ಪಾಟ್ನಾ (ನವೆಂಬರ್ 23); ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಚುನಾವಣಾ ಪ್ರಚಾರದ ವೇಳೆ ತಾವು ನೀಡಿದ ಆಶ್ವಾಸನೆಯಂತೆ ಬಿಹಾರದ ಯುವಕರಿಗೆ 19 ಲಕ್ಷ ಉದ್ಯೋಗಗಳನ್ನು ಸೃಷ್ಟಿಸದಿದ್ದರೆ, ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ವಿಪಕ್ಷ ನಾಯಕ ಹಾಗೂ ಆರ್ಜೆಡಿ ಮುಖಂಡ ತೇಜಸ್ವಿ ಯಾದವ್ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಮುಕ್ತಾಯವಾಗಿದ್ದ ಬಿಹಾರದ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಮತ್ತೊಮ್ಮೆ ಭರ್ಜರಿ ಗೆಲುವು ಸಾಧಿಸಿತ್ತು. ನಿತೀಶ್ ಕುಮಾರ್ ಮತ್ತೊಂದು ಅವಧಿಗೆ ಇದೀದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿದ್ದಾರೆ. ಆದರೆ, ಚುನಾವಣಾ ಸಂದರ್ಭದಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದ ಎನ್ಡಿಎ ಮೈತ್ರಿಕೂಟ ತಾನು ಗೆದ್ದರೆ ಮೊದಲ ತಿಂಗಳಿನಲ್ಲೇ 19 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಭರವಸೆ ನೀಡಿತ್ತು. ಇದೀಗ ಆ ಭರವಸೆ ಈಡೇರಿಕೆಯಾಗಿ ಯುವ ನಾಯಕ ತೇಜಸ್ವಿ ಯಾದವ್ ಒತ್ತಾಯಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿರುವ ತೇಜಸ್ವಿ ಯಾದವ್, "ಚುನಾವಣಾ ಸಂದರ್ಭದಲ್ಲಿ ತಾವು ಗೆದ್ದರೆ ಮೊದಲ ತಿಂಗಳಲ್ಲೇ 19 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುತ್ತೇವೆ ಎಂದು ಎನ್ಡಿಎ ಮೈತ್ರಿಕೂಟ ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಹ ಎಲ್ಲೆಡೆ ಇದನ್ನೇ ಪುನರುಚ್ಚರಿಸಿದ್ದರು. ಹೀಗಾಗಿ ಈ ಭರವಸೆಯನ್ನು ನಾನು ಅವರಿಗೆ ಮತ್ತೊಮ್ಮೆ ನೆನಪಿಸುತ್ತಿದ್ದೇನೆ.
Bihar has become the unemployment capital of the country. The public can't wait anymore. If they are unable to provide 19 lakh jobs in the first month, then we will join the public in protests across the state: Tejashwi Yadav, RJD Leader pic.twitter.com/FYh4aLflZk
— ANI (@ANI) November 23, 2020
ಇದನ್ನೂ ಓದಿ : ಬಹುಕಾಲದ ಅನಾರೋಗ್ಯದಿಂದಾಗಿ ಅಸ್ಸಾಂ ರಾಜ್ಯದ ಮಾಜಿ ಸಿಎಂ ತರುಣ್ ಗೊಗೋಯ್ ನಿಧನ
ಕೊರೋನಾ ಸಾಂಕ್ರಾಮಿಕ ಖಾಯಿಲೆಯ ನಡುವೆಯೂ ಬಿಹಾರದಲ್ಲಿ ನಡೆದ ಬಹುನಿರೀಕ್ಷಿತ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಭರ್ಜರಿ ಗೆಲುವು ದಾಖಲಿಸುವಲ್ಲಿ ಸಫಲವಾಗಿತ್ತು. ಆದರೆ, ಮೊದಲ ಬಾರಿಗೆ ಗೆಲ್ಲುವ ವಿಶ್ವಾಸದಲ್ಲಿದ್ದ ಆರ್ಜೆಡಿ-ಕಾಂಗ್ರೆಸ್ ಮೈತ್ರಿಯ ಮಹಾಘಟಬಂಧನ್ ಗೆಲ್ಲುವ ಸನಿಹದಲ್ಲಿ ಸೋಲಿಗೆ ಶರಣಾಗಿತ್ತು. ಚುನಾವಣೋತ್ತರ ಎಲ್ಲಾ ಸಮೀಕ್ಷೆಗಳೂ ಮಹಾಘಟಬಂಧನ್ ಗೆಲುವು ನಿಶ್ಚಿತ ಎಂದು ತೀರ್ಪು ನೀಡಿದ್ದರೂ ಸಹ ಸಮೀಕ್ಷೆಗಳೆಲ್ಲವೂ ಸುಳ್ಳಾಗಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ