, ಆಸ್ಪತ್ರೆ ಒಳಗೆ ಅವರೇ ನಡೆದುಕೊಂಡು ಹೋದರು.
ಇದನ್ನು ಓದಿ: Sourav Ganguly: ಆಸ್ಪತ್ರೆಯಿಂದ ಸೌರವ್ ಗಂಗೂಲಿ ಬಿಡುಗಡೆ; ಚಿಕಿತ್ಸೆ ನೀಡಿದ ವೈದ್ಯರಿಗೆ-ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ ದಾದ
ಕಳೆದ ತಿಂಗಳು ಲಘು ಹೃದಯಾಘಾತಕ್ಕೆ ಒಳಗಾಗಿದ್ದ ಸೌರವ್ ಗಂಗೂಲಿ ಅವರಿಗೆ ಸ್ಟಂಟ್ಸ್ಗಳನ್ನು ಅಳವಡಿಸಲಾಗಿತ್ತು. ಉಳಿದ ಹೃದಯನಾಳಗಳಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಮತ್ತೊಮ್ಮೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ಮಾಡಿಸಿಕೊಳ್ಳಲು ಸಲಹೆ ನೀಡಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಬಳಿಕ ಜನವರಿ 7ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.
ಸೌರವ್ ಗಂಗೂಲಿ ಆರೋಗ್ಯ ಬೇಗ ಚೇತರಿಕೆ ಕಾಣಲಿ ಎಂದು ಕ್ರಿಕೆಟಿಗ ಶಿಖರ್ ದವನ್ ಹಾಗೂ ಮಹಿಳಾ ಆಟಗಾರ್ತಿ ಮಿಥಾಲಿ ರಾಜ್ ಸೇರಿ ಹಲವು ಮಂದಿ ಟ್ವೀಟ್ ಮಾಡಿದ್ದಾರೆ.
Published by:
HR Ramesh
First published:
January 27, 2021, 4:21 PM IST