ಬಿಜಾಪುರ (ಏಪ್ರಿಲ್ 08): ಕಳೆದ ವಾರ ಛತ್ತೀಸಗಢದ ಸುಕ್ಮಾ ಹಾಗೂ ಬಿಜಾಪುರ ಜಿಲ್ಲೆಯ ಗಡಿಯಲ್ಲಿ ಭದ್ರತಾ ಪಡೆ ಹಾಗೂ ಮಾವೋವಾದಿಗಳ ನಡುವೆ ಮಾರಕ ಎನ್ಕೌಂಟರ್ ನಡೆದಿತ್ತು. ಈ ಎನ್ಕೌಂಟರ್ನಲ್ಲಿ 22 ಮಂದಿ ಸೈನಿಕರು ಸಾವನ್ನಪ್ಪಿದ್ದರು. ಸುಮಾರು ಮೂರು ಗಂಟೆಗಳ ಕಾಲ ನಡೆದ ಎನ್ಕೌಂಟರ್ ಕಾರ್ಯಾಚರಣೆಯ ನಂತರ ಸಿಆರ್ಪಿಎಫ್ ಕಮಾಂಡೋ ರಾಕೇಶ್ವರ ಸಿಂಗ್ ಮನ್ಹಾಸ್ ಅವರನ್ನು ಮಾವೋವಾದಿಗಳು ಅಪಹರಿಸಿದ್ದರು. 100 ಗಂಟೆಗಳಿಗೂ ಹೆಚ್ಚು ಕಾಲ ಸೆರೆಯಲ್ಲಿದ್ದ ಯೋಧನನ್ನು ಇಂದು ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಗುರುವಾರ ತಿಳಿಸಿದೆ.
Chhattisgarh: CoBRA jawan Rakeshwar Singh Manhas brought to CRPF camp, Bijapur after he was released by Naxals pic.twitter.com/L1FKSCtVnb
— ANI (@ANI) April 8, 2021
ಸುಮಾರು 2,000 ಭದ್ರತಾ ಸಿಬ್ಬಂದಿಗಳು ಛತ್ತೀಸ್ಗಢ ರಾಜ್ಯದ ಬಿಜಾಪುರ ಜಿಲ್ಲೆಯಲ್ಲಿ ಮಾವೋವಾದಿ ಬಂಡಾಯ ನಾಯಕನ ಹುಡುಕಾಟದಲ್ಲಿದ್ದರು. ಈ ವೇಳೆ ಎನ್ಕೌಂಟರ್ ನಡೆದಿತ್ತು. ಘಟನೆಯಲ್ಲಿ ಸಾವನ್ನಪ್ಪಿದ್ದ ಭದ್ರತಾ ಪಡೆಗಳ ಯೋಧರಿಂದ ಶಸ್ತ್ರಾಸ್ತ್ರ, ಮದ್ದುಗುಂಡು, ಸಮವಸ್ತ್ರ ಮತ್ತು ಬೂಟುಗಳನ್ನು ಮಾವೋವಾದಿಗಳು ಲೂಟಿ ಮಾಡಿದರು.
ಇದನ್ನೂ ಓದಿ: ಮಾವೋವಾದಿಗಳ ಸೆರೆಯಾಳಾಗಿದ್ದಾರೆ ಸಿಆರ್ಪಿಎಫ್ ಕಮಾಂಡೋ; ಸ್ಥಳೀಯ ಪತ್ರಕರ್ತರು ಹೇಳಿದ್ದೇನು?
ಮಾವೋವಾದಿಗಳು ತಮ್ಮ ಹೇಳಿಕೆಯಲ್ಲಿ, ’ನಮ್ಮ ಹೋರಾಟವು ಭದ್ರತಾ ಸಿಬ್ಬಂದಿಯೊಂದಿಗೆ ಅಲ್ಲ, ಮೋದಿ-ಶ ಸರ್ಕಾರದ ಆದೇಶದ ಮೇರೆಗೆ ಪಡೆಗಳು ಪ್ರಾರಂಭಿಸಿದ ದಾಳಿಗೆ ತಾವು ಪ್ರತೀಕಾರ ತೀರಿಸಿಕೊಳ್ಳುತ್ತಿದ್ದೇವೆ ಎಂದು ಹೇಳಿಕೊಂಡಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ